ಬ್ರೇಕಿಂಗ್ ನ್ಯೂಸ್
24-08-23 11:01 pm Mangalore Correspondent ಕರಾವಳಿ
ಬಂಟ್ವಾಳ, ಆಫಗಸ್ಟ್ 24: ಮೊನ್ನೆಯಷ್ಟೇ ಸಂಸದ ನಳಿನ್ ಕುಮಾರ್ ಕಲ್ಲಡ್ಕದಲ್ಲಿ ಗಬ್ಬೆದ್ದು ಹೋದ ರಸ್ತೆಯನ್ನು ಸರಿಪಡಿಸುವಂತೆ ಗುತ್ತಿಗೆದಾರ ಕಂಪನಿಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು. ಆದರೆ ಅಧಿಕಾರಿಗಳು ಸಂಸದರ ಮಾತಿಗೆ ಕ್ಯಾರೇ ಎಂದಿಲ್ಲ. ಇದರಿಂದ ರೊಚ್ಚಿಗೆದ್ದ ಕಲ್ಲಡ್ಕ ಪೇಟೆಯ ವ್ಯಾಪಾರಸ್ಥರು ಮತ್ತು ಸಾರ್ವಜನಿಕರೇ ಸೇರಿ ಗುತ್ತಿಗೆ ಕಂಪನಿಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಗಳು ಉಂಟಾಗಿರುವುದರಿಂದ ರೋಸಿ ಹೋದ ಕಲ್ಲಡ್ಕದ ವರ್ತಕರು ಹಾಗೂ ಸಾರ್ವಜನಿಕರು ಗುರುವಾರ ಪಕ್ಷ, ಜಾತಿ, ಧರ್ಮ ಬೇಧ ಮರೆತು ಒಟ್ಟಾಗಿ ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಗುತ್ತಿಗೆ ಕಂಪನಿ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು, ಪ್ರತಿಭಟನಾಕಾರರ ಜೊತೆಗೆ ಮಾತುಕತೆ ನಡೆಸಿದ್ದು, ಮುಂದಿನ ಬುಧವಾರದೊಳಗೆ ಕೆಲಸ ಆರಂಭಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ನಿಲ್ಲಿಸಲಾಗಿದೆ.


ಇದೇ ವೇಳೆ ಪ್ರತಿಭಟನಾಕಾರರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಲಡ್ಕದಲ್ಲಿ ರಸ್ತೆಯೇ ಛಿದ್ರಗೊಂಡಿದೆ. ಹೊಂಡ, ಗುಂಡಿಗಳನ್ನು ಮುಚ್ಚಿ, ರಸ್ತೆಯನ್ನು ತಾತ್ಕಾಲಿಕ ಸಂಚಾರಕ್ಕೆ ಸರಿಪಡಿಸುವ ಕೆಲಸ ಆಗಬೇಕು. ಧೂಳಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಡ್ರೈನೇಜ್ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ. ಮುಂದಿನ ಬುಧವಾರದೊಳಗೆ ರಸ್ತೆ ಕಾಮಗಾರಿ ಆರಂಭಗೊಳ್ಳದೇ ಇದ್ದರೆ, ಕಲ್ಲಡ್ಕ ಪೇಟೆ ಬಂದ್ ಮಾಡಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ಸಂಸದರ ಮಾತಿಗೆ ಕ್ಯಾರೆನ್ನದ ಗುತ್ತಿಗೆ ಕಂಪನಿ ಅಧಿಕಾರಿಗಳು
ಸಂಸದ ನಳಿನ್ ಕುಮಾರ್ ಮೊನ್ನೆ ಆಗಸ್ಟ್ 16ರಂದು ಬಂಟ್ವಾಳಕ್ಕೆ ಬಂದಿದ್ದಾಗ ಕಲ್ಲಡ್ಕದ ವರ್ತಕರು ಮತ್ತು ಸಾರ್ವಜನಿಕರು ಭೇಟಿ ಮಾಡಿ, ಕಲ್ಲಡ್ಕದಲ್ಲಿ ಹೆದ್ದಾರಿ ಕಾಮಗಾರಿಯಿಂದ ಆಗಿರುವ ತೊಂದರೆ ಬಗ್ಗೆ ಗಮನ ಸೆಳೆದಿದ್ದರು. ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ರಸ್ತೆ ಹದಗೆಟ್ಟಿದ್ದು ಹಾಗೂ ಧೂಳಿನಿಂದ ಜನರು ತೀವ್ರ ಸಮಸ್ಯೆಗೆ ಒಳಗಾಗಿದ್ದನ್ನು ವರ್ತಕರು ತಿಳಿಸಿದ್ದರು. ಪ್ರತಿಕ್ರಿಯಿಸಿದ್ದ ಸಂಸದ ನಳಿನ್, ಮಳೆ ಕಡಿಮೆಯಾದ ಕೂಡಲೇ ಡಾಂಬರು ಹಾಕಿಸುತ್ತೇನೆ. ಧೂಳಿನ ಸಮಸ್ಯೆಗೆ ತಕ್ಷಣವೇ ಕಲ್ಲಡ್ಕದಲ್ಲಿ ಪ್ರತಿನಿತ್ಯ ನೀರು ಸಿಂಪಡಿಸಬೇಕೆಂದು ಸೂಚನೆ ನೀಡಿದ್ದರು. ಆದರೆ ಸಂಸದರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸಮಸ್ಯೆ ಬಗ್ಗೆ ಸ್ಪಂದನೆಯನ್ನೇ ಮಾಡಿರಲಿಲ್ಲ. ಇದರಿಂದ ಆಕ್ರೋಶಗೊಂಡ ವರ್ತಕರು ಮತ್ತು ಸಾರ್ವಜನಿಕರು ಗುರುವಾರ ಗುತ್ತಿಗೆ ಕಂಪನಿಯ ವಾಹನಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ.
Mangalore Kalladka nasty highway raods filled with dust, sudden protest held.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm