ಬ್ರೇಕಿಂಗ್ ನ್ಯೂಸ್
05-09-23 02:16 pm Mangalore Correspondent ಕರಾವಳಿ
ಮಂಗಳೂರು, ಸೆ.5: ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಶಾಸಕರನ್ನು ಕುಳ್ಳಿರಿಸಿ ಮನವಿಯನ್ನು ಕೇಳಿದ ಸಿದ್ದರಾಮಯ್ಯ, ಸೌಜ್ಯಾ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶ ಇರುವುದಿಲ್ಲ. ಕೋರ್ಟ್ ಈಗಾಗಲೇ ಪ್ರಕರಣದ ಬಗ್ಗೆ ತೀರ್ಪು ನೀಡಿದೆ. ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ಆರೋಪಿಯನ್ನು ಹಿಡಿದು ಕೊಟ್ಟಿದ್ದಾರೆ. ಆದರೆ ಆರೋಪದ ಬಗ್ಗೆ ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಕೋರ್ಟ್ ಖುಲಾಸೆ ಮಾಡಿದೆ. ಹೀಗಿದ್ದ ಮೇಲೆ ನಾವು ಮರು ತನಿಖೆ ಮಾಡೋಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ವಿಷಯವನ್ನು ನನ್ನನ್ನು ಭೇಟಿಯಾಗಲು ಬಂದ ಸೌಜನ್ಯಾ ಪೋಷಕರಿಗೂ ತಿಳಿಸಿದ್ದೇನೆ. ನಾನು ಈ ಬಗ್ಗೆ ಕಾನೂನು ಸಲಹೆಯನ್ನು ಕೇಳಿದ್ದೇನೆ. ಸೌಜನ್ಯಾ ಪೋಷಕರು ಕೋರ್ಟಿಗೆ ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐಗೆ ಮೇಲ್ಮನವಿ ಸಲ್ಲಿಸುವ ಅವಕಾಶ ಇರುತ್ತದೆ. ನೀವುಗಳು ಬಂದಿರುವುದರಿಂದ ಮತ್ತೊಮ್ಮೆ ಕಾನೂನು ಸಲಹೆ ಕೇಳುತ್ತೇನೆ. ಮರು ತನಿಖೆಗೆ ಅವಕಾಶ ಇದ್ದರೆ ಆದೇಶ ಮಾಡಿಸುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾಗಿ ಬಿಜೆಪಿ ನಾಯಕರು ತಿಳಿಸಿದ್ದಾರೆ.
ಶಾಸಕರ ನಿಯೋಗದಲ್ಲಿ ಸುನಿಲ್ ಕುಮಾರ್, ಭರತ್ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ ಇದ್ದರು.
BJP leaders meet CM Siddaramaiah to reinvestigate the case of Soujanya rape and murder.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm