ಬ್ರೇಕಿಂಗ್ ನ್ಯೂಸ್
08-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.8: ಮಂಗಳೂರು ಮಹಾನಗರ ಪಾಲಿಕೆಯ 24ನೇ ಮೇಯರ್ ಆಗಿ ಕೊಡಿಯಾಲ್ ಬೈಲ್ ವಾರ್ಡಿನ ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆಯಾಗಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಸುನಿತಾ ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆಯ ನಾಲ್ಕನೇ ಅವಧಿಗೆ ಮೇಯರ್ ಆಯ್ಕೆ ಇಂದು ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಪಾಲಿಕೆಯಲ್ಲಿ 44 ಸದಸ್ಯರೊಂದಿಗೆ ಬಹುಮತ ಹೊಂದಿರುವ ಬಿಜೆಪಿ ನಿರಾಯಾಸವಾಗಿ ಚುನಾವಣೆ ಗೆದ್ದಿದೆ. ಕಾಂಗ್ರೆಸಿನಿಂದ ನವೀನ್ ಡಿಸೋಜ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅವರಿಗೆ ಪಕ್ಷದಲ್ಲಿ ಆಯ್ಕೆಯಾಗಿದ್ದ 14 ಸದಸ್ಯರು ಮತ ನೀಡಿದ್ದಾರೆ. ಬಿಜೆಪಿ ಪರವಾಗಿ ಸಂಸದ ನಳಿನ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಇದ್ದರು. ಅವರೂ ಮತ ಚಲಾವಣೆ ಮಾಡಿದ್ದರಿಂದ ಸುಧೀರ್ ಶೆಟ್ಟಿ ಪರವಾಗಿ 47 ಮತಗಳು ಲಭಿಸಿದ್ದವು.

ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿತ್ತು. ಬಿಜೆಪಿಯಿಂದ ತಣ್ಣೀರುಬಾವಿ ವಾರ್ಡ್ ಸದಸ್ಯೆ ಸುನಿತಾ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸಿನಿಂದ ಆ ಸ್ಥಾನಕ್ಕೆ ಸ್ಪರ್ಧಿಸಲು ಸದಸ್ಯರಿಲ್ಲದ ಕಾರಣ ಅವಿರೋಧ ಆಯ್ಕೆಯಾದರು. ಎಸ್ಡಿಪಿಐ ಪಕ್ಷದ ಇಬ್ಬರು ಸದಸ್ಯರು ಚುನಾವಣೆ ಸಂದರ್ಭದಲ್ಲಿ ತಟಸ್ಥರಾಗುಳಿದರು.
ಮೂರನೇ ಬಾರಿ ಕಾರ್ಪೊರೇಟರ್ ಆಗಿರುವ ಸುಧೀರ್ ಶೆಟ್ಟಿ ಈ ಬಾರಿ ಮೊದಲ ಅವಧಿಯಲ್ಲೇ ಮೇಯರ್ ಸ್ಥಾನದ ಆಕಾಂಕ್ಷಿಯಾಗಿದ್ದರು. ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿದ್ದರಿಂದ ಆಗ ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಈ ಬಾರಿ ಸಾಮಾನ್ಯ ವರ್ಗಕ್ಕೆ ಮೇಯರ್ ಸ್ಥಾನ ಲಭಿಸಿದ್ದರಿಂದ ಸುಧೀರ್ ಶೆಟ್ಟಿಗೆ ಸ್ಥಾನ ಒಲಿದು ಬಂದಿದೆ.
Sudhir Shetty Kannur was elected as mayor of Mangaluru City Corporation (MCC) and Suneetha Salian as the deputy mayor in 24th MCC elections held at MCC office on Friday September 8.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm