ಬ್ರೇಕಿಂಗ್ ನ್ಯೂಸ್
29-08-23 09:44 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಹಿರಿಯ ಚಿತ್ರನಟ, ಕಳೆದ ಐದು ದಶಕಗಳ ಕಾಲ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಅನಂತನಾಗ್ ಅವರ 75ನೇ ವರ್ಷದ ಜನ್ಮದಿನದ ಸಂಭ್ರಮ ಸಲುವಾಗಿ ಸೆಪ್ಟೆಂಬರ್ 3ರಂದು ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ದಿನವಿಡೀ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅನಂತನಾಗ್ ಅಭಿನಂದನಾ ಸಮಿತಿ ಸಂಚಾಲಕ ಗೋಪಿನಾಥ್ ಭಟ್ ತಿಳಿಸಿದ್ದಾರೆ.
ಅಂದು ಬೆಳಗ್ಗೆ 9:30ಕ್ಕೆ ಅನಂತ್ ನಾಗ್ ದಂಪತಿಯನ್ನು ಸಾರೋಟಿನಲ್ಲಿ ಡೊಂಗರಕೇರಿ ಕೆನರಾ ಹೈಸ್ಕೂಲ್ ನಿಂದ ಮೆರವಣಿಗೆ ಮೂಲಕ ಸಭಾಂಗಣಕ್ಕೆ ತರಲಾಗುವುದು. 10 ಗಂಟೆಗೆ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸಹಿತ ಗಣ್ಯರು ಉದ್ಘಾಟಿಸಲಿದ್ದಾರೆ. ಸಿನಿಮಾ ದಿಗ್ಗಜರು, ಪತ್ರಕರ್ತರು, ಯುವ ಸಮುದಾಯದೊಂದಿಗೆ ಸಂವಹನ ಕಾರ್ಯಕ್ರಮ, ಮಧ್ಯಾಹ್ನ 2 ಗಂಟೆಯಿಂದ ಮಣಿಕಾಂತ್ ಕದ್ರಿ, ರವೀಂದ್ರ ಪ್ರಭು ಹಾಗೂ ತಂಡದಿಂದ ಅನಂತ್ ನಾಗ್ ಅವರ ಆಯ್ದ ಜನಪ್ರಿಯ ಹಾಡುಗಳು, ನೃತ್ಯ ವೈವಿಧ್ಯ, ಸಾಯಂಕಾಲ ಸನ್ಮಾನ ಸಹಿತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಕರ್ತ ಮನೋಹರ್ ಪ್ರಸಾದ್ ಮಾತನಾಡಿ, ಅನಂತನಾಗ್ 75 ಸಂವತ್ಸರದ ಸಡಗರ ಮತ್ತು ಅವರ ಚಿತ್ರ ಬದುಕಿನ ಐದು ದಶಕಗಳ ಸಾರ್ಥಕ ಪಯಣದ ಸಂಭ್ರಮವನ್ನು ಅಭಿಮಾನಿಗಳನ್ನು ಸೇರಿಸಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ನಿರ್ಧರಿಸಿದೆ. ಸಾಮಾಜಿಕ ಕಾರ್ಯಗಳಲ್ಲಿಯೂ ಕಳಕಳಿ ಹೊಂದಿರುವ ಅನಂತನಾಗ್ ಯುವ ಪೀಳಿಗೆಗೂ ಮಾದರಿಯಾದವರು. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಯಶಸ್ಸುಗೊಳಿಸಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ಗೋಪಾಲಕೃಷ್ಣ ಶೆಟ್ಟಿ, ಗಿರಿಧರ್ ಶೆಟ್ಟಿ, ಕುದ್ರೋಳಿ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.
Anant Nag 75th birthday in Mangalore, whole day celebration to be held at Canara High school.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm