ಬ್ರೇಕಿಂಗ್ ನ್ಯೂಸ್
02-09-23 03:36 pm Mangalore Correspondent ಕರಾವಳಿ
ಉಳ್ಳಾಲ, ಸೆ.2: ಉಳ್ಳಾಲ ಪೊಲೀಸ್ ಠಾಣೆಯ ಹಿಂಬದಿಯ ಕ್ವಾಟ್ರಸ್ ಪರಿಸರದಲ್ಲಿ ಬೀದಿ ನಾಯಿಗಳು ಬಿಡಾರ ಹೂಡಿದ್ದು ಅದೀಗ ಪೊಲೀಸರಿಗೇ ತಲೆನೋವು ಸೃಷ್ಟಿಸಿದೆ. ಕಳೆದ ವಾರ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಮತ್ತು ಲೇಡಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರ ಪತಿಗೆ ಹುಚ್ಚು ನಾಯಿ ಕಚ್ಚಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಉಳ್ಳಾಲ ಪೊಲೀಸ್ ಠಾಣೆಯ ಪಿಸಿಗಳಾದ ಸತೀಶ್, ನವೀನ್ ಮತ್ತು ಲೇಡಿ ಪಿಸಿ ಭಾಗ್ಯಶ್ರೀ ಅವರ ಪತಿ ರಂಗನಾಥ್ ಎಂಬವರಿಗೆ ಹುಚ್ಚು ನಾಯಿ ಕಡಿದಿದೆ. ಆಗಸ್ಟ್ 28 ರಂದು ಪೊಲೀಸ್ ವಸತಿ ಗೃಹದ ಆವರಣದಲ್ಲಿ ಘಟನೆ ನಡೆದಿದ್ದು ನಾಯಿ ವಿಚಿತ್ರವಾಗಿ ವರ್ತಿಸುತ್ತಿದ್ದರಿಂದ ಅನುಮಾನಗೊಂಡು ಮಂಗಳೂರಿನ ಅನಿಮಲ್ ಕೇರ್ ಟ್ರಸ್ಟ್ ನವರಿಗೆ ತಿಳಿಸಿದ್ದರು.

ಹುಚ್ಚು ನಾಯಿ ರೀತಿ ಇದೆ, ಇಲ್ಲಿಂದ ಕೊಂಡೊಯ್ಯುವಂತೆ ಪೊಲೀಸರು ಹೇಳಿದ್ದಕ್ಕೆ ವೀಡಿಯೋ ತೆಗೆದು ಕಳಿಸಲು ಅನಿಮಲ್ ಕೇರ್ ನವರು ತಿಳಿಸಿದ್ದರು. ಪೊಲೀಸರು ನಾಯಿಯ ವೀಡಿಯೋವನ್ನ ಕಳಿಸಿ ಕೊಟ್ಟಿದ್ದರೂ ವೀಡಿಯೋ ವೀಕ್ಷಿಸಿದ ಆನಿಮಲ್ ಕೇರ್ ನವರು ನಾಯಿಗೆ ಹುಚ್ಚು ಹಿಡಿದಿಲ್ಲವೆಂದು ವಾದಿಸಿದ್ದರಂತೆ. ಆದರೆ ನಾಯಿಯ ಉಪಟಳ ತಡೆಯಲು ಸಾಧ್ಯವಿಲ್ಲ. ಕೊಂಡು ಹೋಗಿ ಎಂದು ಪೊಲೀಸರು ಒತ್ತಾಯಿಸಿದ್ದಕ್ಕೆ ಕೊನೆಗೆ ಆನಿಮಲ್ ಕೇರ್ ನವರು ಪೊಲೀಸರನ್ನ ಕಡಿದಿದ್ದ ನಾಯಿಯನ್ನು ಕೊಂಡೊಯ್ದಿದ್ದರು. ಆದರೆ ಅದೇ ನಾಯಿ ಆನಿಮಲ್ ಕೇರ್ ಶುಶ್ರೂಷೆ ಕೇಂದ್ರದಲ್ಲಿ ಹಠಾತ್ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಆ ನಾಯಿಗೆ ರೇಬೀಸ್ ರೋಗ ತಗಲಿರುವ ಶಂಕೆ ಪೊಲೀಸರಿಗಿದೆ.
ಹೀಗಾಗಿ ನಾಯಿ ಕಡಿತಕ್ಕೊಳಗಾದ ಪೊಲೀಸ್ ಸಿಬ್ಬಂದಿ ಹುಚ್ಚು ನಿರೋಧಕ ಲಸಿಕೆ ಪಡೆದು ಚಿಕಿತ್ಸೆ ಪಡೆದಿದ್ದಾರೆ. ವಸತಿಗೃಹದಲ್ಲಿರುವ ಇತರ ನಾಯಿಗಳಿಗೂ ರೋಗ ಹರಡಿರಬಹುದು ಎಂಬ ಶಂಕೆ ಉಂಟಾಗಿದ್ದು ಪೊಲೀಸರು ಎಲ್ಲ ನಾಯಿಗಳನ್ನ ಹಿಡಿದು ಒಯ್ಯುವಂತೆ ಆನಿಮಲ್ ಕೇರ್ ಸಂಸ್ಥೆಗೆ ಮನವಿ ಮಾಡಿದ್ದಾರೆ. ರೇಬೀಸ್ ರೋಗ ತಗಲಿದರೂ ಕೊನೆ ಕ್ಷಣದ ವರೆಗೂ ತಿಳಿದು ಬರುವುದಿಲ್ಲ. ಯಾವುದೇ ಪ್ರಾಣಿಗೆ ರೋಗ ತಗಲಿದರೆ ಅದಕ್ಕೆ ಔಷಧಿಯೂ ಇರಲ್ಲ. ನಾಯಿಗೆ ಹುಚ್ಚು ಹಿಡಿದ 2ರಿಂದ 4 ದಿನದಲ್ಲಿ ಸಾಯುತ್ತದೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ ಶಂಕೆ ಇದ್ದವರು ಹುಚ್ಚು ನಿರೋಧಕ ಲಸಿಕೆ ಪಡೆಯುವುದಷ್ಟೇ ಏಕೈಕ ಔಷಧಿ. ಹುಚ್ಚು ಹಿಡಿದ ನಾಯಿಯ ಜೊಲ್ಲು, ಉಗುರು ಮನುಷ್ಯನಿಗೆ ತಾಗಿದರೂ ವೈರಸ್ ಹರಡುತ್ತದೆ. ಜೊತೆಗಿದ್ದ ನಾಯಿಗಳಿಗೆ ಕಚ್ಚಿದ್ದರೂ ಅವುಗಳಿಗೆ ಲಸಿಕೆ ಹಾಕಿಸದೇ ಇದ್ದರೆ ರೋಗ ಬರಬಹುದು.
Rabid dog bites four police staffs including SI of Ullal in Mangalore. The Police have informed Animal trust to take the dogs.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm