ಬ್ರೇಕಿಂಗ್ ನ್ಯೂಸ್
07-11-20 03:57 pm Mangalore Correspondent ಕರಾವಳಿ
ಸುಳ್ಯ, ನವೆಂಬರ್ 07: ಅಮೆರಿಕದ ಅಧ್ಯಕ್ಷರ ಹುದ್ದೆಯ ಆಯ್ಕೆಗೆ ಭಾರೀ ಸೆಣಸಾಟ ನಡೆಯುತ್ತಿದೆ. ಈ ಮಧ್ಯೆ ಅಮೆರಿಕದ ಸಂಸತ್ತಿಗೆ ಸೆನೆಟ್ ಸದಸ್ಯರಾಗಿ ಆಯ್ಕೆಯಾದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹರಕೆ ಸಲ್ಲಿಸಿದ್ದಾರೆ.
ಅಮೆರಿಕದಲ್ಲಿ ವಕೀಲರಾಗಿರುವ, ನವದೆಹಲಿ ಮೂಲದ ರಾಜಾ ಕೃಷ್ಣಮೂರ್ತಿಯವರು 2016 ರಲ್ಲಿ ಮೊದಲ ಬಾರಿಗೆ ಅಮೆರಿಕ ಸಂಸತ್ತಿಗೆ ಆಯ್ಕೆಯಾಗಿದ್ದರು. ಬಳಿಕ ಕಳೆದ ವರ್ಷ ತನ್ನ ತಾಯಿ ವಿಜಯಾ ಕೃಷ್ಣಮೂರ್ತಿ ಜತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಾಗಪ್ರತಿಷ್ಠೆ ಹಾಗೂ ಪಂಚಾಮಾಭಿಷೇಕ ಸೇವೆ ಪೂರೈಸಿದರು.

ಈ ಬಾರಿ ಸೆನೆಟ್ ಪ್ರತಿನಿಧಿಯ ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಬೆಂಗಳೂರು ಮೂಲದ ಜ್ಯೋತಿಷಿ, ಅಮೆರಿಕದ ಚಿಕಾಗೋದಲ್ಲಿ ಹಿಂದೂ ದೇವಸ್ಥಾನ ಒಂದರಲ್ಲಿ ಅರ್ಚಕರಾಗಿರುವ ಪುರೋಹಿತ ನಾಗೇಂದ್ರ ರಾವ್ ಸಲಹೆಯಂತೆ ಸುಬ್ರಹ್ಮಣ್ಯ ದೇವರಿಗೆ ಹರಕೆ ಹೊತ್ತುಕೊಂಡಿದ್ದರು. ಇದೀಗ ಚುನಾವಣೆಯಲ್ಲಿ ಗೆದ್ದ ಬಳಿಕ ಹರಕೆ ಈಡೇರಿಸಲು ಕ್ಷೇತ್ರಕ್ಕೆ ಬಂದಿರುವುದಾಗಿ ರಾಜಾ ಕೃಷ್ಣಮೂರ್ತಿ ಹೇಳಿದ್ದಾರೆ.
ಭೇಟಿ ಸಂದರ್ಭ ದೇಗುಲದ ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಬೀಶರು ಮಾರ್ಗದರ್ಶನ ನೀಡಿದರು. ಈ ಗೆಲುವಿನಲ್ಲಿ ದೇವರ ದಯೆಯೂ ಇದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತನಾಗಿರುವ ಅವರು ಪ್ರತಿಕ್ರಿಯಿಸಿದ್ದಾರೆ.
America Democratic Party Senate Member Raja Krishnamoorthi visited Kukke Subramanya Temple, Mangalore to offer special pooja.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm