ಬ್ರೇಕಿಂಗ್ ನ್ಯೂಸ್
29-08-23 09:00 pm Mangalore Correspondent ಕರಾವಳಿ
ಉಳ್ಳಾಲ, ಆ.29: ಬಡವರು ಸರ್ಕಾರಿ ಭೂಮಿ ಅತಿಕ್ರಮಿಸಿ ಮನೆ ಕಟ್ಟಿಕೊಂಡಿದ್ದರೆ, ಕನಿಷ್ಠ 600 ಚದರಡಿ ಬಿಟ್ಟು ಕೊಡಲು ಸರ್ಕಾರ ತಯಾರಿ ಇದೆ. ಹಿಂದೆ 94 ಸಿ ಅಡಿ ಭೂಮಿ ಪಡೆದ ಕುಟುಂಬಗಳಲ್ಲಿ ಅಜ್ಜ, ಮಗ, ಮೊಮ್ಮಕ್ಕಳು ಎಂದು ಮೂರು ತಲೆಮಾರು ಹೆಚ್ಚಾಗಿರಬಹುದು. ಅಂಥವರು ಗೊತ್ತಿಲ್ಲದೆ ಅಕ್ಕ ಪಕ್ಕ ಮನೆ ಕಟ್ಟಿಕೊಂಡಿದ್ದರೆ, ಪ್ರತಿ ಬಡವನಿಗೂ ಸೂರು ಕಲ್ಪಿಸುವ ನೆಲೆಯಲ್ಲಿ ಎರಡೂವರೆ ಸೆಂಟಿನಷ್ಟು ಭೂಮಿ ಬಿಟ್ಟು ಕೊಡಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡುತ್ತೇನೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಸೋಮೇಶ್ವರ ಬಟ್ಟಂಪಾಡಿಯ ಕಡಲ್ಕೊರೆತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ ಅವರು ಬಳಿಕ, ಸೋಮೇಶ್ವರ ಪುರಸಭೆಯ ಕಂದಾಯ ಕಚೇರಿಗೆ ಭೇಟಿ ಕೊಟ್ಟು ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದರು. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, 94ಸಿ ಹಕ್ಕಿನಡಿ 2.5 ಸೆಂಟ್ಸ್ ಭೂಮಿಯನ್ನು ನಿವೇಶನ ರಹಿತರಿಗೆ ನೀಡಲಾಗುವುದು. ಅವನ್ನು ಪರಿಶೀಲಿಸಿ ಕಾನೂನು ವ್ಯಾಪ್ತಿಯಲ್ಲಿ ತರುವ ಪ್ರಯತ್ನ ಮಾಡುತ್ತೇವೆ ಎಂದರು.


ಒಂದೇ ಸರ್ವೆ ನಂಬರಿನಡಿ ಜಾಗದ ದಾಖಲೆಗಳನ್ನು ಹೊಂದಿದವರಿದ್ದಾರೆ. ಅಂತಹ ಜಾಗದ ಮೇಲೆ ಮಾಲೀಕರಿಗೆ ಕೃಷಿ ಸಾಲವಾಗಲೀ, ಮನೆ ಕಟ್ಟಲು ಸಾಲವಾಗಲೀ ಪಡೆಯಲು ಸಾಧ್ಯವಾಗದು. ಜಂಟಿ ಖಾತೆಯಲ್ಲಿ ಕುಳಿತು ಸಮಸ್ಯೆಗಳನ್ನು ಎದುರಿಸುತ್ತಿರುವ ಮನೆಗಳಿಗೆ ಅಧಿಕಾರಿಗಳೇ ನೇರ ಮನೆ ಬಾಗಿಲಿಗೆ ತೆರಳಿ ಸಮಸ್ಯೆ ಪರಿಹರಿಸುವ ಪ್ರಕ್ರಿಯೆ ನಡೆಸುವ ಆಲೋಚನೆ ಇದೆ. ಈ ಕುರಿತು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಜೊತೆಗೆ ಚರ್ಚಿಸಿ ಅನುಷ್ಠಾನಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಕಂದಾಯ ಕಚೇರಿಗಳಲ್ಲಿ ಹಳೆಯ ದಾಖಲೆಗಳನ್ನು ಪಡೆಯಲು ಜನರಿಂದ ಹಣ ಪಡೆಯುವ ಸಿಬಂದಿ ಇದ್ದಾರೆ. ಹಳೆಯ ದಾಖಲೆಗಳು ಶಿಥಿಲಾವಸ್ಥೆಗೆ ತಲುಪುತ್ತಿದ್ದು, ಇದರ ನೆಪದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಕೆಲಸಗಳಾಗುತ್ತಿದೆ. ಹಳೆಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸುವ ಆಲೋಚನೆಯನ್ನು ಇಲಾಖೆಯಿಂದ ಮಾಡಲಾಗುತ್ತಿದೆ ಎಂದರು.
ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನಪರಿತ್ ಸದಸ್ಯ ಹರೀಶ್ ಕುಮಾರ್ ಮೊದಲಾದವರು ಜೊತೆಗಿದ್ದರು.
Krishna Byre Gowda makes suprise visit to Ullal, Someshwara in Mangalore. Gets information about sea Erosion.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm