ಬ್ರೇಕಿಂಗ್ ನ್ಯೂಸ್
03-09-23 12:25 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.3: ಸೌಜನ್ಯಾ ಸ್ತ್ರೀ ಸ್ವರೂಪ ತೊರೆದು ಕಾಳಿ ಸ್ವರೂಪವನ್ನ ಪಡೆದಿದ್ದಾಳೆ. ಅವಳ ಆತ್ಮ ಭೀಕರ ಸ್ವರೂಪ ಪಡೆಯುವ ಮುನ್ನ ಸರಕಾರ ಎಚ್ಚೆತ್ತು ಕೊಳ್ಳಬೇಕು ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಹೇಳಿದ್ದಾರೆ.
ಸೌಜನ್ಯಾ ಪರವಾಗಿ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಧರ್ಮಪಾಲನಾಥ ಸ್ವಾಮೀಜಿ ಭಾಷಣ ಮಾಡಿದ್ದಾರೆ. ಸತ್ಯ, ನ್ಯಾಯದ ಹೋರಾಟಕ್ಕೆ ಆದಿಚುಂಚನಗಿರಿ ಮಠದ ಸಂಪೂರ್ಣ ಬೆಂಬಲವಿದೆ. ಒಕ್ಕಲಿಗ ಸಮಾಜದ ಬೆಂಬಲ ಇದೆ.


ಆರು ವರ್ಷ ಜೈಲಿನಲ್ಲಿದ್ದ ಸಂತೋಷ ರಾವ್ ಗೆ ಮರಳಿ ಜೀವನ ನೀಡಲು ಸಾಧ್ಯವಿಲ್ಲ. ಅದಕ್ಕಾಗಿ ರಾಜ್ಯ ಸರಕಾರ ಅವನ ಬದುಕಿಗೆ ಏನಾದ್ರು ವ್ಯವಸ್ಥೆ ಮಾಡಬೇಕು. ಜೊತೆಗೆ ಸೌಜನ್ಯಾ ಕುಟುಂಬಕ್ಕೂ ರಾಜ್ಯ ಸರಕಾರ ರಕ್ಷಣೆ ನೀಡಬೇಕು. 11 ವರ್ಷಗಳ ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗದೇ ಇರುವುದು ನಮ್ಮ ವ್ಯವಸ್ಥೆಯ ದುರಂತ.
ತನಿಖೆಯ ಸಂದರ್ಭದಲ್ಲಿ ಒಬ್ಬನಿಂದ ಆಗಿರುವ ಕೃತ್ಯ ಅಲ್ಲ. ಸಾಮೂಹಿಕ ಅತ್ಯಾಚಾರ ಆಗಿರುವುದು ಪತ್ತೆಯಾಗಿತ್ತು. ಹಾಗಾದರೆ ಯಾರು ಈ ಕೃತ್ಯ ಎಸಗಿದ್ದೆಂದು ಪತ್ತೆಯಾಗಬೇಕು. ಅದಕ್ಕಾಗಿ ಶವ ಪರೀಕ್ಷೆ ಮಾಡಿದ ವೈದ್ಯರು ಮತ್ತು ಪೊಲೀಸ್ ತನಿಖಾಧಿಕಾರಿಯನ್ನ ಮಂಪರು ಪರೀಕ್ಷೆ ಮಾಡಬೇಕು. ಮಹೇಶ್ ಶೆಟ್ಟಿ ಅವರ ಹೋರಾಟಕ್ಕೆ ಆದಿಚುಂಚನಗಿರಿ ಮಠ ಮತ್ತು ಒಕ್ಕಲಿಗ ಸಮಾಜದ ಬೆಂಬಲ ಇದೆ. ನಮ್ಮ ಮಠದ ಹಿರಿಯ ಸ್ವಾಮೀಜಿಗಳು ಸಭೆ ಕರೆದಿದ್ದಾರೆ. ಮಾಹಿತಿ ನೀಡುತ್ತೇವೆ. ಸರಕಾರ ಶೀಘ್ರ ತನಿಖೆ ನಡೆಸಿ ಯಾರು ಆರೋಪಿ ಎಂಬುದನ್ನು ಪತ್ತೆ ಮಾಡಬೇಕು ಎಂದು ಸ್ವಾಮೀಜಿ ಪ್ರಖರ ಭಾಷಣ ಮಾಡಿದ್ದಾರೆ.
ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್, ಗಿರೀಶ್ ಮಟ್ಟೆಣ್ಣವರ್, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ ಮತ್ತಿತರರು ಇದ್ದಾರೆ. ಸಾವಿರಾರು ಜನರು ಸೇರಿದ್ದಾರೆ.
Sowjanya rape case, massive protest held at Belthangady, Mangalore Shaka math swamiji warns about voilent protest.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm