ಬ್ರೇಕಿಂಗ್ ನ್ಯೂಸ್
02-09-23 03:36 pm Mangalore Correspondent ಕರಾವಳಿ
ಉಳ್ಳಾಲ, ಸೆ.2: ಉಳ್ಳಾಲ ಪೊಲೀಸ್ ಠಾಣೆಯ ಹಿಂಬದಿಯ ಕ್ವಾಟ್ರಸ್ ಪರಿಸರದಲ್ಲಿ ಬೀದಿ ನಾಯಿಗಳು ಬಿಡಾರ ಹೂಡಿದ್ದು ಅದೀಗ ಪೊಲೀಸರಿಗೇ ತಲೆನೋವು ಸೃಷ್ಟಿಸಿದೆ. ಕಳೆದ ವಾರ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಮತ್ತು ಲೇಡಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರ ಪತಿಗೆ ಹುಚ್ಚು ನಾಯಿ ಕಚ್ಚಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಉಳ್ಳಾಲ ಪೊಲೀಸ್ ಠಾಣೆಯ ಪಿಸಿಗಳಾದ ಸತೀಶ್, ನವೀನ್ ಮತ್ತು ಲೇಡಿ ಪಿಸಿ ಭಾಗ್ಯಶ್ರೀ ಅವರ ಪತಿ ರಂಗನಾಥ್ ಎಂಬವರಿಗೆ ಹುಚ್ಚು ನಾಯಿ ಕಡಿದಿದೆ. ಆಗಸ್ಟ್ 28 ರಂದು ಪೊಲೀಸ್ ವಸತಿ ಗೃಹದ ಆವರಣದಲ್ಲಿ ಘಟನೆ ನಡೆದಿದ್ದು ನಾಯಿ ವಿಚಿತ್ರವಾಗಿ ವರ್ತಿಸುತ್ತಿದ್ದರಿಂದ ಅನುಮಾನಗೊಂಡು ಮಂಗಳೂರಿನ ಅನಿಮಲ್ ಕೇರ್ ಟ್ರಸ್ಟ್ ನವರಿಗೆ ತಿಳಿಸಿದ್ದರು.

ಹುಚ್ಚು ನಾಯಿ ರೀತಿ ಇದೆ, ಇಲ್ಲಿಂದ ಕೊಂಡೊಯ್ಯುವಂತೆ ಪೊಲೀಸರು ಹೇಳಿದ್ದಕ್ಕೆ ವೀಡಿಯೋ ತೆಗೆದು ಕಳಿಸಲು ಅನಿಮಲ್ ಕೇರ್ ನವರು ತಿಳಿಸಿದ್ದರು. ಪೊಲೀಸರು ನಾಯಿಯ ವೀಡಿಯೋವನ್ನ ಕಳಿಸಿ ಕೊಟ್ಟಿದ್ದರೂ ವೀಡಿಯೋ ವೀಕ್ಷಿಸಿದ ಆನಿಮಲ್ ಕೇರ್ ನವರು ನಾಯಿಗೆ ಹುಚ್ಚು ಹಿಡಿದಿಲ್ಲವೆಂದು ವಾದಿಸಿದ್ದರಂತೆ. ಆದರೆ ನಾಯಿಯ ಉಪಟಳ ತಡೆಯಲು ಸಾಧ್ಯವಿಲ್ಲ. ಕೊಂಡು ಹೋಗಿ ಎಂದು ಪೊಲೀಸರು ಒತ್ತಾಯಿಸಿದ್ದಕ್ಕೆ ಕೊನೆಗೆ ಆನಿಮಲ್ ಕೇರ್ ನವರು ಪೊಲೀಸರನ್ನ ಕಡಿದಿದ್ದ ನಾಯಿಯನ್ನು ಕೊಂಡೊಯ್ದಿದ್ದರು. ಆದರೆ ಅದೇ ನಾಯಿ ಆನಿಮಲ್ ಕೇರ್ ಶುಶ್ರೂಷೆ ಕೇಂದ್ರದಲ್ಲಿ ಹಠಾತ್ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಆ ನಾಯಿಗೆ ರೇಬೀಸ್ ರೋಗ ತಗಲಿರುವ ಶಂಕೆ ಪೊಲೀಸರಿಗಿದೆ.
ಹೀಗಾಗಿ ನಾಯಿ ಕಡಿತಕ್ಕೊಳಗಾದ ಪೊಲೀಸ್ ಸಿಬ್ಬಂದಿ ಹುಚ್ಚು ನಿರೋಧಕ ಲಸಿಕೆ ಪಡೆದು ಚಿಕಿತ್ಸೆ ಪಡೆದಿದ್ದಾರೆ. ವಸತಿಗೃಹದಲ್ಲಿರುವ ಇತರ ನಾಯಿಗಳಿಗೂ ರೋಗ ಹರಡಿರಬಹುದು ಎಂಬ ಶಂಕೆ ಉಂಟಾಗಿದ್ದು ಪೊಲೀಸರು ಎಲ್ಲ ನಾಯಿಗಳನ್ನ ಹಿಡಿದು ಒಯ್ಯುವಂತೆ ಆನಿಮಲ್ ಕೇರ್ ಸಂಸ್ಥೆಗೆ ಮನವಿ ಮಾಡಿದ್ದಾರೆ. ರೇಬೀಸ್ ರೋಗ ತಗಲಿದರೂ ಕೊನೆ ಕ್ಷಣದ ವರೆಗೂ ತಿಳಿದು ಬರುವುದಿಲ್ಲ. ಯಾವುದೇ ಪ್ರಾಣಿಗೆ ರೋಗ ತಗಲಿದರೆ ಅದಕ್ಕೆ ಔಷಧಿಯೂ ಇರಲ್ಲ. ನಾಯಿಗೆ ಹುಚ್ಚು ಹಿಡಿದ 2ರಿಂದ 4 ದಿನದಲ್ಲಿ ಸಾಯುತ್ತದೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ ಶಂಕೆ ಇದ್ದವರು ಹುಚ್ಚು ನಿರೋಧಕ ಲಸಿಕೆ ಪಡೆಯುವುದಷ್ಟೇ ಏಕೈಕ ಔಷಧಿ. ಹುಚ್ಚು ಹಿಡಿದ ನಾಯಿಯ ಜೊಲ್ಲು, ಉಗುರು ಮನುಷ್ಯನಿಗೆ ತಾಗಿದರೂ ವೈರಸ್ ಹರಡುತ್ತದೆ. ಜೊತೆಗಿದ್ದ ನಾಯಿಗಳಿಗೆ ಕಚ್ಚಿದ್ದರೂ ಅವುಗಳಿಗೆ ಲಸಿಕೆ ಹಾಕಿಸದೇ ಇದ್ದರೆ ರೋಗ ಬರಬಹುದು.
Rabid dog bites four police staffs including SI of Ullal in Mangalore. The Police have informed Animal trust to take the dogs.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 08:13 pm
HK Staffer
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 07:37 pm
HK Staffer
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm