ಬ್ರೇಕಿಂಗ್ ನ್ಯೂಸ್
07-11-20 03:57 pm Mangalore Correspondent ಕರಾವಳಿ
ಸುಳ್ಯ, ನವೆಂಬರ್ 07: ಅಮೆರಿಕದ ಅಧ್ಯಕ್ಷರ ಹುದ್ದೆಯ ಆಯ್ಕೆಗೆ ಭಾರೀ ಸೆಣಸಾಟ ನಡೆಯುತ್ತಿದೆ. ಈ ಮಧ್ಯೆ ಅಮೆರಿಕದ ಸಂಸತ್ತಿಗೆ ಸೆನೆಟ್ ಸದಸ್ಯರಾಗಿ ಆಯ್ಕೆಯಾದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹರಕೆ ಸಲ್ಲಿಸಿದ್ದಾರೆ.
ಅಮೆರಿಕದಲ್ಲಿ ವಕೀಲರಾಗಿರುವ, ನವದೆಹಲಿ ಮೂಲದ ರಾಜಾ ಕೃಷ್ಣಮೂರ್ತಿಯವರು 2016 ರಲ್ಲಿ ಮೊದಲ ಬಾರಿಗೆ ಅಮೆರಿಕ ಸಂಸತ್ತಿಗೆ ಆಯ್ಕೆಯಾಗಿದ್ದರು. ಬಳಿಕ ಕಳೆದ ವರ್ಷ ತನ್ನ ತಾಯಿ ವಿಜಯಾ ಕೃಷ್ಣಮೂರ್ತಿ ಜತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಾಗಪ್ರತಿಷ್ಠೆ ಹಾಗೂ ಪಂಚಾಮಾಭಿಷೇಕ ಸೇವೆ ಪೂರೈಸಿದರು.

ಈ ಬಾರಿ ಸೆನೆಟ್ ಪ್ರತಿನಿಧಿಯ ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಬೆಂಗಳೂರು ಮೂಲದ ಜ್ಯೋತಿಷಿ, ಅಮೆರಿಕದ ಚಿಕಾಗೋದಲ್ಲಿ ಹಿಂದೂ ದೇವಸ್ಥಾನ ಒಂದರಲ್ಲಿ ಅರ್ಚಕರಾಗಿರುವ ಪುರೋಹಿತ ನಾಗೇಂದ್ರ ರಾವ್ ಸಲಹೆಯಂತೆ ಸುಬ್ರಹ್ಮಣ್ಯ ದೇವರಿಗೆ ಹರಕೆ ಹೊತ್ತುಕೊಂಡಿದ್ದರು. ಇದೀಗ ಚುನಾವಣೆಯಲ್ಲಿ ಗೆದ್ದ ಬಳಿಕ ಹರಕೆ ಈಡೇರಿಸಲು ಕ್ಷೇತ್ರಕ್ಕೆ ಬಂದಿರುವುದಾಗಿ ರಾಜಾ ಕೃಷ್ಣಮೂರ್ತಿ ಹೇಳಿದ್ದಾರೆ.
ಭೇಟಿ ಸಂದರ್ಭ ದೇಗುಲದ ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಬೀಶರು ಮಾರ್ಗದರ್ಶನ ನೀಡಿದರು. ಈ ಗೆಲುವಿನಲ್ಲಿ ದೇವರ ದಯೆಯೂ ಇದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತನಾಗಿರುವ ಅವರು ಪ್ರತಿಕ್ರಿಯಿಸಿದ್ದಾರೆ.
America Democratic Party Senate Member Raja Krishnamoorthi visited Kukke Subramanya Temple, Mangalore to offer special pooja.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm