ಬ್ರೇಕಿಂಗ್ ನ್ಯೂಸ್
08-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.8: ಮಂಗಳೂರು ಮಹಾನಗರ ಪಾಲಿಕೆಯ 24ನೇ ಮೇಯರ್ ಆಗಿ ಕೊಡಿಯಾಲ್ ಬೈಲ್ ವಾರ್ಡಿನ ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆಯಾಗಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಸುನಿತಾ ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆಯ ನಾಲ್ಕನೇ ಅವಧಿಗೆ ಮೇಯರ್ ಆಯ್ಕೆ ಇಂದು ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಪಾಲಿಕೆಯಲ್ಲಿ 44 ಸದಸ್ಯರೊಂದಿಗೆ ಬಹುಮತ ಹೊಂದಿರುವ ಬಿಜೆಪಿ ನಿರಾಯಾಸವಾಗಿ ಚುನಾವಣೆ ಗೆದ್ದಿದೆ. ಕಾಂಗ್ರೆಸಿನಿಂದ ನವೀನ್ ಡಿಸೋಜ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅವರಿಗೆ ಪಕ್ಷದಲ್ಲಿ ಆಯ್ಕೆಯಾಗಿದ್ದ 14 ಸದಸ್ಯರು ಮತ ನೀಡಿದ್ದಾರೆ. ಬಿಜೆಪಿ ಪರವಾಗಿ ಸಂಸದ ನಳಿನ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಇದ್ದರು. ಅವರೂ ಮತ ಚಲಾವಣೆ ಮಾಡಿದ್ದರಿಂದ ಸುಧೀರ್ ಶೆಟ್ಟಿ ಪರವಾಗಿ 47 ಮತಗಳು ಲಭಿಸಿದ್ದವು.

ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿತ್ತು. ಬಿಜೆಪಿಯಿಂದ ತಣ್ಣೀರುಬಾವಿ ವಾರ್ಡ್ ಸದಸ್ಯೆ ಸುನಿತಾ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸಿನಿಂದ ಆ ಸ್ಥಾನಕ್ಕೆ ಸ್ಪರ್ಧಿಸಲು ಸದಸ್ಯರಿಲ್ಲದ ಕಾರಣ ಅವಿರೋಧ ಆಯ್ಕೆಯಾದರು. ಎಸ್ಡಿಪಿಐ ಪಕ್ಷದ ಇಬ್ಬರು ಸದಸ್ಯರು ಚುನಾವಣೆ ಸಂದರ್ಭದಲ್ಲಿ ತಟಸ್ಥರಾಗುಳಿದರು.
ಮೂರನೇ ಬಾರಿ ಕಾರ್ಪೊರೇಟರ್ ಆಗಿರುವ ಸುಧೀರ್ ಶೆಟ್ಟಿ ಈ ಬಾರಿ ಮೊದಲ ಅವಧಿಯಲ್ಲೇ ಮೇಯರ್ ಸ್ಥಾನದ ಆಕಾಂಕ್ಷಿಯಾಗಿದ್ದರು. ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿದ್ದರಿಂದ ಆಗ ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಈ ಬಾರಿ ಸಾಮಾನ್ಯ ವರ್ಗಕ್ಕೆ ಮೇಯರ್ ಸ್ಥಾನ ಲಭಿಸಿದ್ದರಿಂದ ಸುಧೀರ್ ಶೆಟ್ಟಿಗೆ ಸ್ಥಾನ ಒಲಿದು ಬಂದಿದೆ.
Sudhir Shetty Kannur was elected as mayor of Mangaluru City Corporation (MCC) and Suneetha Salian as the deputy mayor in 24th MCC elections held at MCC office on Friday September 8.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm