ಬ್ರೇಕಿಂಗ್ ನ್ಯೂಸ್
01-09-23 12:44 pm Mangalore Correspondent ಕರಾವಳಿ
ಮಂಗಳೂರು, ಸೆ.1: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ನಿವಾಸಿ ಸ್ವರಾಜ್(24) ನಿನ್ನೆ ಬೆಳಗ್ಗೆ ತನ್ನ ಮನೆಯ ಬಳಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಲೋನ್ ಆ್ಯಪ್ ನಿಂದ 'Baby for sale' ಅಂತ ಕಿರುಕುಳ ನೀಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ವಾಟ್ಸಾಪ್ ನಲ್ಲಿ ಅಕ್ಕನ ಮಗುವಿನ ಫೋಟೊ ಹಾಕಿದ್ದ ಸ್ವರಾಜ್ ಗೆ ಅದೇ ಫೋಟೊ ಮುಂದಿಟ್ಟು ಕಿರುಕುಳ ನೀಡಲಾಗಿದೆ. ಮಗುವಿನ ಫೋಟೋವನ್ನು 'Baby for sale' ಅಂತ ಎಡಿಟ್ ಮಾಡಿ ಆತನ ಸ್ನೇಹಿತರು ಮತ್ತು ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿದ್ದವರಿಗೆಲ್ಲ ಫಾರ್ವರ್ಡ್ ಮಾಡಲಾಗಿತ್ತು.

ಸ್ವರಾಜ್ ಮೊಬೈಲ್ ಕಾಂಟ್ಯಾಕ್ಟ್ ಲಿಸ್ಟನ್ನು ನಕಲು ಮಾಡಿದ್ದ ಲೋನ್ ಆ್ಯಪ್ ನವರು ಮಗುವಿನ ಫೋಟೋವನ್ನೇ ನಕಲಿಸಿ ಮಗು ಮಾರಾಟಕ್ಕಿದೆ ಎಂದು ಹೇಳಿ ಫಾರ್ವರ್ಡ್ ಮಾಡಿದ್ದರು. ಇದರಿಂದ ತೀವ್ರ ನೊಂದಿದ್ದ ಸ್ವರಾಜ್ ಬ್ಲಾಕ್ ಮೇಲ್ ಒಳಗಾಗಿದ್ದರು. ಒತ್ತಡ ತಡೆಯಲಾಗದೇ ಆ.30 ರಂದು ಸ್ವರಾಜ್ 30 ಸಾವಿರ ರೂ. ಹಣವನ್ನು ಕಟ್ಟಿದ್ದರು ಎನ್ನಲಾಗಿದೆ. ಆ.31 ರಂದು ಮಧ್ಯಾಹ್ನ 2 ಗಂಟೆ ಒಳಗೆ ಉಳಿದ ಹಣ ಬಡ್ಡಿ ಸಹಿತ ನೀಡುವಂತೆ ಡೆಡ್ ಲೈನ್ ನೀಡಿದ್ದರು. ಇದರ ನಡುವಲ್ಲೇ ಹಿಂಸೆ ತಾಳಲಾರದೆ ಸ್ವರಾಜ್ ನಿನ್ನೆ ಬೆಳಗ್ಗೆ ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯದ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದು ಲೋನ್ ಆ್ಯಪ್ ಕಿರುಕುಳದಿಂದಲೇ ಯುವಕ ಸಾವಿಗೆ ಶರಣಾದ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ.
In a major twist to the suicide case of Dakshina Kannada district-level youth kabaddi player Swaraj, it is suspected that she committed suicide after being harassed by the loan app. Swaraj (24), a resident of Puduvettu village in Belthangady taluk, committed suicide by hanging herself near her house yesterday morning. During the investigation, it came to light that he was harassed by the loan app as 'Baby for sale'.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm