ಬ್ರೇಕಿಂಗ್ ನ್ಯೂಸ್
08-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.8: ಮಂಗಳೂರು ಮಹಾನಗರ ಪಾಲಿಕೆಯ 24ನೇ ಮೇಯರ್ ಆಗಿ ಕೊಡಿಯಾಲ್ ಬೈಲ್ ವಾರ್ಡಿನ ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆಯಾಗಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಸುನಿತಾ ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆಯ ನಾಲ್ಕನೇ ಅವಧಿಗೆ ಮೇಯರ್ ಆಯ್ಕೆ ಇಂದು ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಪಾಲಿಕೆಯಲ್ಲಿ 44 ಸದಸ್ಯರೊಂದಿಗೆ ಬಹುಮತ ಹೊಂದಿರುವ ಬಿಜೆಪಿ ನಿರಾಯಾಸವಾಗಿ ಚುನಾವಣೆ ಗೆದ್ದಿದೆ. ಕಾಂಗ್ರೆಸಿನಿಂದ ನವೀನ್ ಡಿಸೋಜ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅವರಿಗೆ ಪಕ್ಷದಲ್ಲಿ ಆಯ್ಕೆಯಾಗಿದ್ದ 14 ಸದಸ್ಯರು ಮತ ನೀಡಿದ್ದಾರೆ. ಬಿಜೆಪಿ ಪರವಾಗಿ ಸಂಸದ ನಳಿನ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಇದ್ದರು. ಅವರೂ ಮತ ಚಲಾವಣೆ ಮಾಡಿದ್ದರಿಂದ ಸುಧೀರ್ ಶೆಟ್ಟಿ ಪರವಾಗಿ 47 ಮತಗಳು ಲಭಿಸಿದ್ದವು.

ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿತ್ತು. ಬಿಜೆಪಿಯಿಂದ ತಣ್ಣೀರುಬಾವಿ ವಾರ್ಡ್ ಸದಸ್ಯೆ ಸುನಿತಾ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸಿನಿಂದ ಆ ಸ್ಥಾನಕ್ಕೆ ಸ್ಪರ್ಧಿಸಲು ಸದಸ್ಯರಿಲ್ಲದ ಕಾರಣ ಅವಿರೋಧ ಆಯ್ಕೆಯಾದರು. ಎಸ್ಡಿಪಿಐ ಪಕ್ಷದ ಇಬ್ಬರು ಸದಸ್ಯರು ಚುನಾವಣೆ ಸಂದರ್ಭದಲ್ಲಿ ತಟಸ್ಥರಾಗುಳಿದರು.
ಮೂರನೇ ಬಾರಿ ಕಾರ್ಪೊರೇಟರ್ ಆಗಿರುವ ಸುಧೀರ್ ಶೆಟ್ಟಿ ಈ ಬಾರಿ ಮೊದಲ ಅವಧಿಯಲ್ಲೇ ಮೇಯರ್ ಸ್ಥಾನದ ಆಕಾಂಕ್ಷಿಯಾಗಿದ್ದರು. ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿದ್ದರಿಂದ ಆಗ ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಈ ಬಾರಿ ಸಾಮಾನ್ಯ ವರ್ಗಕ್ಕೆ ಮೇಯರ್ ಸ್ಥಾನ ಲಭಿಸಿದ್ದರಿಂದ ಸುಧೀರ್ ಶೆಟ್ಟಿಗೆ ಸ್ಥಾನ ಒಲಿದು ಬಂದಿದೆ.
Sudhir Shetty Kannur was elected as mayor of Mangaluru City Corporation (MCC) and Suneetha Salian as the deputy mayor in 24th MCC elections held at MCC office on Friday September 8.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm