ಬ್ರೇಕಿಂಗ್ ನ್ಯೂಸ್
22-08-23 11:00 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ ಹೇಳಿದ್ದ. ನಾನು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್. ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದೆ. ಈಗ ಅಲ್ಲಿನ ಕುಟುಂಬದ ಹುಡುಗಿ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಮನೆಗೆ ಕರೆದು ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿ ಜೊತೆಗೆ ಸಂಬಂಧ ಇಲ್ಲ. ನಾನು ಈಗ ಪುತ್ತೂರಿಗೆ ಹೋಗಿ ಸಾವಿಗೆ ಶರಣಾಗುತ್ತೇನೆ. ನನ್ನ ಸಾವಿಗೆ ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಕಾರಣ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.
ಕುಟುಂಬದ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ, ಆಕೆಯ ಗಂಡನೇ ಈ ಕಾರಿನಲ್ಲಿದ್ದಾನೆ ಎಂದು ಹೇಳಿ ಜೊತೆಗಿದ್ದ ನಾಲ್ವರು ಯುವಕರನ್ನು ತೋರಿಸಿದ್ದಾನೆ. ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಸ್ಟಾಪ್ ಮಾಡಿದ್ದ. ಆನಂತರ ರಾತ್ರಿಯೇ ಪುತ್ತೂರಿನಲ್ಲಿ ನೇಣಿಗೇರಲು ಯತ್ನಿಸಿದ್ದು ಜೊತೆಗಿದ್ದವರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದಾರೆ.
Puttur Youth attempts for suicide live on social media, admitted to hospital.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm