ಬ್ರೇಕಿಂಗ್ ನ್ಯೂಸ್
06-09-23 07:19 pm Mangalore Correspondent ಕರಾವಳಿ
ಮಂಗಳೂರು, ಸೆ.6: ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ ನಡೆಯುವ ಹಿನ್ನೆಲೆಯಲ್ಲಿ ಧಾರ್ಮಿಕ ಆಚರಣೆ, ಮೆರವಣಿಗೆ ಇನ್ನಿತರ ಉತ್ಸವಗಳಲ್ಲಿ ಸಾವಿರಾರು ಜನರು ಸೇರುವುದರಿಂದ ಆಯಾ ಭಾಗದಲ್ಲಿ ಆಸುಪಾಸಿನ ಮದ್ಯದಂಗಡಿಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ವ್ಯಾಪ್ತಿಗಳಲ್ಲಿ ಆಯಾ ಭಾಗದ ಪೊಲೀಸ್ ವರಿಷ್ಠರ ಕೋರಿಕೆಯಂತೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಸೆ.6ರಂದು ಕಂಕನಾಡಿ ವೆಲೆನ್ಸಿಯಾ ಜಂಕ್ಷನ್, ಬಂಟ್ಸ್ ಹಾಸ್ಟೆಲ್ ಆಸುಪಾಸಿನಲ್ಲಿ, ಉಳ್ಳಾಲ ಠಾಣೆ ವ್ಯಾಪ್ತಿಯ ಕುಂಪಲ, ತಲಪಾಡಿ ಆಸುಪಾಸಿನಲ್ಲಿ ಮದ್ಯದಂಗಡಿ ನಿಷೇಧ ಇರುತ್ತದೆ.
ಸೆ.7ರಂದು ಅತ್ತಾವರ ಕಟ್ಟೆ ಆಸುಪಾಸಿನಲ್ಲಿ, ಉರ್ವಾ ಸ್ಟೋರ್ ಜಂಕ್ಷನ್, ಅಶೋಕನಗರ ಜಂಕ್ಷನ್, ಉರ್ವಾ ಮೈದಾನ, ಬೊಕ್ಕಪಟ್ನ ಜಂಕ್ಷನ್, ಕದ್ರಿ ಕಂಬ್ಲ ಆಸುಪಾಸಿನ ಮಲ್ಲಿಕಟ್ಟೆಯ ಮದ್ಯದಂಗಡಿಗಳು, ವಾಮಂಜೂರು, ತಿರುವೈಲ್ ನಲ್ಲಿ ಮದ್ಯ ನಿಷೇಧ ಇರುತ್ತದೆ. ಅಲ್ಲದೆ, ಮರೋಳಿ, ಕುಲಶೇಖರ ಚೌಕಿ, ಸುದರ್ಶನ್ ನಗರ ಪಜೀರು, ಅಸೈಗೋಳಿ, ನೆತ್ತಿಲಪದವು, ತೊಕ್ಕೊಟ್ಟು, ಕೆಳಗಿನ ತಲಪಾಡಿ, ಪಂಜಿಮೊಗರು ಜಂಕ್ಷನ್, ಕಾವೂರು, ಮೂಡುಶೆಡ್ಡೆ ಜಂಕ್ಷನ್, ಕುಂಜತ್ತ್ ಬೈಲು, ಕುಳೂರು, ಪಕ್ಷಿಕೆರೆ- ಅತ್ತೂರು, ಮೂಡುಬಿದ್ರೆ ಪೇಟೆಯಲ್ಲಿರುವ ಮದ್ಯದಂಗಡಿಗಳು ಬಂದ್ ಆಗಲಿವೆ. ಸುರತ್ಕಲ್ ಇಡ್ಯಾ, ಕುಳಾಯಿ, ಜೋಕಟ್ಟೆ, ಕಳವಾರು, ಕೃಷ್ಣಾಪುರ- ಕಾಟಿಪಳ್ಳ, ಚಿತ್ರಾಪುರ, ಮುಕ್ಕ ವಠಾರದಲ್ಲಿ ಮದ್ಯ ನಿಷೇಧ ಇರಲಿದೆ.
ಇದೇ ರೀತಿ ದಕ್ಷಿಣ ಕನ್ನಡ ಪೊಲೀಸ್ ವ್ಯಾಪ್ತಿಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಪುತ್ತೂರು ನಗರ ಠಾಣೆ, ಪುತ್ತೂರು ಗ್ರಾಮಾಂತರ ಠಾಣೆ, ಉಪ್ಪಿನಂಗಡಿ ಠಾಣೆ, ಸುಳ್ಯ ಠಾಣೆ, ಬೆಳ್ಳಾರೆ ಠಾಣೆ ವ್ಯಾಪ್ತಿಯಲ್ಲಿ ಸೆ.7ರಿಂದ 9ರ ವರೆಗೆ ವಿವಿಧ ಕಡೆಗಳಲ್ಲಿ ನಡೆಯುವ ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವದ ನಿಮಿತ್ತ ಆಯಾ ಭಾಗದಲ್ಲಿ ಮದ್ಯದಂಗಡಿ ನಿಷೇಧ ಇರಲಿದೆ.
Closure of all liquor shops to be closed in Dakshina Kannada and Mangalore over Mosaru Kudike.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm