ಬ್ರೇಕಿಂಗ್ ನ್ಯೂಸ್
30-08-23 07:18 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಉಳ್ಳಾಲ ಉಳಿಯ ಆಸುಪಾಸಿನಲ್ಲಿ ನೇತ್ರಾವತಿ ಹಿನ್ನೀರು ಪ್ರದೇಶದಲ್ಲಿ ಮತ್ತೆ ಮಾಲಿನ್ಯ ಸೇರಿಕೊಂಡಿದ್ದು, ಜಲಚರಗಳು ಸತ್ತು ಬಿದ್ದಿರುವುದನ್ನು ಅಲ್ಲಿನ ಮೀನುಗಾರರು ಮಾಧ್ಯಮದ ಗಮನ ಸೆಳೆದಿದ್ದಾರೆ.
2-3 ದಿನಗಳಿಂದ ಉಳಿಯ ಭಾಗದಲ್ಲಿ ಹಿನ್ನೀರಿನಲ್ಲಿ ನೀರು ಮಾಲಿನ್ಯಗೊಂಡಿದ್ದು, ಬಣ್ಣ ಬದಲಾಗಿದೆ. ಈ ಭಾಗದಲ್ಲಿ ನೂರಾರು ಮೀನುಗಳು ಸತ್ತು ಬಿದ್ದಿದ್ದು, ಮೀನುಗಾರರು ಆತಂಕಗೊಂಡಿದ್ದಾರೆ. ಉಳಿಯ ಪಕ್ಕದಲ್ಲಿಯೇ ಫಿಶ್ ಮೀಲ್ ಗಳಿದ್ದು ಅದರ ತ್ಯಾಜ್ಯವನ್ನು ನೇರವಾಗಿ ಕಡಲಿಗೆ ಬಿಡಲಾಗುತ್ತಿದ್ದು ಅದರಿಂದಾಗಿಯೇ ಸಮಸ್ಯೆ ಆಗಿದೆ ಎಂದು ಸ್ಥಳೀಯರು ಆತಂಕಗೊಂಡಿದ್ದಾರೆ.







ಸ್ಥಳೀಯ ನಾಡದೋಣಿ ಮೀನುಗಾರ ಪ್ರೇಮಪ್ರಕಾಶ್ ಬಳಿ ಕೇಳಿದಾಗ, ಬಹಳಷ್ಟು ಮೀನುಗಳು ಸತ್ತು ಬಿದ್ದಿವೆ. ಆದರೆ ನಿಶ್ಚಿತವಾಗಿ ಇಂಥದ್ದೇ ಕಾರಣ ಎಂದು ಹೇಳಲಾಗದು. ಮಳೆಗಾಲ ಕಳೆದ ಬಳಿಕ ಸಿಹಿ ನೀರು ಹಿನ್ನೀರಿಗೆ ನುಗ್ಗಿದರೆ ಇಂತಹ ಸಮಸ್ಯೆ ಆಗುತ್ತದೆ. ಇಂತಹ ನೀರಿನಲ್ಲಿ ಆಮ್ಲಜನಕ ಕಡಿಮೆಯಿದ್ದರೆ ಮೀನುಗಳು ಸಾಯುತ್ತವೆ. ಇದರ ಜೊತೆಗೆ ಫಿಶ್ ಮೀಲ್ ಗಳ ತ್ಯಾಜ್ಯವೂ ಸೇರಿಕೊಂಡಿರುವ ಸಾಧ್ಯತೆ ಇದೆ. ಮೀನುಗಾರಿಕೆ ಇಲಾಖೆಗೆ ದೂರು ನೀಡಿದ್ದೇವೆ. ತಜ್ಞರು ಆಗಮಿಸಿದ್ದು ನೀರನ್ನು ಪರೀಕ್ಷೆಗೆ ಒಯ್ದಿದ್ದಾರೆ ಎಂದು ತಿಳಿಸಿದ್ದಾರೆ.
ಎರಡು ದಿನದಲ್ಲಿ ಅಂದಾಜು 80 ಶೇಕಡಾದಷ್ಟು ಮೀನುಗಳು ಸತ್ತಿವೆ ಎನ್ನುತ್ತಿದ್ದಾರೆ. ಈ ಭಾಗದಲ್ಲಿ ಕಾಂಡ್ಲಾ ವನಗಳಿದ್ದು ಇದರ ಎಡೆಯಲ್ಲಿ ಮೀನುಗಳು ಸಂತಾನೋತ್ಪತ್ತಿ ಮಾಡುತ್ತವೆ. ಇಂತಹ ಜಾಗದಲ್ಲೇ ಮೀನುಗಳು ಸತ್ತಿರುವುದರಿಂದ ದೊಡ್ಡ ಮಟ್ಟಿನ ಪರಿಣಾಮ ಆಗಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
Hundreds of fish killed by Fish Mill pollution at Ullal in Mangalore. Water turns completely poisonous due to chemicals released by Fish mill factory.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm