ಬ್ರೇಕಿಂಗ್ ನ್ಯೂಸ್
05-09-23 09:51 pm Mangalore Correspondent ಕರಾವಳಿ
ಮಂಗಳೂರು, ಸೆ.5: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಹೊಸ ವಿಮಾನ ದಿನಂಪ್ರತಿ ಸಂಚಾರ ಮಾಡಲಿದೆ. ಇದರೊಂದಿಗೆ ಮಂಗಳೂರು- ಬೆಂಗಳೂರು ಡೈಲೀ ವಿಮಾನ ಸಂಖ್ಯೆ ಐದಕ್ಕೇರಿದರೆ, ಶನಿವಾರ ಆರು ವಿಮಾನಗಳು ಸಂಚಾರ ನಡೆಸಲಿವೆ.
ಸೆ.7ರಿಂದ ಇಂಡಿಗೋ ಸಂಸ್ಥೆಯ ವಿಮಾನ ಹೊಸತಾಗಿ ಇವರೆಡು ನಗರಗಳ ನಡುವೆ ಸಂಚಾರ ಆರಂಭಿಸಲಿದೆ. ಬೆಳಗ್ಗೆ 8.35ಕ್ಕೆ ಮಂಗಳೂರಿಗೆ ತಲುಪಲಿರುವ ಇಂಡಿಗೋ ವಿಮಾನ 9.10ಕ್ಕೆ ಮತ್ತೆ ಬೆಂಗಳೂರಿಗೆ ಹೊರಡಲಿದೆ. ಈಗಾಗಲೇ ಬೆಳಗ್ಗೆ 6.50ಕ್ಕೆ ಬೆಂಗಳೂರು ಮೂಲಕ ಪಾಟ್ನಾಕ್ಕೆ, 11.35ಕ್ಕೆ ಬೆಂಗಳೂರು ವಯಾ ಕೋಲ್ಕತ್ತಾಕ್ಕೆ ಸಂಚರಿಸುತ್ತದೆ. ಸಂಜೆ 4.25 ಮತ್ತು ರಾತ್ರಿ 9.50ಕ್ಕೆ ನೇರವಾಗಿ ಬೆಂಗಳೂರಿಗೆ ಸಂಚರಿಸುವ ಇಂಡಿಗೋ ವಿಮಾನಗಳಿವೆ. ಇದರ ಜೊತೆಗೆ ಹೊಸ ವಿಮಾನ ದಿನವೂ ಬೆಳಗ್ಗೆ 9.10ಕ್ಕೆ ಮಂಗಳೂರಿನಿಂದ ಬೆಂಗಳೂರು ಸಂಚಾರ ಮಾಡಲಿದೆ.

ಶನಿವಾರ ಆರನೇ ವಿಮಾನ ಮಂಗಳೂರಿನಿಂದ ಬೆಂಗಳೂರಿಗೆ ಸಂಚಾರ ಮಾಡಲಿದೆ. ಮಂಗಳೂರು- ಪುಣೆಗೆ ಹೋಗುವ ವಿಮಾನವನ್ನೇ ಹೆಚ್ಚುವರಿಯಾಗಿ ಬೆಂಗಳೂರಿನತ್ತ ಓಡಿಸಲು ನಿರ್ಧರಿಸಲಾಗಿದೆ. ಮಂಗಳವಾರ, ಗುರುವಾರ, ಭಾನುವಾರ ಮತ್ತು ಶನಿವಾರ ಸಂಜೆ 5.50ಕ್ಕೆ ವಿಮಾನ ಮಂಗಳೂರಿಗೆ ಬರಲಿದ್ದು, 6.35ಕ್ಕೆ ನಿರ್ಗಮನ ಆಗಲಿದೆ. ಶನಿವಾರ ಮಾತ್ರ ಬೆಂಗಳೂರಿನಿಂದ ಮಂಗಳೂರಿಗೆ ಇಂಡಿಗೋ ವಿಮಾನ ಬರಲಿದ್ದು, ಅದೇ ವಿಮಾನ 6.35ಕ್ಕೆ ಪುಣೆ ಹೊರಡಲಿದೆ.
ಇಂಡಿಗೋ ಸಂಸ್ಥೆಯ ಹೊಸ ವಿಮಾನ ಸಂಚಾರದಿಂದ ಮಂಗಳೂರು – ಬೆಂಗಳೂರು ಮತ್ತು ಮಂಗಳೂರು- ಪುಣೆ ನಡುವೆ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ. ಸೋಮವಾರದಿಂದ ಶುಕ್ರವಾರಕ್ಕೆ 38ರಿಂದ 40 ವಿಮಾನಗಳ ಸಂಚಾರ ಆಗಲಿದ್ದರೆ, ಅದೇ ಶನಿವಾರ ಮತ್ತು ಭಾನುವಾರ 40ರಿಂದ 42 ವಿಮಾನಗಳು ಸಂಚಾರ ನಡೆಸಲಿವೆ. ಇದಲ್ಲದೆ, ಮಂಗಳೂರು ಏರ್ಪೋರ್ಟಿನಿಂದ ಇತರ ಏರ್ ಸಂಸ್ಥೆಗಳ ಜೊತೆಗೂ ಸಂಪರ್ಕದಲ್ಲಿದ್ದು, ಮತ್ತಷ್ಟು ವಿಮಾನಗಳ ಸಂಚಾರ ಸದ್ಯದಲ್ಲೇ ಆಗಲಿದೆ ಎಂದು ಮಂಗಳೂರು ಏರ್ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
The Mangaluru International Airport (MIA) is all set to get an additional daily flight during the weekdays and an additional flight on Saturday to Bengaluru from September 7. With these additional flights that IndiGo will operate till October 28, the number of daily flights to Bengaluru will go up to five during weekdays/Sundays and six on Saturdays. At present, IndiGo is operating all four flights daily to Bengaluru
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm