ಬ್ರೇಕಿಂಗ್ ನ್ಯೂಸ್
06-09-23 10:57 pm Mangalore Correspondent ಕರಾವಳಿ
ಮಂಗಳೂರು, ಸೆ.6: ಕೋವಿಡ್ ಬಳಿಕ ಮಂಗಳೂರು ನಗರದಲ್ಲಿ ಸಂಚಾರ ನಿಲ್ಲಿಸಿದ್ದ 13 ಸರಕಾರಿ ಬಸ್ ಗಳನ್ನು ಮರು ಜಾರಿಗೊಳಿಸಬೇಕೆಂದು ಕಾಂಗ್ರೆಸ್ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ ನೀಡಿರುವ ಮನವಿಯನ್ನು ರಾಜ್ಯ ಸರಕಾರ ಪುರಸ್ಕರಿಸಿದೆ. ಸೆ.7ರಿಂದಲೇ ದಿನಕ್ಕೊಂದು ಬಸ್ಸಿನಂತೆ 13 ರೂಟ್ ಗಳಲ್ಲಿಯೂ ಸರಕಾರಿ ಬಸ್ ಇಳಿಸುವುದಾಗಿ ಮಂಗಳೂರು ಸಾರಿಗೆ ಡಿಪೋ ಅಧಿಕಾರಿ ರಾಜೇಶ್ ಶೆಟ್ಟಿ ತಿಳಿಸಿದ್ದಾರೆ.
ಇದರಂತೆ, ಶಕ್ತಿನಗರದಿಂದ ಸ್ಟೇಟ್ ಬ್ಯಾಂಕಿಗೆ ಸೆ.7ರಂದು ಬೆಳಗ್ಗೆ 9.45ಕ್ಕೆ ಹೊಸತಾಗಿ ಸರಕಾರಿ ಬಸ್ ಸಂಚಾರ ನಡೆಸಲಿದೆ. ಇದರ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾಡಲಿದ್ದಾರೆ. 13 ಬಸ್ ಗಳಲ್ಲಿ ಮಂಗಳೂರು ವಯಾ ಸುರತ್ಕಲ್ ನಿಂದ ಕಟೀಲು, ಮಂಗಳೂರಿನಿಂದ ಸೋಮೇಶ್ವರ, ಮಂಗಳೂರು ರೈಲ್ವೇ ಸ್ಟೇಶನ್ನಿಂದ ಬಜ್ಪೆ, ಸ್ಟೇಟ್ ಬ್ಯಾಂಕ್ ವೃತ್ತದಿಂದ ಶಕ್ತಿನಗರ, ಕುಂಜತ್ ಬೈಲ್, ಕಾಟಿಪಳ್ಳ, ಕೈಕಂಬ, ಪಿಲಿಕುಳ, ಮಂಗಳಪೇಟೆ, ಬಜಾಲ್ ಚರ್ಚ್, ಫೈಸಲ್ ನಗರ, ತಲಪಾಡಿ, ಕೀನ್ಯಾಕ್ಕೆ ಸರಕಾರಿ ಬಸ್ ಸಂಚಾರ ಇತ್ತು.
ಈ ಪೈಕಿ 11 ಬಸ್ ಗಳು ನರ್ಮ್ ಯೋಜನೆಯಡಿ ಮಂಗಳೂರು ನಗರಕ್ಕೆ ಮಂಜೂರಾಗಿದ್ದ ಸರಕಾರಿ ಬಸ್ಗಳಾಗಿದ್ದವು. ಒಟ್ಟು 22 ನರ್ಮ್ ಬಸ್ ಗಳಲ್ಲಿ ಕೋವಿಡ್ ಬಳಿಕ ಬಹುತೇಕ ಬಸ್ ಗಳನ್ನು ನಿಲ್ಲಿಸಲಾಗಿತ್ತು. ಇದೀಗ ರಾಜ್ಯ ಕಾಂಗ್ರೆಸ್ ಸರಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಎರಡು ತಿಂಗಳ ಹಿಂದೆಯೇ ಈ ಯೋಜನೆ ಆರಂಭಗೊಂಡಿದ್ದರೂ, ಮಂಗಳೂರು ನಗರದಲ್ಲಿ ಖಾಸಗಿ ಬಸ್ಸುಗಳೇ ಹೆಚ್ಚಿರುವುದರಿಂದ ಇದರ ಲಾಭ ಮಂಗಳೂರಿನ ಮಂದಿಗೆ ಸಿಕ್ಕಿರಲಿಲ್ಲ. ಹೀಗಾಗಿ ನಿಂತು ಹೋಗಿದ್ದ ಈ ಹಿಂದೆ ಸಂಚಾರ ಮಾಡುತ್ತಿದ್ದ ಬಸ್ ಗಳನ್ನು ಮತ್ತೆ ಸಂಚರಿಸುವಂತೆ ಮಾಡಬೇಕೆಂದು ವಕೀಲರೂ ಆಗಿರುವ ಮನೋರಾಜ್ ರಾಜೀವ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವರಿಕೆ ಮಾಡಿದ್ದರು. ಅಲ್ಲದೆ, ಮುಖ್ಯಮಂತ್ರಿ ಆದಿಯಾಗಿ ಅಧಿಕಾರಿ ವರ್ಗಕ್ಕೂ ಮನವಿಯನ್ನು ನೀಡಿದ್ದರು. ಅದರ ಫಲವಾಗಿ ಈಗ ಮತ್ತೆ ಸರಕಾರಿ ಬಸ್ ಗಳನ್ನು ಓಡಿಸಲು ಮಂಗಳೂರು ಕೆಎಸ್ಸಾರ್ಟಿಸಿ ಡಿಪೋ ಒಪ್ಪಿಕೊಂಡಿದೆ.
13 new government buses added to Mangalore city under Shakthi Yogana.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 08:13 pm
HK Staffer
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 07:37 pm
HK Staffer
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm