ಬ್ರೇಕಿಂಗ್ ನ್ಯೂಸ್
06-09-23 04:11 pm Mangalore Correspondent ಕರಾವಳಿ
ಪುತ್ತೂರು, ಸೆ.6: ಹಿಂದೂ ಧರ್ಮದ ಹುಟ್ಟು ಗೊತ್ತಿಲ್ಲದ ಪರಮೇಶ್ವರ್ ಅವರ ಹೆಸರನ್ನು ಇಸ್ಮಾಯಿಲ್ ಅಂತ ಯಾಕೆ ಇಟ್ಟಿಲ್ಲ. ಸ್ಟಾಲಿನ್ ಎಂದು ಹೆಸರು ಇಡಬಹುದಿತ್ತಲ್ಲ. ಯಾಕೆ ಇವರ ಹೆತ್ತವರು ಪರಮೇಶ್ವರ್ ಅಂತ ಇಟ್ಟುಕೊಂಡಿದ್ದರು... ಹಿಂದು ಧರ್ಮದ ಹುಟ್ಟು ತಿಳಿದಿಲ್ಲ ಎಂದು ಕಟಕಿಯಾಡಿದ್ದ ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ, ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಇದೊಂದು ಹುಚ್ಚು ಶುರುವಾಗಿದೆ. ಸನಾತನ ಧರ್ಮದ ಬಗ್ಗೆ ದೂಷಣೆ ಮಾಡಿದರೆ ಅಲ್ಪಸಂಖ್ಯಾತರ ಮತ ಸಿಗುತ್ತೆ. ಅಧಿಕಾರ ಸಿಗುತ್ತೆ ಅನ್ನುವ ಕಾರಣಕ್ಕೆ ಈ ರೀತಿ ಹಗುರ ಹೇಳಿಕೆ ನೀಡುತ್ತಾರೆ. ಹಿಂದು ಧರ್ಮದ ಹುಟ್ಟು ಗೊತ್ತಿಲ್ಲದ ಪರಮೇಶ್ವರ್ ಅವರ ಹೆಸರನ್ನು ಇಸ್ಮಾಯಿಲ್ ಅಂತ ಯಾಕೆ ಇಟ್ಟಿಲ್ಲ. ಸ್ಟಾಲಿನ್ ಎಂದು ಹೆಸರು ಇಟ್ಕೊಳ್ಳಬಹುದಿತ್ತಲ್ಲ. ಊರಲ್ಲಿ ಇರುವ ದೇವಸ್ಥಾನಕ್ಕೆಲ್ಲ ಭೇಟಿ ನೀಡುವ ಪರಮೇಶ್ವರ್, ದೇವಸ್ಥಾನದ ಹೊರಗೆ ಬಂದ ಬಳಿಕ ಈ ರೀತಿ ಹೇಳಿಕೆ ನೀಡುತ್ತಾರೆ.

ಸನಾತನ ಧರ್ಮದ ಹುಟ್ಟು ಯಾರಿಗೂ ತಿಳಿದಿಲ್ಲ, ಸನಾತನ ಧರ್ಮಕ್ಕೆ ಹುಟ್ಟೂ ಇಲ್ಲ, ನಾಶವೂ ಇಲ್ಲ, ಕ್ರಿಶ್ಚಿಯನ್, ಇಸ್ಲಾಂ ಮತ ಇತ್ತೀಚೆಗೆ ಹುಟ್ಟಿರುವ ಮತಗಳು. ಸನಾತನ ಧರ್ಮ ನಿತ್ಯ ನೂತನವಾದ ಧರ್ಮ. ಎಲ್ಲಾ ಕಾಲಕ್ಕೂ ಎಲ್ಲವನ್ನೂ ಒಪ್ಪಿಕೊಳ್ಳುವ ಧರ್ಮ. ಕಾಲಕ್ಕೆ ತಕ್ಕಂತೆ ತನ್ನಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶವಿರುವ ಧರ್ಮ. ಹಿಂದೆ ಇದ್ದ ಬಾಲ್ಯವಿವಾಹ, ವರದಕ್ಷಿಣೆ ಮೊದಲಾದ ಪಿಡುಗನ್ನು ನಿವಾರಣೆ ಮಾಡಿಕೊಂಡಿದ್ದೇ ಇದಕ್ಕೆ ಉದಾಹರಣೆ.
ಮೂಢನಂಬಿಕೆಯನ್ನು ತೊಡೆದು ಹಾಕುವ ಕೆಲಸವನ್ನು ಮಹಾಪುರುಷರು ಮಾಡಿದ್ದಾರೆ. ಈಗಿರುವ ಕೆಲವು ಆಚರಣೆಗಳನ್ನೂ ಬದಲಾಯಿಸಲಾಗುತ್ತದೆ. ಆ ಬದಲಾವಣೆಯನ್ನು ನಾವು ಮಾಡುತ್ತೇವೆ. ಆದರೆ ಇಸ್ಲಾಂ ಮತ್ತು ಕ್ರಿಶ್ಚಿಯನ್ ಮತದಲ್ಲಿ ಈ ಅವಕಾಶವಿಲ್ಲ. ಆ ಕಾರಣಕ್ಕಾಗಿಯೇ ಆ ಮತದ ಜನರೇ ತಮ್ಮ ಮತವನ್ನು ಒಪ್ಪಿಕೊಳ್ಳುತ್ತಿಲ್ಲ. ಅಮೆರಿಕಾ ಮತ್ತು ಬ್ರಿಟನ್ ನಲ್ಲಿ ಚರ್ಚುಗಳಿಗೆ ಜನ ಬರುತ್ತಿಲ್ಲ. ಆ ಕಾರಣಕ್ಕಾಗಿ ಅಲ್ಲಿ ಚರ್ಚುಗಳನ್ನು ಹರಾಜಿಗೆ ಇಡುತ್ತಿದ್ದಾರೆ.
ಚಂದ್ರನ ಬಗ್ಗೆ ಸನಾತನ ಧರ್ಮದಲ್ಲಿ ಉಲ್ಲೇಖವಿದೆ. ಕೃಷ್ಣ ಪರ್ವ, ಶ್ವೇತ ಪರ್ವದಲ್ಲಿ ಉಲ್ಲೇಖ ಇರುವುದನ್ನು ನೋಡಿದ್ದೇವೆ. ಆ ಸತ್ಯ ಈಗ ಚಂದ್ರಯಾನ-3 ಉಡಾವಣೆ ಯಶಸ್ವಿಯಾದಾಗ ಬೆಳಕಿಗೆ ಬಂದಿದೆ. ಸನಾತನ ಧರ್ಮ ಮತ್ತು ವಿಜ್ಞಾನ ಪರಸ್ಪರ ಒಪ್ಪಿಕೊಂಡಿದೆ. ಹಿಂದೂ ಧರ್ಮ ಮತ್ತು ವಿಜ್ಞಾನ ಒಟ್ಟೊಟ್ಟಿಗೆ ಹೋಗುತ್ತದೆ. ಸನಾತನ ಧರ್ಮದ ಬಗ್ಗೆ ಮಾತನಾಡುವ ಉದಯನಿಧಿ ಸ್ಟಾಲಿನ್ ತಂದೆ ಹಿಂದೂ ಧರ್ಮದ ಸತ್ವ ಒಪ್ಪಿಕೊಂಡಿದ್ದರು. ಅವರ ಕಾರನ್ನು ಅವರ ಮನೆ ಮುಂದೆ ದೇವಸ್ಥಾನಕ್ಕೆ ಮುಖ ಮಾಡಿ ನಿಲ್ಲಿಸುತ್ತಿದ್ದರು. ಈಗ ಢೋಂಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸನಾತನ ಧರ್ಮದ ಬಗ್ಗೆ ಮಾತನಾಡುವವರು ಎಚ್ಚರಿಕೆಯಿಂದ ಮಾತನಾಡಬೇಕು ಎಂದರು.
Mangalore Kalladka Prabhakar Bhat slams Home Minister G Parameshwara over his remarks on Hinduism. Karnataka minister G Parameshwara’s comments about the origins of Hinduism have stirred a fresh row even as a case has been registered against his ministerial colleague Priyank Kharge and Tamil Nadu minister Udhayanidhi Stalin for allegedly outraging religious feelings over their remarks about the sanatana dharma.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm