ಬ್ರೇಕಿಂಗ್ ನ್ಯೂಸ್
22-08-23 10:29 pm HK News Desk ಕರಾವಳಿ
ಬಂಟ್ವಾಳ, ಆಗಸ್ಟ್ 22: ವಿಟ್ಲ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಪುತ್ತೂರಿನಲ್ಲಿ ಪತ್ತೆ ಮಾಡಿದ್ದಾರೆ.
ನಿನ್ನೆ ಬೆಳಗ್ಗೆ ಹಾಸ್ಟೆಲಿನಿಂದ ದೀಕ್ಷಿತ್ (15) ಮತ್ತು ಗಗನ್ (14) ಎಂಬ ಇಬ್ಬರು ವಿದ್ಯಾರ್ಥಿಗಳು ಶಾಲೆಗೆಂದು ತೆರಳಿದ್ದರು. ಸಂಜೆ 4.30ಕ್ಕೆ ಹಾಸ್ಟೆಲಿಗೆ ಮರಳದೇ ಇದ್ದುದರಿಂದ ಇತರ ಮಕ್ಕಳಲ್ಲಿ ಕೇಳಿದಾಗ, ಅವರಿಬ್ಬರು ಶಾಲೆಗೆ ಬಂದಿಲ್ಲ ಎನ್ನುವುದು ತಿಳಿದುಬಂದಿತ್ತು. ಮಕ್ಕಳಿಬ್ಬರು ಶಾಲೆಗೆ ಬಾರದೆ ಎಲ್ಲಿ ಹೋಗಿದ್ದಾರೆಂದು ಗಾಬರಿಗೊಂಡ ಶಾಲೆಯ ವಾರ್ಡನ್ ಸೇರಿದಂತೆ ಇತರ ಸಿಬಂದಿ ಅಕ್ಕ ಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ.
ಆನಂತರ ವಿಟ್ಲ ಠಾಣೆಯಲ್ಲಿ ಇಬ್ಬರು ಬಾಲಕರ ನಾಪತ್ತೆ ಬಗ್ಗೆ ದೂರು ದಾಖಲಿಸಲಾಗಿತ್ತು. ಬಾಲಕರಿಬ್ಬರು ನಿನ್ನೆ ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದಾಗ ಪತ್ತೆಯಾಗಿದ್ದಾರೆ. ಸಾರ್ವಜನಿಕರು ಬಾಲಕರಿಬ್ಬರನ್ನು ನೋಡಿ ಪ್ರಶ್ನೆ ಮಾಡದಾಗ, ಚಿತ್ರದುರ್ಗಕ್ಕೆ ಹೋಗಬೇಕು, ಹಣ ಇಲ್ಲದೆ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದೇವೆ ಎಂದು ತಿಳಿಸಿದ್ದರು. ಬಳಿಕ ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನಿಜ ವಿಚಾರ ತಿಳಿಸಿದ್ದಾರೆ.
ಆಗಸ್ಟ್ 21ರ ಬೆಳಗ್ಗೆ ಹಾಸ್ಟೆಲಿನಿಂದ ವಿಟ್ಲಕ್ಕೆ ಅಲ್ಲಿಂದ ಪುತ್ತೂರಿಗೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ಪುತ್ತೂರು ತಲುಪಿದಾಗ, ಚಿತ್ರದುರ್ಗಕ್ಕೆ ಹೋಗುವ ಬಸ್ಸಿಗೆ ತೆರಳಲು ಕೈಯಲ್ಲಿ ಕಾಸಿಲ್ಲದಾಗಿತ್ತು. ಹಾಗಾಗಿ ನಿಲ್ದಾಣದಲ್ಲಿಯೇ ಕುಳಿತುಕೊಂಡಿದ್ದರು. ಮನೆಯವರನ್ನು ನೋಡುವುದಕ್ಕಾಗಿ ಚಿತ್ರದುರ್ಗಕ್ಕೆ ಹೊರಟಿದ್ದೇವೆಂದು ಪೊಲೀಸರಲ್ಲಿ ತಿಳಿಸಿದ್ದಾರೆ. ಇಬ್ಬರು ಬಾಲಕರನ್ನೂ ಪೋಷಕರಿಗೆ ಮಾಹಿತಿ ನೀಡಿ ಮತ್ತೆ ಹಾಸ್ಟೆಲಿಗೆ ಸೇರಿಸಲಾಗಿದೆ.
Missing minor youths from Vitla found at Puttur in Mangalore.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm