ಬ್ರೇಕಿಂಗ್ ನ್ಯೂಸ್
24-08-23 07:43 pm Mangalore Correspondent ಕರಾವಳಿ
ಉಳ್ಳಾಲ, ಆ.24: ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ನರ್ಮ್ ಬಸ್ಸಲ್ಲಿ ಪ್ರಯಾಣಿಸಿದ ಐವರು ಪ್ರೈಮರಿ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಬಸ್ಸನ್ನ ತಡೆದ ಸ್ಥಳೀಯರು ನಿರ್ವಾಹಕನನ್ನ ತರಾಟೆಗೆತ್ತಿಕೊಂಡ ಘಟನೆ ಕುಂಪಲದಲ್ಲಿ ನಡೆದಿದೆ.
ಮಂಗಳೂರಿನಿಂದ ಕುಂಪಲ ನಡುವೆ ಓಡಾಟ ನಡೆಸುವ ಸರಕಾರಿ ನರ್ಮ್ ಬಸ್ಸಿನ ನಿರ್ವಾಹಕ ಹುಸೇನ್ ಸಾಬ್ ಹಳ್ಳೂರ ಎಂಬಾತ ಎರಡನೇ ಮತ್ತು ಮೂರನೇ ತರಗತಿ ಓದುವ ಐದು ಮಂದಿ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಇಲ್ಲದಕ್ಕೆ ನಿಮಗೆ ಉಚಿತ ಪ್ರಯಾಣವಿಲ್ಲವೆಂದು ಹಣ ಕೇಳಿದ್ದು ಹಣ ನೀಡದ್ದಕ್ಕೆ ಬಸ್ಸಿನಿಂದ ಅರ್ಧ ದಾರಿಯಲ್ಲೇ ಕೆಳಗೆ ಇಳಿಸಿ ಅಮಾನವೀಯತೆ ಮರೆದಿದ್ದಾನೆ.


ಕುಂಪಲ ಸರಕಾರಿ ಶಾಲೆಯ ಎರಡನೇ ಮತ್ತು ಮೂರನೇ ತರಗತಿಯ ಐವರು ವಿದ್ಯಾರ್ಥಿನಿಯರು ಇಂದು ಶಾಲೆ ಮಗಿಸಿ ಸರಕಾರಿ ಬಸ್ಸು ಹತ್ತಿದ್ದಾರೆ. ಬಸ್ಸಿನ ಎಂದಿನ ನಿರ್ವಾಹಕ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಕೇಳುತ್ತಿರಲಿಲ್ಲವಂತೆ. ಹಾಗಾಗಿ ವಿದ್ಯಾರ್ಥಿನಿಯರು ಆಧಾರ್ ತಂದಿರಲಿಲ್ಲ. ಇಂದು ಖಾಯಂ ನಿರ್ವಾಹಕ ರಜೆ ಮಾಡಿದ್ದು ಹುಸೇನ್ ಸಾಬ್ ಬದಲಿ ಕರ್ತವ್ಯದಲ್ಲಿದ್ದ. ಹುಸೇನ್ ಎಳೆಯ ವಿದ್ಯಾರ್ಥಿಗಳೆಂದು ಕರುಣೆ ತೋರದೆ ಜೇಬಲ್ಲಿ ಹಣ ಇಲ್ಲದೆ ಕುಂಪಲದ ಬಗಂಬಿಲಕ್ಕೆ ತೆರಳಲಿದ್ದ ಐವರು ಮಕ್ಕಳನ್ನ ಮೂರುಕಟ್ಟೆ ಎಂಬಲ್ಲೇ ಕೆಳಗಿಳಿಸಿ ತೆರಳಿದ್ದಾನೆ.
ಈ ವಿದ್ಯಮಾನವನ್ನ ಬಸ್ಸಲ್ಲೇ ಇದ್ದ ಕುಂಪಲ ಸರಕಾರಿ ಶಾಲಾ ಮುಖ್ಯೋಪಾಧ್ಯಾಯಿನಿ ಗುಲಾಬಿ ಅವರು ಗಮನಿಸಿದ್ದಾರೆ.
ಸಂಜೆ ಸ್ಥಳೀಯರು ಕುಂಪಲ ಶಾಲೆಯ ಎದುರೇ ಬಸ್ಸನ್ನ ತಡೆದು ನಿಲ್ಲಿಸಿದ್ದು ನಿರ್ವಾಹಕನನ್ನ ತರಾಟೆಗೆತ್ತಿದ್ದಾರೆ. ಸ್ಥಳೀಯರಾದ ಯಶವಂತ್ ಅವರು ಕೆಎಸ್ ಆರ್ ಟಿಸಿ ಅಧಿಕಾರಿ ರಮ್ಯ ಅವರನ್ನ ಸಂಪರ್ಕಿಸಿ ಎಳೆಯ ಮಕ್ಕಳನ್ನ ಮಾವೀಯತೆ ತೋರಿಸದೆ ಬಸ್ಸಿನಿಂದ ಕೆಳಗಿಳಿಸಿದ ತಪ್ಪಿತಸ್ಥ ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
No Aaadhar card conductor forces school student to get down from bus at Kumpala in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm