ಬ್ರೇಕಿಂಗ್ ನ್ಯೂಸ್
07-11-20 06:02 pm Mangalore Correspondent ಕರಾವಳಿ
ಬಂಟ್ವಾಳ, ನವೆಂಬರ್ 7: ಭಾರೀ ಕುತೂಹಲ ಮೂಡಿಸಿದ್ದ ಬಂಟ್ವಾಳ ಪುರಸಭೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ನಡೆಸಿದ ಕಸರತ್ತು ಫಲ ನೀಡಲಿಲ್ಲ. ಕೊನೆಕ್ಷಣದಲ್ಲಿ ಕಾಂಗ್ರೆಸ್, ಎಸ್ ಡಿಪಿಐ ಪಕ್ಷದ ಬೆಂಬಲ ಪಡೆದು ಪುರಸಭೆಯ ಅಧಿಕಾರ ಗಿಟ್ಟಿಸಿಕೊಂಡಿದೆ.
ಕಾಂಗ್ರೆಸ್ ಪಕ್ಷದ ಮುಹಮ್ಮದ್ ಶರೀಫ್ ಅಧ್ಯಕ್ಷರಾಗಿ ಮತ್ತು ಜೆಸಿಂತಾ ಡಿಸೋಜ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷೆ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸದಸ್ಯ ಗೋವಿಂದ ಪ್ರಭು ನಾಮಪತ್ರ ಸಲ್ಲಿಸಿದ್ದರೆ, ಉಪಾಧ್ಯಕ್ಷೆ ಸ್ಥಾನಕ್ಕೆ ಮೀನಾಕ್ಷಿ ಗೌಡ ನಾಮಪತ್ರ ಸಲ್ಲಿಸಿದ್ದರು. ಎಸ್ ಡಿಪಿಐನಿಂದ ಆರಂಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮುನೀಶ್ ಅಲಿ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಬೇಕಾದ ಅರ್ಹ ಅಭ್ಯರ್ಥಿ ಎಸ್.ಡಿ.ಪಿ.ಐ. ಬಳಿ ಇರಲಿಲ್ಲ. ಕಾಂಗ್ರೆಸ್ 12 ಸ್ಥಾನ, ಬಿಜೆಪಿ 11 ಹಾಗೂ ಎಸ್ ಡಿಪಿಐ 4 ಸ್ಥಾನಗಳನ್ನು ಪಡೆದಿದ್ದವು. ಸ್ಥಳೀಯ ಶಾಸಕ ಮತ್ತು ಸಂಸದರಿಗೆ ಮತ ಚಲಾಯಿಸುವ ಅರ್ಹತೆ ಇದ್ದುದರಿಂದ ಬಿಜೆಪಿ 13 ಸ್ಥಾನಗಳನ್ನು ಪಡೆದು ಅಧಿಕಾರ ಗಳಿಸುವ ವಿಶ್ವಾಸದಲ್ಲಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಎಸ್.ಡಿ.ಪಿ.ಐ. ಅಭ್ಯರ್ಥಿ ಮುನೀಶ್ ಅಲಿ ನಾಮಪತ್ರ ವಾಪಸ್ ಪಡೆದು ಕಾಂಗ್ರೆಸಿಗೆ ಬೆಂಬಲ ಘೋಷಿಸಿದರು.





ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಾಗ, ಕಾಂಗ್ರೆಸ್ ಪರವಾಗಿ 12 ಸದಸ್ಯರು ಮತ್ತು ಎಸ್ ಡಿಪಿಐನ 4 ಸದಸ್ಯರು ಒಟ್ಟು 16 ಮತಗಳೊಂದಿಗೆ ಮುಹಮ್ಮದ್ ಶರೀಫ್ ಅಧ್ಯಕ್ಷರಾಗಿ ಮತ್ತು ಜೆಸಿಂತಾ ಡಿಸೋಜ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಬಿಜೆಪಿಯ 11 ಸದಸ್ಯರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಮತಗಳು ಸೇರಿ ಬಿಜೆಪಿ ಅಭ್ಯರ್ಥಿಗಳಿಗೆ 13 ಮತಗಳು ಚಲಾವಣೆಯಾದವು. ಚುನಾವಣಾ ಅಧಿಕಾರಿಯಾಗಿ ಬಂಟ್ವಾಳ ತಹಶಿಲ್ದಾರ್ ಎಸ್.ಆರ್.ರಶ್ಮಿ ಕರ್ತವ್ಯ ನಿರ್ವಹಿಸಿದರು.
Congress attains victory in Bantwal Town Municipality Elections that was held here on 7 November, Saturday 2020.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm