ಬ್ರೇಕಿಂಗ್ ನ್ಯೂಸ್
29-08-23 11:04 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 29: ಪುತ್ತೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬಡವರು ಮನೆ, ಅನ್ನ, ಬಟ್ಟೆ, ಬೆಳಕು ಇಲ್ಲದೆ ಕೊರಗಬಾರದು. ಈ ನಿಟ್ಟಿನಲ್ಲಿ ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ನಿಂದ ಈಗಾಗಲೇ ನೋಂದಣಿ ಮಾಡಿಸಿರುವ 600 ಮಂದಿ ಬಡವರಿಗೆ ನಿವೇಶನ ನೀಡಲಾಗುವುದು. ಇದಕ್ಕಾಗಿ ವಿಟ್ಲ ಭಾಗದಲ್ಲಿ 5 ಎಕರೆ ಭೂಮಿ ಖರೀದಿ ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಪುತ್ತೂರು ನಗರಸಭೆಯ ಹಳೆಯ ಕಚೇರಿ ಕಟ್ಟಡದಲ್ಲಿ ಶಾಸಕರ ಕಚೇರಿ ಉದ್ಘಾಟಿಸಿದ ಬಳಿಕ ಅವರು ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿದರು. ಪ್ರತಿ ಕುಟುಂಬಕ್ಕೆ 3 ಸೆಂಟ್ಸ್ ಜಾಗದಲ್ಲಿ ಮನೆ ನಿರ್ಮಾಣ ಮಾಡಲಾಗುವುದು. ಜತೆಗೆ, ಗ್ರಾಮೀಣ ಭಾಗದಲ್ಲಿ 1 ಸಾವಿರ ಮನೆಗಳ ನಿರ್ಮಾಣಕ್ಕೆ ಸರ್ಕಾರದಿಂದ ನಿವೇಶನ ಕಾದಿರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದವರು ತಿಳಿಸಿದರು.
ಕಚೇರಿ ಸಹಾಯಕರಿಗೆ ₹2.25 ಲಕ್ಷ ಸಂಬಳ
ವಿವಿಧ ಕೆಲಸಗಳಿಗಾಗಿ ಶಾಸಕರ ಕಚೇರಿಗೆ ಬರುವ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಆಪ್ತ ಸಹಾಯಕರು ಮಾತ್ರವಲ್ಲದೆ ಇತರ 7 ಮಂದಿ ಸಹಾಯಕರನ್ನು ಕಚೇರಿಯಲ್ಲಿ ನಿಯೋಜಿಸಲಾಗಿದೆ. ವೈದ್ಯಕೀಯ, ಕಂದಾಯ, ನಗರ ಸಮಸ್ಯೆ ಸೇರಿ ಪ್ರತಿ ಇಲಾಖೆಗೆ ಸಂಬಂಧಿಸಿ ಜನರ ಕೆಲಸಗಳನ್ನು ಇವರು ಮಾಡಲಿದ್ದಾರೆ. ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ಗೆ ಸಂಬಂಧಿಸಿ ಇಬ್ಬರು ಸಹಾಯಕರಿದ್ದಾರೆ. ತಮ್ಮ ಕೆಲಸಗಳಿಗಾಗಿ ಬೆಂಗಳೂರಿಗೆ ಹೋಗುವವರಿಗೆ ಅನುಕೂಲವಾಗುವಂತೆ ಅಲ್ಲಿಯೂ ಇಬ್ಬರು ಸಹಾಯಕರನ್ನು ನಿಯೋಜಿಸಲಾಗಿದೆ. ಪ್ರತಿ ತಿಂಗಳು ಸಹಾಯಕರಿಗೆ ಒಟ್ಟು ₹2.25 ಲಕ್ಷವನ್ನು ವೈಯಕ್ತಿಕವಾಗಿ ನೀಡುತ್ತಿದ್ದೇನೆ ಎಂದು ಅಶೋಕ್ ರೈ ಹೇಳಿದ್ದಾರೆ.
The poor in Puttur assembly constituency should not suffer without houses, food, clothes and light. In this regard, 600 poor people who have already registered with Rai Estate Educational and Charitable Trust will be given plots. Mla Ashok Kumar Rai said that five acres of land has been purchased in Vitla area for this purpose.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm