ಬ್ರೇಕಿಂಗ್ ನ್ಯೂಸ್
02-09-23 03:06 pm Mangalore Correspondent ಕರಾವಳಿ
ಮಂಗಳೂರು, ಸೆ.2: ಖಾಸಗಿ ಬಸ್ ಮಾಲಕರಿಗೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಕಠಿಣ ಕ್ರಮದ ಎಚ್ಚರಿಕೆ ನೀಡಿರುವುದರಿಂದ ಬಸ್ ಮಾಲಕರೇ ಇಂದು ಫೀಲ್ಡಿಗಿಳಿದು ಚಾಲಕ ಮತ್ತು ನಿರ್ವಾಹಕರಿಗೆ ಶಿಸ್ತಿನ ಪಾಠ ಮಾಡಿದ್ದಾರೆ.
ನಂತೂರು ವೃತ್ತದ ಬಳಿಯ ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ಬಸ್ ಮಾಲಕರು ಖಾಸಗಿ ಬಸ್ಸುಗಳ ನಿರ್ವಾಹಕರಿಗೆ ವಿವಿಧ ರೀತಿಯ ಸೂಚನೆಗಳನ್ನು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಬಸ್ಸಿನ ಫುಟ್ ಬೋರ್ಡಿನಲ್ಲಿ ನಿಂತುಕೊಳ್ಳಬಾರದು. ಕಂಡಕ್ಟರ್ ಅಥವಾ ಪ್ರಯಾಣಿಕರು ಕೂಡ ಬಸ್ಸಿನಲ್ಲಿ ಮೆಟ್ಟಿಲಲ್ಲಿ ನಿಂತು ಪ್ರಯಾಣಿಸುವುದೇ ನಿಷಿದ್ಧ ಎಂದು ಜಾಗೃತಿ ಮೂಡಿಸಿದ್ದಾರೆ.
ಅಲ್ಲದೆ, ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ಗಳು ಶಿಸ್ತಿನಂತೆ ಡ್ರೆಸ್ ಧರಿಸಬೇಕು. ಖಾಕಿ ಶರ್ಟ್ ಮತ್ತು ಖಾಕಿ ಪ್ಯಾಂಟನ್ನೇ ಹಾಕ್ಕೊಂಡಿರಬೇಕು. ಪ್ರಯಾಣಿಕರ ಜೊತೆ ಸೌಜನ್ಯದಿಂದಲೇ ವರ್ತಿಸಬೇಕು. ನೀವು ಬೇಕಾಬಿಟ್ಟಿ ವರ್ತಿಸಿದರೆ, ಕೊನೆಗೆ ದಂಡ ತೆರುವುದು ನಮ್ಮ ತಲೆಗೆ ಬರುತ್ತದೆ. ಹಾಗಾಗಿ ಟೈಮ್ ಕೀಪಿಂಗ್ ಏನಿದ್ದರೂ ಎರ್ರಾಬಿರ್ರಿ ಬಸ್ ಓಡಿಸುವುದಾಗಲೀ, ಜನರನ್ನು ಒಟ್ಟಾರೆ ತುಂಬಿಸಿಕೊಂಡು ಹೋಗುವುದಾಗಲೀ ಮಾಡಬಾರದು. ಪ್ರತಿ ಪ್ರಯಾಣಿಕನಿಗೂ ಚಲೋ ಮೆಷಿನ್ ಮೂಲಕವೇ ಟಿಕೆಟ್ ನೀಡಬೇಕು. ಜೊತೆಗೆ ಬಸ್ ಮಾಲಕರ ಸಂಘದಿಂದ ಕೊಡಮಾಡಿರುವ ಚಲೋ ಕಾರ್ಡ್ ಗಳನ್ನು ನಿರಾಕರಿಸುವಂತಿಲ್ಲ. ಅದಕ್ಕಾಗಿ ವಿದ್ಯಾರ್ಥಿಗಳು ಅಥವಾ ಇತರೇ ಸಾರ್ವಜನಿಕರ ಜೊತೆ ಒರಟಾಗಿ ವರ್ತಿಸುವಂತಿಲ್ಲ. ಕರ್ಕಶ ಹಾರ್ನ್ ಬಳಸುವಂತಿಲ್ಲ. ಬಸ್ಸಿನಲ್ಲಿ ಟೇಪ್ ರೆಕಾರ್ಡ್ ಬಳಸುವುದನ್ನು ನಿಷೇಧಿಸಲಾಗಿದೆ ಇತ್ಯಾದಿ ಮಾಹಿತಿಯುಳ್ಳ ಕರಪತ್ರಗಳನ್ನು ಬಸ್ಸಿನ ಚಾಲಕ ಮತ್ತು ನಿರ್ವಾಹಕರಿಗೆ ಕೊಟ್ಟು ಮಾಲಕರೇ ಜಾಗೃತಿ ಮೂಡಿಸಿದರು.
ಕದ್ರಿ ಸಂಚಾರಿ ಠಾಣೆಯ ಇನ್ಸ್ ಪೆಕ್ಟರ್ ಗೋಪಾಲಕೃಷ್ಣ ಭಟ್ ಜೊತೆಗಿದ್ದು, ಬಸ್ ಮಾಲಕರು ಮತ್ತು ಸಿಬಂದಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಫುಟ್ ಬೋರ್ಡಿನಲ್ಲಿ ನಿಂತು ಪ್ರಯಾಣಿಸಿದರೆ, ಅಂತಹ ಬಸ್ಸುಗಳಿಗೆ ದಂಡ ವಿಧಿಸಲು ಆದೇಶ ಇದೆ. ಅಲ್ಲದೆ, ನೀವು ಎಲ್ಲಿಯೇ ಆಗಲೀ ಫುಟ್ ಬೋರ್ಡಲ್ಲಿ ನಿಂತು ಪ್ರಯಾಣಿಸಿದ್ದನ್ನು ಸಾರ್ವಜನಿಕರು ಫೋಟೋ ತೆಗೆದು ಕೊಟ್ಟರೂ ದಂಢ ವಿಧಿಸುತ್ತೇವೆ. ಪ್ರಯಾಣಿಕರ ಹಿತದೃಷ್ಟಿಯಿಂದ ಇವೆಲ್ಲ ಸೂಚನೆಗಳನ್ನು ಬಸ್ಸಿನ ಸಿಬಂದಿ ಪಾಲಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
Dakshina Kannada Bus Operators' Association led by its president Azeez Parthipady raised awareness among bus drivers and conductors on the safety of passengers here at Nanthoor on Saturday September 2. This action came after a bus conductor slipped from the bus footboard at Nanthoor leading to his death.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm