ಬ್ರೇಕಿಂಗ್ ನ್ಯೂಸ್
03-09-23 09:45 pm Mangalore Correspondent ಕರಾವಳಿ
ಮಂಗಳೂರು, ಸೆ.3: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ, ಲೇಖಕ, ಚಿಂತಕ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಧಾರವಾಡದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿರುವ ಉನ್ನತ ಶಿಕ್ಷಣ ಅಕಾಡೆಮಿ ರಾಜ್ಯದ ಉನ್ನತ ಶಿಕ್ಷಣದ ನೀತಿ ನಿರೂಪಣೆಯನ್ನು ಸಿದ್ಧಗೊಳಿಸುವಲ್ಲಿ ಸರಕಾರಕ್ಕೆ ಸಲಹೆ, ಮಾರ್ಗಸೂಚಿಗಳನ್ನು ನೀಡುವ ಅತ್ಯುನ್ನತ ಸಂಸ್ಥೆಯಾಗಿದೆ.
ಡಾ.ಚಂದ್ರ ಪೂಜಾರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಹಾಗೂ ಹಾವೇರಿ ಜಾನಪದ ವಿಶ್ವವಿದ್ಯಾಲಯದ ಅನ್ವಯಿಕ ಜಾನಪದ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಮಾಜ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಡಾ.ಚಂದ್ರ ಪೂಜಾರಿ ಅವರು ಪ್ರಥಮ ಬಾರಿಗೆ ರಾಜ್ಯದಲ್ಲಿ ದಲಿತ್ ಡೆವೆಲಪ್ಮೆಂಟ್ ಇಂಡೆಕ್ಸ್ ಸಿದ್ಧಗೊಳಿಸಿದ ತಜ್ಞರಾಗಿದ್ದಾರೆ.
ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕೋರ್ ಕಮಿಟಿ ಸದಸ್ಯರಾಗಿ, ಸ್ಟೇಟ್ ಹ್ಯೂಮನ್ ಡೆವಲಪ್ಮೆಂಟ್ ಇಂಡೆಕ್ಸ್ ಕೋರ್ ಕಮಿಟಿ ಸದಸ್ಯರಾಗಿ, ರಾಜ್ಯ ಆಡಳಿತ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ, ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸಿದ್ದರು.
ಒಟ್ಟು 22 ಕೃತಿಗಳನ್ನು ಬರೆದಿರುವ ಡಾ.ಚಂದ್ರ ಪೂಜಾರಿ ಅವರು ವಿಜಯ ಕರ್ನಾಟಕ, ಕನ್ನಡ ಪ್ರಭ ಪತ್ರಿಕೆಯ ಅಂಕಣಗಾರರಾಗಿ, ಪ್ರಜಾವಾಣಿ ಪತ್ರಿಕೆಯ ಲೇಖಕರಾಗಿ ನಿರಂತರ ಬರವಣಿಗೆಯಲ್ಲಿ ತೊಡಗಿಸಿಕೊಂಡವರು. ರಾಜ್ಯದ ವಿವಿಧ ಟಿ.ವಿ. ಮಾಧ್ಯಮಗಳಲ್ಲಿ ವಿಚಾರ ಮಂಡನೆ ಮಾಡುತ್ತಿರುವರಾಗಿದ್ದಾರೆ. ಮೂಲತಃ ಪುತ್ತೂರು ತಾಲೂಕಿನವರಾದ ಚಂದ್ರ ಪೂಜಾರಿ ಅವರು, ಸೈಂಟ್ ಫಿಲೋಮಿನಾ ಹೈಸ್ಕೂಲ್ ಹಾಗೂ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎಂ.ಕಾಂ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಿದ್ದರು. ಇದೇ ವಿಶ್ವವಿದ್ಯಾಲಯದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದರು.
Mangalore Chandra poojari appointed as state higher education academy director of Karnataka.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm