ಬ್ರೇಕಿಂಗ್ ನ್ಯೂಸ್
06-09-23 10:57 pm Mangalore Correspondent ಕರಾವಳಿ
ಮಂಗಳೂರು, ಸೆ.6: ಕೋವಿಡ್ ಬಳಿಕ ಮಂಗಳೂರು ನಗರದಲ್ಲಿ ಸಂಚಾರ ನಿಲ್ಲಿಸಿದ್ದ 13 ಸರಕಾರಿ ಬಸ್ ಗಳನ್ನು ಮರು ಜಾರಿಗೊಳಿಸಬೇಕೆಂದು ಕಾಂಗ್ರೆಸ್ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ ನೀಡಿರುವ ಮನವಿಯನ್ನು ರಾಜ್ಯ ಸರಕಾರ ಪುರಸ್ಕರಿಸಿದೆ. ಸೆ.7ರಿಂದಲೇ ದಿನಕ್ಕೊಂದು ಬಸ್ಸಿನಂತೆ 13 ರೂಟ್ ಗಳಲ್ಲಿಯೂ ಸರಕಾರಿ ಬಸ್ ಇಳಿಸುವುದಾಗಿ ಮಂಗಳೂರು ಸಾರಿಗೆ ಡಿಪೋ ಅಧಿಕಾರಿ ರಾಜೇಶ್ ಶೆಟ್ಟಿ ತಿಳಿಸಿದ್ದಾರೆ.
ಇದರಂತೆ, ಶಕ್ತಿನಗರದಿಂದ ಸ್ಟೇಟ್ ಬ್ಯಾಂಕಿಗೆ ಸೆ.7ರಂದು ಬೆಳಗ್ಗೆ 9.45ಕ್ಕೆ ಹೊಸತಾಗಿ ಸರಕಾರಿ ಬಸ್ ಸಂಚಾರ ನಡೆಸಲಿದೆ. ಇದರ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾಡಲಿದ್ದಾರೆ. 13 ಬಸ್ ಗಳಲ್ಲಿ ಮಂಗಳೂರು ವಯಾ ಸುರತ್ಕಲ್ ನಿಂದ ಕಟೀಲು, ಮಂಗಳೂರಿನಿಂದ ಸೋಮೇಶ್ವರ, ಮಂಗಳೂರು ರೈಲ್ವೇ ಸ್ಟೇಶನ್ನಿಂದ ಬಜ್ಪೆ, ಸ್ಟೇಟ್ ಬ್ಯಾಂಕ್ ವೃತ್ತದಿಂದ ಶಕ್ತಿನಗರ, ಕುಂಜತ್ ಬೈಲ್, ಕಾಟಿಪಳ್ಳ, ಕೈಕಂಬ, ಪಿಲಿಕುಳ, ಮಂಗಳಪೇಟೆ, ಬಜಾಲ್ ಚರ್ಚ್, ಫೈಸಲ್ ನಗರ, ತಲಪಾಡಿ, ಕೀನ್ಯಾಕ್ಕೆ ಸರಕಾರಿ ಬಸ್ ಸಂಚಾರ ಇತ್ತು.
ಈ ಪೈಕಿ 11 ಬಸ್ ಗಳು ನರ್ಮ್ ಯೋಜನೆಯಡಿ ಮಂಗಳೂರು ನಗರಕ್ಕೆ ಮಂಜೂರಾಗಿದ್ದ ಸರಕಾರಿ ಬಸ್ಗಳಾಗಿದ್ದವು. ಒಟ್ಟು 22 ನರ್ಮ್ ಬಸ್ ಗಳಲ್ಲಿ ಕೋವಿಡ್ ಬಳಿಕ ಬಹುತೇಕ ಬಸ್ ಗಳನ್ನು ನಿಲ್ಲಿಸಲಾಗಿತ್ತು. ಇದೀಗ ರಾಜ್ಯ ಕಾಂಗ್ರೆಸ್ ಸರಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಎರಡು ತಿಂಗಳ ಹಿಂದೆಯೇ ಈ ಯೋಜನೆ ಆರಂಭಗೊಂಡಿದ್ದರೂ, ಮಂಗಳೂರು ನಗರದಲ್ಲಿ ಖಾಸಗಿ ಬಸ್ಸುಗಳೇ ಹೆಚ್ಚಿರುವುದರಿಂದ ಇದರ ಲಾಭ ಮಂಗಳೂರಿನ ಮಂದಿಗೆ ಸಿಕ್ಕಿರಲಿಲ್ಲ. ಹೀಗಾಗಿ ನಿಂತು ಹೋಗಿದ್ದ ಈ ಹಿಂದೆ ಸಂಚಾರ ಮಾಡುತ್ತಿದ್ದ ಬಸ್ ಗಳನ್ನು ಮತ್ತೆ ಸಂಚರಿಸುವಂತೆ ಮಾಡಬೇಕೆಂದು ವಕೀಲರೂ ಆಗಿರುವ ಮನೋರಾಜ್ ರಾಜೀವ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವರಿಕೆ ಮಾಡಿದ್ದರು. ಅಲ್ಲದೆ, ಮುಖ್ಯಮಂತ್ರಿ ಆದಿಯಾಗಿ ಅಧಿಕಾರಿ ವರ್ಗಕ್ಕೂ ಮನವಿಯನ್ನು ನೀಡಿದ್ದರು. ಅದರ ಫಲವಾಗಿ ಈಗ ಮತ್ತೆ ಸರಕಾರಿ ಬಸ್ ಗಳನ್ನು ಓಡಿಸಲು ಮಂಗಳೂರು ಕೆಎಸ್ಸಾರ್ಟಿಸಿ ಡಿಪೋ ಒಪ್ಪಿಕೊಂಡಿದೆ.
13 new government buses added to Mangalore city under Shakthi Yogana.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm