ಬ್ರೇಕಿಂಗ್ ನ್ಯೂಸ್
29-08-23 09:00 pm Mangalore Correspondent ಕರಾವಳಿ
ಉಳ್ಳಾಲ, ಆ.29: ಬಡವರು ಸರ್ಕಾರಿ ಭೂಮಿ ಅತಿಕ್ರಮಿಸಿ ಮನೆ ಕಟ್ಟಿಕೊಂಡಿದ್ದರೆ, ಕನಿಷ್ಠ 600 ಚದರಡಿ ಬಿಟ್ಟು ಕೊಡಲು ಸರ್ಕಾರ ತಯಾರಿ ಇದೆ. ಹಿಂದೆ 94 ಸಿ ಅಡಿ ಭೂಮಿ ಪಡೆದ ಕುಟುಂಬಗಳಲ್ಲಿ ಅಜ್ಜ, ಮಗ, ಮೊಮ್ಮಕ್ಕಳು ಎಂದು ಮೂರು ತಲೆಮಾರು ಹೆಚ್ಚಾಗಿರಬಹುದು. ಅಂಥವರು ಗೊತ್ತಿಲ್ಲದೆ ಅಕ್ಕ ಪಕ್ಕ ಮನೆ ಕಟ್ಟಿಕೊಂಡಿದ್ದರೆ, ಪ್ರತಿ ಬಡವನಿಗೂ ಸೂರು ಕಲ್ಪಿಸುವ ನೆಲೆಯಲ್ಲಿ ಎರಡೂವರೆ ಸೆಂಟಿನಷ್ಟು ಭೂಮಿ ಬಿಟ್ಟು ಕೊಡಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡುತ್ತೇನೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಸೋಮೇಶ್ವರ ಬಟ್ಟಂಪಾಡಿಯ ಕಡಲ್ಕೊರೆತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ ಅವರು ಬಳಿಕ, ಸೋಮೇಶ್ವರ ಪುರಸಭೆಯ ಕಂದಾಯ ಕಚೇರಿಗೆ ಭೇಟಿ ಕೊಟ್ಟು ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದರು. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, 94ಸಿ ಹಕ್ಕಿನಡಿ 2.5 ಸೆಂಟ್ಸ್ ಭೂಮಿಯನ್ನು ನಿವೇಶನ ರಹಿತರಿಗೆ ನೀಡಲಾಗುವುದು. ಅವನ್ನು ಪರಿಶೀಲಿಸಿ ಕಾನೂನು ವ್ಯಾಪ್ತಿಯಲ್ಲಿ ತರುವ ಪ್ರಯತ್ನ ಮಾಡುತ್ತೇವೆ ಎಂದರು.


ಒಂದೇ ಸರ್ವೆ ನಂಬರಿನಡಿ ಜಾಗದ ದಾಖಲೆಗಳನ್ನು ಹೊಂದಿದವರಿದ್ದಾರೆ. ಅಂತಹ ಜಾಗದ ಮೇಲೆ ಮಾಲೀಕರಿಗೆ ಕೃಷಿ ಸಾಲವಾಗಲೀ, ಮನೆ ಕಟ್ಟಲು ಸಾಲವಾಗಲೀ ಪಡೆಯಲು ಸಾಧ್ಯವಾಗದು. ಜಂಟಿ ಖಾತೆಯಲ್ಲಿ ಕುಳಿತು ಸಮಸ್ಯೆಗಳನ್ನು ಎದುರಿಸುತ್ತಿರುವ ಮನೆಗಳಿಗೆ ಅಧಿಕಾರಿಗಳೇ ನೇರ ಮನೆ ಬಾಗಿಲಿಗೆ ತೆರಳಿ ಸಮಸ್ಯೆ ಪರಿಹರಿಸುವ ಪ್ರಕ್ರಿಯೆ ನಡೆಸುವ ಆಲೋಚನೆ ಇದೆ. ಈ ಕುರಿತು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಜೊತೆಗೆ ಚರ್ಚಿಸಿ ಅನುಷ್ಠಾನಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಕಂದಾಯ ಕಚೇರಿಗಳಲ್ಲಿ ಹಳೆಯ ದಾಖಲೆಗಳನ್ನು ಪಡೆಯಲು ಜನರಿಂದ ಹಣ ಪಡೆಯುವ ಸಿಬಂದಿ ಇದ್ದಾರೆ. ಹಳೆಯ ದಾಖಲೆಗಳು ಶಿಥಿಲಾವಸ್ಥೆಗೆ ತಲುಪುತ್ತಿದ್ದು, ಇದರ ನೆಪದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಕೆಲಸಗಳಾಗುತ್ತಿದೆ. ಹಳೆಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸುವ ಆಲೋಚನೆಯನ್ನು ಇಲಾಖೆಯಿಂದ ಮಾಡಲಾಗುತ್ತಿದೆ ಎಂದರು.
ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನಪರಿತ್ ಸದಸ್ಯ ಹರೀಶ್ ಕುಮಾರ್ ಮೊದಲಾದವರು ಜೊತೆಗಿದ್ದರು.
Krishna Byre Gowda makes suprise visit to Ullal, Someshwara in Mangalore. Gets information about sea Erosion.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm