ಬ್ರೇಕಿಂಗ್ ನ್ಯೂಸ್
29-08-23 07:32 pm Mangalore Correspondent ಕರಾವಳಿ
ಉಳ್ಳಾಲ, ಆ.29: ಸರಕಾರಿ ಜಾಗದ ಬೆಲೆಬಾಳುವ ಮರಗಳನ್ನು ಮಾರಿದ ಆರೋಪ ಎದುರಿಸುತ್ತಿರುವ ಮುನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾಜೀವ ನಾಯ್ಕ್ ಅವರನ್ನ ಗ್ರಾಮಸಭೆಯಿಂದ ದೂರ ಇಡುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ಮುನ್ನೂರು ಗ್ರಾಮದ ಸಮುದಾಯ ಭವನದಲ್ಲಿ ಸೋಮವಾರ ನಡೆದ ಗ್ರಾಮಸಭೆಯಲ್ಲಿ ಭಾರತೀಯ ಕಿಸಾನ್ ಸಂಘದ ಸದಸ್ಯರು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ವೇದಿಕೆಯಲ್ಲಿ ಕುಳಿತಿದ್ದ ಪಿಡಿಒ ರವೀಂದ್ರ ಅವರನ್ನು ಸಭೆಯಿಂದ ದೂರ ಇಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಘೋಷಣೆ ಕೂಗದಂತೆ ತಡೆದಿದ್ದಾರೆ. ಪಟ್ಟು ಬಿಡದ ಕಿಸಾನ್ ಸಂಘದ ಸದಸ್ಯರು ಗ್ರಾಮಸಭೆ ಉದ್ದಕ್ಕೂ ನೆಲದಲ್ಲೇ ಕುಳಿತು ಮೌನ ಪ್ರತಿಭಟನೆ ನಡೆಸಿದ್ದಾರೆ.


ಗ್ರಾಮ ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿದ್ದ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್ ಈಶ್ವರ್ ಅವರು ಪ್ರತಿಭಟನಾಕಾರರಲ್ಲಿ ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡುವಂತೆ ಸಲಹೆ ನೀಡಿ ತಮಗೆ ನ್ಯಾಯ ಸಿಗಲಿ ಎಂದು ಹೇಳಿದರು. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಪ್ರೇಮಚಂದ್ರ ಶೆಟ್ಟಿ ಮಾತನಾಡಿ ಕಳೆದ ವರ್ಷ ಜುಲೈ ತಿಂಗಳಲ್ಲಿ ಪಿಡಿಒ ರವೀಂದ್ರ ಮತ್ತು ಗ್ರಾಮ ಪಂಚಾಯತ್ ಸದಸ್ಯನೋರ್ವ ಸೇರಿ ಅಭಿವೃದ್ಧಿ ನೆಪದಲ್ಲಿ ಗ್ರಾಮ ವ್ಯಾಪ್ತಿಯ ಸರಕಾರಿ ಭೂಮಿಯಿಂದ ಸುಮಾರು ನಲ್ವತ್ತು ಲಕ್ಷ ರೂಪಾಯಿ ಮೌಲ್ಯದ ಮರಗಳನ್ನ ಕಡಿದು ಮಾರಾಟ ನಡೆಸಿದ್ದಾರೆ. ಈ ಬಗ್ಗೆ ಪಿಡಿಒ ವಿರುದ್ಧ ಅರಣ್ಯಾಧಿಕಾರಿಗಳು ಎಫ್ ಐಆರ್ ದಾಖಲಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ನ್ಯಾಯಾಲಯದಲ್ಲಿ ಈ ಪ್ರಕರಣ ನಡೆಯುತ್ತಿದ್ದು ಜಾಮೀನಿನಲ್ಲಿ ಹೊರಗಿರುವ ರವೀಂದ್ರ ಅವರು ತಾನು ಈ ಕೇಸನ್ನ ಹೈಕೋರ್ಟಲ್ಲಿ ವಜಾ ಮಾಡಿರುವುದಾಗಿ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಮರ ಮಾರಾಟದ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಆಗಲೇಬೇಕು. ಅದಕ್ಕಾಗಿ ನಾವು ಸುಪ್ರೀಂ ಕೋರ್ಟ್ ಕದ ತಟ್ಟಲೂ ಸಿದ್ಧ ಎಂದರು.


ಎರಡೂ ಮುಕ್ಕಾಲು ಸೆಂಟ್ಸ್ ಸರಕಾರಿ ಜಾಗದಲ್ಲಿ ಮನೆ ಕಟ್ಟುವವರಿಗೆ ಡೋರ್ ನಂಬರ್ ನೀಡಲು ಪಂಚಾಯತಿನಲ್ಲಿ 30 ರಿಂದ ನಲ್ವತ್ತು ಸಾವಿರ ಡಿಮಾಂಡ್ ಮಾಡಲಾಗುತ್ತಿದೆ. ಹಕ್ಕುಪತ್ರ ನೀಡಲು 60 ಸಾವಿರ ಡಿಮಾಂಡ್ ಮಾಡಲಾಗುತ್ತಿದೆ ಎಂದವರು ಆರೋಪಿಸಿದರು.
Mangalore Forest department tress sold by PDO of Munnuru Gram Panchayath, Bharatiya Kisan Sangha members demand suspension
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am