ಬ್ರೇಕಿಂಗ್ ನ್ಯೂಸ್
08-09-23 04:47 pm Mangalore Correspondent ಕರಾವಳಿ
ಮಂಗಳೂರು, ಸೆ.8: ಮಂಗಳೂರು ಯುನಿವರ್ಸಿಟಿಯಲ್ಲಿ ಗಣೇಶೋತ್ಸವ ಮಾಡೋದು ಅಲ್ಲಿನ ಹಾಸ್ಟೆಲ್ ಮಕ್ಕಳು ಮತ್ತು ಸಿಬಂದಿಗೆ ಬಿಟ್ಟದ್ದು. ಅದರ ಬಗ್ಗೆ ಹೊರಗಿನವರು ಮೂಗು ತೂರಿಸಿ ರಾಜಕೀಯ ಮಾಡುವ ಅಗತ್ಯವಿಲ್ಲ. ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಿಬಂದಿಗೆ ಮೂರು ತಿಂಗಳಿನಿಂದ ಸಂಬಳ ಆಗಿಲ್ಲ. ಕಳೆದ ವರ್ಷದ ಪದವಿ ಫಲಿತಾಂಶ ಇನ್ನೂ ಬಂದಿಲ್ಲ. ಇದರ ಬಗ್ಗೆ ಜನಪ್ರತಿನಿಧಿಗಳು ಎಂದಾದರೂ ಮಾತನಾಡಿದ್ದಾರೆಯೇ ಎಂದು ಮಂಗಳೂರು ವಿಧಾನಸಭೆ ಕ್ಷೇತ್ರದ ಶಾಸಕ, ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದಿದ್ದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖಾದರ್, ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ದೊಡ್ಡ ಹಿಸ್ಟರಿ ಇದೆ, ಹಿಂದಿನಿಂದಲೂ ಎ ಗ್ರೇಡಲ್ಲಿದ್ದ ಯುನಿವರ್ಸಿಟಿ. ಆದರೆ ಈಗ ಎರಡು ವರ್ಷದಲ್ಲಿ ಬಿ ಗ್ರೇಡ್ ಆಗಿದೆ. ಯಾಕೆ ಶಿಕ್ಷಣದ ಗುಣಮಟ್ಟ ಕುಸಿತ ಆಯ್ತು ಅನ್ನೋದರ ಚಿಂತೆ ಇವರಿಗಿದೆಯೇ.. ಎಂದು ರಾಜಕೀಯ ವಿವಾದಕ್ಕೆ ಎಳೆದಿರುವ ಬಿಜೆಪಿ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ.
ಗಣೇಶೋತ್ಸವ ಮಾಡುವುದಕ್ಕೆ ಉಪ ಕುಲಪತಿ ತಕರಾರು ಮಾಡಿಲ್ಲ. ಹಿಂದಿನಿಂದಲೂ ಹಾಸ್ಟೆಲ್ ಮಕ್ಕಳು ಗಣೇಶೋತ್ಸವ ಮಾಡ್ಕೊಂಡು ಬಂದಿದ್ದಾರೆ. ಆದರೆ ಅದಕ್ಕೆ ಅನುದಾನ ಬಳಸುವುದರಲ್ಲಿ ನಿಯಮಗಳಿವೆ. ಆಡಿಟ್ ವರದಿಯಲ್ಲಿ ಆಕ್ಷೇಪ ಬಂದಿರುವುದರಿಂದ ಹಿಂದಿನ ರೀತಿಯಲ್ಲಿ ಅನುದಾನ ಬಳಸಲು ಆಗಲ್ಲ ಎಂದಿದ್ದಾರೆ. ಆದರೆ ಯುನಿವರ್ಸಿಟಿಯಲ್ಲಿ ಬೇಕಾಬಿಟ್ಟಿ ನೇಮಕಾತಿ, ಅನುದಾನವನ್ನು ಬೇರೆಡೆಗೆ ಹಾಕಿದ್ದರಿಂದ ಅಲ್ಲೀಗ ದುಡ್ಡಿನ ಕೊರತೆ ಇದೆ. ನಿವೃತ್ತಿಯಾಗುವ ಶಿಕ್ಷಕರಿಗೆ ಪಿಂಚಣಿ ಕೊಡುವುದಕ್ಕೂ ಹಣ ಇಲ್ಲ. ಸಿಬಂದಿಗೆ ಸಂಬಳ ಆಗಿಲ್ಲ. ಜನಪ್ರತಿನಿಧಿಗಳು ಯಾವುದಕ್ಕೆ ಮಹತ್ವ ಕೊಡಬೇಕು. ಜನಪ್ರತಿನಿಧಿಗಳು ಈ ಬಗ್ಗೆ ಸ್ಪಂದನೆ ನೀಡಿದ್ದಾರೆಯೇ ಎಂದು ಪ್ರಶ್ನಿಸಿದರು.
ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಣದ ಗುಣಮಟ್ಟ ಉತ್ತಮ ಇರಬೇಕು. ಆಡಳಿತವನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಈಗ ಉಪ ಕುಲಪತಿಯವರು ನಿಮಯ ಏನಿದೆಯೋ ಅದನ್ನು ನೋಡಿಕೊಂಡು ಕೆಲಸ ಮಾಡುತ್ತಿದ್ದಾರೆ. ಅಲ್ಲೇನೋ ಅನಗತ್ಯ ಬಿಲ್ಡಿಂಗ್ ಕಟ್ಟಿದ್ದು, ಈಗ ಬಂದಿರುವ ಅನುದಾನವನ್ನು ಅದರ ಕಂಟ್ರಾಕ್ಟರಿಗೆ ಕೊಟ್ಟಿದ್ದಾರೆ. ಆತ ಅರ್ಧಕ್ಕೆ ಬಿಟ್ಟು ಹೋಗಿದ್ದಾನೆ. ಇದರಿಂದ ಹಣದ ಕೊರತೆ ಆಗಿದೆ ಎಂದರು.
ಸಿಬಂದಿ ಕಡಿತಕ್ಕೆ ಹಣಕಾಸು ಇಲಾಖೆಯಿಂದ ಸೂಚನೆ ಬಂದಿದೆಯಂತೆ ಎಂದು ಕೇಳಿದ ಪ್ರಶ್ನೆಗೆ, ಯುನಿವರ್ಸಿಟಿಯಲ್ಲಿ ಬೇಕಾಬಿಟ್ಟಿ ನೇಮಕಾತಿ ಮಾಡಿಕೊಂಡಿದ್ದಾರೆ. ಹತ್ತನೇ ಕ್ಲಾಸ್ ಆದವನಿಗೆ 40 ಸಾವಿರ ಸಂಬಳ ಇದೆ, ಡಿಗ್ರಿಯಾದವರಿಗೆ 20 ಸಾವಿರ ಇದೆ. ಇದನ್ನೆಲ್ಲ ನೀವು ಕೇಳಿಕೊಂಡು ಸುದ್ದಿ ಮಾಡಬೇಕು ಎಂದು ಖಾದರ್ ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ನಡೆಸುವ ವಿಚಾರದಲ್ಲಿ ವಿವಾದ ಉಂಟಾಗಿದ್ದು, ಸದ್ಯಕ್ಕೆ ವಿಸಿ ಜಯರಾಜ ಅಮೀನ್ ಸ್ಪಷ್ಟನೆಯನ್ನೂ ನೀಡಿದ್ದಾರೆ. ನಾವು ಗಣೇಶೋತ್ಸವ ನಡೆಸುವುದಕ್ಕೆ ಅಡ್ಡಿ ಪಡಿಸಿಲ್ಲ. ಹಾಸ್ಟೆಲ್ ವ್ಯವಸ್ಥೆಯಲ್ಲಿ ಸಾಕು, ಸಭಾಂಗಣದಲ್ಲಿ ಮಾಡುವ ಅಗತ್ಯವಿಲ್ಲ ಎಂದಿದ್ದೆ. ಸಭಾಂಗಣವೇ ಬೇಕೆಂದಿದ್ದರೆ ಮಕ್ಕಳು ಮತ್ತು ಸಿಬಂದಿ ಸೇರಿಕೊಂಡು ಮಾಡಿಕೊಳ್ಳಲಿ. ಅನುದಾನ ಕೊಡಿಸಲು ಸಾಧ್ಯವಿಲ್ಲ. ಹಾಸ್ಟೆಲ್ ಫಂಡಿನಿಂದ ಅನುದಾನ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದ್ದರು. ಇದರ ನಡುವೆ ಈ ಬಗ್ಗೆ ರಾಜ್ಯ ಸರಕಾರಕ್ಕೆ ವಿಸಿ ಜಯರಾಜ ಅಮೀನ್ ಪತ್ರ ಬರೆದಿದ್ದು ವಿವಾದಕ್ಕೆ ಕಾರಣವಾಗಿತ್ತು.
Speaker UT Khader Slams about Mangalore University in regards to ganeshotsav
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm