ಬ್ರೇಕಿಂಗ್ ನ್ಯೂಸ್
05-09-23 02:16 pm Mangalore Correspondent ಕರಾವಳಿ
ಮಂಗಳೂರು, ಸೆ.5: ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಶಾಸಕರನ್ನು ಕುಳ್ಳಿರಿಸಿ ಮನವಿಯನ್ನು ಕೇಳಿದ ಸಿದ್ದರಾಮಯ್ಯ, ಸೌಜ್ಯಾ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶ ಇರುವುದಿಲ್ಲ. ಕೋರ್ಟ್ ಈಗಾಗಲೇ ಪ್ರಕರಣದ ಬಗ್ಗೆ ತೀರ್ಪು ನೀಡಿದೆ. ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ಆರೋಪಿಯನ್ನು ಹಿಡಿದು ಕೊಟ್ಟಿದ್ದಾರೆ. ಆದರೆ ಆರೋಪದ ಬಗ್ಗೆ ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಕೋರ್ಟ್ ಖುಲಾಸೆ ಮಾಡಿದೆ. ಹೀಗಿದ್ದ ಮೇಲೆ ನಾವು ಮರು ತನಿಖೆ ಮಾಡೋಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಈ ವಿಷಯವನ್ನು ನನ್ನನ್ನು ಭೇಟಿಯಾಗಲು ಬಂದ ಸೌಜನ್ಯಾ ಪೋಷಕರಿಗೂ ತಿಳಿಸಿದ್ದೇನೆ. ನಾನು ಈ ಬಗ್ಗೆ ಕಾನೂನು ಸಲಹೆಯನ್ನು ಕೇಳಿದ್ದೇನೆ. ಸೌಜನ್ಯಾ ಪೋಷಕರು ಕೋರ್ಟಿಗೆ ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐಗೆ ಮೇಲ್ಮನವಿ ಸಲ್ಲಿಸುವ ಅವಕಾಶ ಇರುತ್ತದೆ. ನೀವುಗಳು ಬಂದಿರುವುದರಿಂದ ಮತ್ತೊಮ್ಮೆ ಕಾನೂನು ಸಲಹೆ ಕೇಳುತ್ತೇನೆ. ಮರು ತನಿಖೆಗೆ ಅವಕಾಶ ಇದ್ದರೆ ಆದೇಶ ಮಾಡಿಸುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾಗಿ ಬಿಜೆಪಿ ನಾಯಕರು ತಿಳಿಸಿದ್ದಾರೆ.
ಶಾಸಕರ ನಿಯೋಗದಲ್ಲಿ ಸುನಿಲ್ ಕುಮಾರ್, ಭರತ್ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ ಇದ್ದರು.
BJP leaders meet CM Siddaramaiah to reinvestigate the case of Soujanya rape and murder.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm