ಬ್ರೇಕಿಂಗ್ ನ್ಯೂಸ್
22-08-23 10:29 pm HK News Desk ಕರಾವಳಿ
ಬಂಟ್ವಾಳ, ಆಗಸ್ಟ್ 22: ವಿಟ್ಲ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಪುತ್ತೂರಿನಲ್ಲಿ ಪತ್ತೆ ಮಾಡಿದ್ದಾರೆ.
ನಿನ್ನೆ ಬೆಳಗ್ಗೆ ಹಾಸ್ಟೆಲಿನಿಂದ ದೀಕ್ಷಿತ್ (15) ಮತ್ತು ಗಗನ್ (14) ಎಂಬ ಇಬ್ಬರು ವಿದ್ಯಾರ್ಥಿಗಳು ಶಾಲೆಗೆಂದು ತೆರಳಿದ್ದರು. ಸಂಜೆ 4.30ಕ್ಕೆ ಹಾಸ್ಟೆಲಿಗೆ ಮರಳದೇ ಇದ್ದುದರಿಂದ ಇತರ ಮಕ್ಕಳಲ್ಲಿ ಕೇಳಿದಾಗ, ಅವರಿಬ್ಬರು ಶಾಲೆಗೆ ಬಂದಿಲ್ಲ ಎನ್ನುವುದು ತಿಳಿದುಬಂದಿತ್ತು. ಮಕ್ಕಳಿಬ್ಬರು ಶಾಲೆಗೆ ಬಾರದೆ ಎಲ್ಲಿ ಹೋಗಿದ್ದಾರೆಂದು ಗಾಬರಿಗೊಂಡ ಶಾಲೆಯ ವಾರ್ಡನ್ ಸೇರಿದಂತೆ ಇತರ ಸಿಬಂದಿ ಅಕ್ಕ ಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ.
ಆನಂತರ ವಿಟ್ಲ ಠಾಣೆಯಲ್ಲಿ ಇಬ್ಬರು ಬಾಲಕರ ನಾಪತ್ತೆ ಬಗ್ಗೆ ದೂರು ದಾಖಲಿಸಲಾಗಿತ್ತು. ಬಾಲಕರಿಬ್ಬರು ನಿನ್ನೆ ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದಾಗ ಪತ್ತೆಯಾಗಿದ್ದಾರೆ. ಸಾರ್ವಜನಿಕರು ಬಾಲಕರಿಬ್ಬರನ್ನು ನೋಡಿ ಪ್ರಶ್ನೆ ಮಾಡದಾಗ, ಚಿತ್ರದುರ್ಗಕ್ಕೆ ಹೋಗಬೇಕು, ಹಣ ಇಲ್ಲದೆ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದೇವೆ ಎಂದು ತಿಳಿಸಿದ್ದರು. ಬಳಿಕ ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನಿಜ ವಿಚಾರ ತಿಳಿಸಿದ್ದಾರೆ.
ಆಗಸ್ಟ್ 21ರ ಬೆಳಗ್ಗೆ ಹಾಸ್ಟೆಲಿನಿಂದ ವಿಟ್ಲಕ್ಕೆ ಅಲ್ಲಿಂದ ಪುತ್ತೂರಿಗೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ಪುತ್ತೂರು ತಲುಪಿದಾಗ, ಚಿತ್ರದುರ್ಗಕ್ಕೆ ಹೋಗುವ ಬಸ್ಸಿಗೆ ತೆರಳಲು ಕೈಯಲ್ಲಿ ಕಾಸಿಲ್ಲದಾಗಿತ್ತು. ಹಾಗಾಗಿ ನಿಲ್ದಾಣದಲ್ಲಿಯೇ ಕುಳಿತುಕೊಂಡಿದ್ದರು. ಮನೆಯವರನ್ನು ನೋಡುವುದಕ್ಕಾಗಿ ಚಿತ್ರದುರ್ಗಕ್ಕೆ ಹೊರಟಿದ್ದೇವೆಂದು ಪೊಲೀಸರಲ್ಲಿ ತಿಳಿಸಿದ್ದಾರೆ. ಇಬ್ಬರು ಬಾಲಕರನ್ನೂ ಪೋಷಕರಿಗೆ ಮಾಹಿತಿ ನೀಡಿ ಮತ್ತೆ ಹಾಸ್ಟೆಲಿಗೆ ಸೇರಿಸಲಾಗಿದೆ.
Missing minor youths from Vitla found at Puttur in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm