ಬ್ರೇಕಿಂಗ್ ನ್ಯೂಸ್
09-11-20 01:31 pm Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 09 : ಕೊರೋನಾ ಹೆಸರಲ್ಲಿ ಹಣ ಬಂದಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬ ಮಹಿಳೆಯಿಂದ ಚಿನ್ನ ಎಗರಿಸಿ ಪರಾರಿಯಾಗಿರುವ ಘಟನೆ ಬಿ.ಸಿ.ರೋಡ್ ನಲ್ಲಿ ನಡೆದಿದೆ.
ಅಮ್ಟಾಡಿ ನಿವಾಸಿ, ಜಯಂತಿ ಮೋಸ ಹೋದ ಮಹಿಳೆ. ಬಿ.ಸಿ.ರೋಡಿನ ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಬಿಲ್ ಪಾವತಿಸಿ ವಾಪಸ್ ಹೋಗುತ್ತಿದ್ದ ಜಯಂತಿ ಅವರನ್ನು ಅಪರಿಚಿತ ವ್ಯಕ್ತಿಯೊಬ್ಬ ತನ್ನ ಪರಿಚಯ ಮಾಡಿಕೊಂಡಿದ್ದಾನೆ. ತಾನು, ಶೀನಪ್ಪ ಅವರ ಮಗ ಸಂತೋಷ್ ಎಂದು ಹೇಳಿ ನಂಬಿಸಿದ್ದಾನೆ. ನಿಮಗೆ ಕೊರೋನಾ ಹೆಸರಲ್ಲಿ ಒಂದೂವರೆ ಲಕ್ಷ ರೂಪಾಯಿ ಹಣ ಬಂದಿದೆ. ಅದನ್ನು ಪಡೆಯಲು ಹತ್ತು ಸಾವಿರ ರೂಪಾಯಿ ಪಾವತಿಸಬೇಕು ಎಂದು ಹೇಳಿದ್ದಲ್ಲದೆ ಅರ್ಜಿ ತುಂಬಿಸಲೆಂದು ಮಹಿಳೆಯನ್ನು ಮಿನಿ ವಿಧಾನಸೌಧಕ್ಕೆ ಕರೆದೊಯ್ದಿದ್ದಾನೆ. ಹಣ ಕೇಳಿದ್ದಕ್ಕೆ ಮಹಿಳೆ ಈಗ ನನ್ನಲ್ಲಿ ಹಣ ಇಲ್ಲ ಎಂದಿದ್ದಾರೆ. ಮಗನಿಗೆ ಕರೆ ಮಾಡಿ ಹಣ ಇದೆಯಾ ಎಂದು ಕೇಳುತ್ತೇನೆ ಎಂದಿದ್ದು, ಅದಕ್ಕೆ ಯುವಕ, ಮಗನಿಗೆ ನಾನು ಆಗಲೇ ಕರೆ ಮಾಡಿ ಕೇಳಿದ್ದೇನೆ. ಆತ ಇಲ್ಲ ಎಂದಿದ್ದಾನೆ. ತಾಯಿಯಲ್ಲಿ ಹಣ ಇಲ್ಲದಿದ್ದರೆ ಅವರ ಚಿನ್ನ ಪಡೆದು ಹಣ ತೆಗೆಯುವಂತೆ ಹೇಳಿದ್ದಾನೆಂದು ಅಪರಿಚಿತ ವ್ಯಕ್ತಿ ಮಹಿಳೆಯನ್ನು ನಂಬಿಸಿದ್ದಾನೆ.
ಅಪರಿಚಿತನ ಮಾತನ್ನು ನಂಬಿದ ಮಹಿಳೆ ಕಿವಿಯಲ್ಲಿದ್ದ ಬೆಂಡೋಲೆ ತೆಗೆದು ಕೊಟ್ಟಿದ್ದಾರೆ. ಚಿನ್ನ ಪಡೆದ ವ್ಯಕ್ತಿ ನೀವು ಇಲ್ಲೇ ಕುಳಿತುಕೊಳ್ಳಿ ಎಂದು ಹೇಳಿ ಹೋದವನು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಕೊನೆಗೆ ಮಹಿಳೆ ಮಿನಿ ವಿಧಾನಸೌಧದ ಕಚೇರಿಯ ಮಹಿಳಾ ಸಿಬ್ಬಂದಿ ಮೂಲಕ ಮಗನಿಗೆ ಕರೆ ಮಾಡಿ ವಿಷಯ ತಿಳಿಸಿದ್ದು ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದೆ.
ಸ್ಥಳಕ್ಕೆ ಬಂದ ಅವರ ಮಗ ತಾಯಿಯನ್ನು ಬಂಟ್ವಾಳ ನಗರ ಠಾಣೆಗೆ ಕರೆದುಕೊಂಡು ಹೋಗಿ ದೂರು ನೀಡಿದ್ದಾರೆ. ಮಿನಿ ವಿಧಾನ ಸೌಧದಲ್ಲಿರುವ ಸಿ.ಸಿ. ಕ್ಯಾಮರ ದೃಷ್ಯ ಆಧರಿಸಿ, ಆರೋಪಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
In an incident that occurred on the morning of Monday, November 9, a financially poor woman lost her gold as she was fooled by fraudsters saying that she has got ‘Corona’ money in her name but need to pay fee in order to get the same and made good with her gold.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm