ಬ್ರೇಕಿಂಗ್ ನ್ಯೂಸ್
29-08-23 09:44 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಹಿರಿಯ ಚಿತ್ರನಟ, ಕಳೆದ ಐದು ದಶಕಗಳ ಕಾಲ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಅನಂತನಾಗ್ ಅವರ 75ನೇ ವರ್ಷದ ಜನ್ಮದಿನದ ಸಂಭ್ರಮ ಸಲುವಾಗಿ ಸೆಪ್ಟೆಂಬರ್ 3ರಂದು ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ದಿನವಿಡೀ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅನಂತನಾಗ್ ಅಭಿನಂದನಾ ಸಮಿತಿ ಸಂಚಾಲಕ ಗೋಪಿನಾಥ್ ಭಟ್ ತಿಳಿಸಿದ್ದಾರೆ.
ಅಂದು ಬೆಳಗ್ಗೆ 9:30ಕ್ಕೆ ಅನಂತ್ ನಾಗ್ ದಂಪತಿಯನ್ನು ಸಾರೋಟಿನಲ್ಲಿ ಡೊಂಗರಕೇರಿ ಕೆನರಾ ಹೈಸ್ಕೂಲ್ ನಿಂದ ಮೆರವಣಿಗೆ ಮೂಲಕ ಸಭಾಂಗಣಕ್ಕೆ ತರಲಾಗುವುದು. 10 ಗಂಟೆಗೆ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸಹಿತ ಗಣ್ಯರು ಉದ್ಘಾಟಿಸಲಿದ್ದಾರೆ. ಸಿನಿಮಾ ದಿಗ್ಗಜರು, ಪತ್ರಕರ್ತರು, ಯುವ ಸಮುದಾಯದೊಂದಿಗೆ ಸಂವಹನ ಕಾರ್ಯಕ್ರಮ, ಮಧ್ಯಾಹ್ನ 2 ಗಂಟೆಯಿಂದ ಮಣಿಕಾಂತ್ ಕದ್ರಿ, ರವೀಂದ್ರ ಪ್ರಭು ಹಾಗೂ ತಂಡದಿಂದ ಅನಂತ್ ನಾಗ್ ಅವರ ಆಯ್ದ ಜನಪ್ರಿಯ ಹಾಡುಗಳು, ನೃತ್ಯ ವೈವಿಧ್ಯ, ಸಾಯಂಕಾಲ ಸನ್ಮಾನ ಸಹಿತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಕರ್ತ ಮನೋಹರ್ ಪ್ರಸಾದ್ ಮಾತನಾಡಿ, ಅನಂತನಾಗ್ 75 ಸಂವತ್ಸರದ ಸಡಗರ ಮತ್ತು ಅವರ ಚಿತ್ರ ಬದುಕಿನ ಐದು ದಶಕಗಳ ಸಾರ್ಥಕ ಪಯಣದ ಸಂಭ್ರಮವನ್ನು ಅಭಿಮಾನಿಗಳನ್ನು ಸೇರಿಸಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ನಿರ್ಧರಿಸಿದೆ. ಸಾಮಾಜಿಕ ಕಾರ್ಯಗಳಲ್ಲಿಯೂ ಕಳಕಳಿ ಹೊಂದಿರುವ ಅನಂತನಾಗ್ ಯುವ ಪೀಳಿಗೆಗೂ ಮಾದರಿಯಾದವರು. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಯಶಸ್ಸುಗೊಳಿಸಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ಗೋಪಾಲಕೃಷ್ಣ ಶೆಟ್ಟಿ, ಗಿರಿಧರ್ ಶೆಟ್ಟಿ, ಕುದ್ರೋಳಿ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.
Anant Nag 75th birthday in Mangalore, whole day celebration to be held at Canara High school.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm