ಬ್ರೇಕಿಂಗ್ ನ್ಯೂಸ್
08-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.8: ಮಂಗಳೂರು ಮಹಾನಗರ ಪಾಲಿಕೆಯ 24ನೇ ಮೇಯರ್ ಆಗಿ ಕೊಡಿಯಾಲ್ ಬೈಲ್ ವಾರ್ಡಿನ ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆಯಾಗಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಸುನಿತಾ ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆಯ ನಾಲ್ಕನೇ ಅವಧಿಗೆ ಮೇಯರ್ ಆಯ್ಕೆ ಇಂದು ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಪಾಲಿಕೆಯಲ್ಲಿ 44 ಸದಸ್ಯರೊಂದಿಗೆ ಬಹುಮತ ಹೊಂದಿರುವ ಬಿಜೆಪಿ ನಿರಾಯಾಸವಾಗಿ ಚುನಾವಣೆ ಗೆದ್ದಿದೆ. ಕಾಂಗ್ರೆಸಿನಿಂದ ನವೀನ್ ಡಿಸೋಜ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅವರಿಗೆ ಪಕ್ಷದಲ್ಲಿ ಆಯ್ಕೆಯಾಗಿದ್ದ 14 ಸದಸ್ಯರು ಮತ ನೀಡಿದ್ದಾರೆ. ಬಿಜೆಪಿ ಪರವಾಗಿ ಸಂಸದ ನಳಿನ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಇದ್ದರು. ಅವರೂ ಮತ ಚಲಾವಣೆ ಮಾಡಿದ್ದರಿಂದ ಸುಧೀರ್ ಶೆಟ್ಟಿ ಪರವಾಗಿ 47 ಮತಗಳು ಲಭಿಸಿದ್ದವು.

ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿತ್ತು. ಬಿಜೆಪಿಯಿಂದ ತಣ್ಣೀರುಬಾವಿ ವಾರ್ಡ್ ಸದಸ್ಯೆ ಸುನಿತಾ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸಿನಿಂದ ಆ ಸ್ಥಾನಕ್ಕೆ ಸ್ಪರ್ಧಿಸಲು ಸದಸ್ಯರಿಲ್ಲದ ಕಾರಣ ಅವಿರೋಧ ಆಯ್ಕೆಯಾದರು. ಎಸ್ಡಿಪಿಐ ಪಕ್ಷದ ಇಬ್ಬರು ಸದಸ್ಯರು ಚುನಾವಣೆ ಸಂದರ್ಭದಲ್ಲಿ ತಟಸ್ಥರಾಗುಳಿದರು.
ಮೂರನೇ ಬಾರಿ ಕಾರ್ಪೊರೇಟರ್ ಆಗಿರುವ ಸುಧೀರ್ ಶೆಟ್ಟಿ ಈ ಬಾರಿ ಮೊದಲ ಅವಧಿಯಲ್ಲೇ ಮೇಯರ್ ಸ್ಥಾನದ ಆಕಾಂಕ್ಷಿಯಾಗಿದ್ದರು. ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿದ್ದರಿಂದ ಆಗ ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಈ ಬಾರಿ ಸಾಮಾನ್ಯ ವರ್ಗಕ್ಕೆ ಮೇಯರ್ ಸ್ಥಾನ ಲಭಿಸಿದ್ದರಿಂದ ಸುಧೀರ್ ಶೆಟ್ಟಿಗೆ ಸ್ಥಾನ ಒಲಿದು ಬಂದಿದೆ.
Sudhir Shetty Kannur was elected as mayor of Mangaluru City Corporation (MCC) and Suneetha Salian as the deputy mayor in 24th MCC elections held at MCC office on Friday September 8.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm