ಬ್ರೇಕಿಂಗ್ ನ್ಯೂಸ್
06-09-23 11:06 pm Mangalore Correspondent ಕರಾವಳಿ
ಮಂಗಳೂರು, ಸೆ.6: ಹಿಂದುಗಳ ಹಲವು ಸಾಂಪ್ರದಾಯಿಕ ಮತ್ತು ಮಹತ್ವದ ಹಬ್ಬಗಳನ್ನು ಆಚರಿಸುವ ಸಂದರ್ಭ ಕಟ್ಟುನಿಟ್ಟಿನ ನಿಯಮಗಳನ್ನು ಹೇರಿ ಹಬ್ಬದ ಆಚರಣೆಯನ್ನು ತಡೆಯುಟ್ಟುವ ಕ್ರಮ ಸರಿಯಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಇತ್ತೀಚೆಗೆ ಮಂಗಳೂರು ಪೊಲೀಸ್ ಕಮಿಷನರ್ ಅವರ ಆದೇಶದಂತೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಹಲವು ಕಠಿಣ ನಿಯಮಗಳನ್ನು ಹೇರಿ ಆದೇಶ ಹೊರಡಿಸಿದ್ದರು. ಇದು ಸಾಂಪ್ರದಾಯಿಕ ಹಬ್ಬದ ಆಚರಣೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಕಾನೂನುಗಳನ್ನು ನೆಪವಾಗಿಟ್ಟುಕೊಂಡು ಹಬ್ಬದ ಆಚರಣೆಯ ಮೇಲೆ ನಿಯಂತ್ರಣ ಹೇರುವುದು ಸರಿಯಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಬ್ಬ ಆಚರಿಸುವ ಸಮಿತಿಯ ಪ್ರಮುಖರ ಫೋಟೋಗಳನ್ನು, ಆಚರಿಸುವ ಜಾಗದ ದಾಖಲೆಗಳನ್ನು ಠಾಣೆಗೆ ತಂದುಪ್ಪಿಸಬೇಕು ಎಂಬ ನಿರ್ದೇಶನ ಸಮಂಜಸವಾದುದಲ್ಲ. ಸಮಿತಿಯಲ್ಲಿರುವ ಸದಸ್ಯರೆಲ್ಲರೂ ಗೌರವಾನ್ವಿತ ವ್ಯಕ್ತಿಗಳಾಗಿದ್ದಾರೆ. ಅವರ ಫೋಟೋಗಳನ್ನು ಠಾಣೆಗೆ ತರಿಸುವ ವ್ಯವಸ್ಥೆ ಎಷ್ಟು ಸರಿ ? ಎಂದು ಅವರು ಪ್ರಶ್ನಿಸಿದ್ದಾರೆ.
ಇನ್ನು ಹಬ್ಬದ ಆಚರಣೆಯ ಸಂದರ್ಭ ಮೆರವಣಿಗೆಗಳನ್ನು ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು ಎಂಬ ನಿಯಮ ಹೇಳಿರುವುದು ಮೆರವಣಿಗೆಯನ್ನು ಹತ್ತಿಕ್ಕುವ ಯತ್ನದ ಒಂದು ಭಾಗವಾಗಿದೆ. ಮಂಗಳೂರು ವಿವಿಯಲ್ಲಿ ಕೂಡ ಗಣೇಶ ಹಬ್ಬ ಆಚರಣೆ ಮಾಡಬಾರದು ಎಂಬ ಸೂಚನೆಯೂ ಕಾಂಗ್ರೆಸ್ ಸರಕಾರದ ಹಿಡನ್ ಅಜೆಂಡಾವೇ ಆಗಿದೆ ಎಂದು ಅವರು ದೂರಿದ್ದಾರೆ.
ಸಾಂಪ್ರದಾಯಿಕವಾಗಿ ಈ ಹಿಂದಿನಂತೆ ನಡೆದು ಬಂದ ಹಬ್ಬವು ಯಥಾಸ್ಥಿತಿ ಆಚರಣೆಗೆ ಆಡಳಿತ ಅವಕಾಶ ಮಾಡಿಕೊಡಬೇಕು. ಬಿಜೆಪಿ ಸರ್ಕಾರ ಆಡಳಿತವಿದ್ದ ಸಂದರ್ಭ ಹಬ್ಬದ ಆಚರಣೆಗಳಿಗೆ ಯಾವುದೇ ಕಟ್ಟುನಿಟ್ಟಿನ ನಿಬಂಧನೆಗಳನ್ನು ವಿಧಿಸಲಾಗಿರಲಿಲ್ಲ. ಇದೀಗ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಹಿಂದೂಗಳ ಸಾಂಪ್ರದಾಯಕ ಹಬ್ಬದ ಆಚರಣೆಗಳ ಮೇಲೆ ನಿಯಂತ್ರಣ ಹೇರಿ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಹಬ್ಬದ ಆಚರಣೆಗೆ ಅಡ್ಡಿಪಡಿಸುವುದನ್ನು ನಾವು ಸಹಿಸುವುದಿಲ್ಲ ಎಂದು ಶಾಸಕ ಕಾಮತ್ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.
Mangaluru South MLA D Vedavyas Kamath has said that it is not right to impose strict rules while celebrating many traditional and important festivals of Hindus.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm