ಬ್ರೇಕಿಂಗ್ ನ್ಯೂಸ್
09-11-20 02:14 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 09 :ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಖಾಸಗೀಕರಣಗೊಳಿಸಿ ಅದಾನಿ ಕಂಪೆನಿಗೆ ಗುತ್ತಿಗೆ ವಹಿಸಿರುವ ಕೇಂದ್ರ ಸರಕಾರದ ಕ್ರಮವನ್ನ ಖಂಡಿಸಿ ಬಜ್ಪೆ ಬಳಿಯ ಕೆಂಜಾರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿಮಾನ ನಿಲ್ದಾಣ ಪ್ರವೇಶ ದ್ವಾರವಿರುವ ನಗರದ ಕೆಂಜಾರು ಬಳಿ ಸೇರಿದ ಸುಮಾರು 50 ಕ್ಕೂ ಅಧಿಕ ಕಾರ್ಯಕರ್ತರು ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಮಂಗಳೂರಿಗೆ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗಾಗಿ ಜನಾರ್ದನ ಪೂಜಾರಿ, ಆಸ್ಕರ್ ಫೆರ್ನಾಂಡಿಸ್ ಕೇಂದ್ರಕ್ಕೆ ಒತ್ತಡ ಹೇರಿದ್ದರು. ಅದರ ಫಲವಾಗಿ ಇಂದಿನ ವಿಸ್ತೃತ ವಿಮಾನ ನಿಲ್ದಾಣ ರೆಡಿಯಾಗಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದು ವಿಮಾನ ನಿಲ್ದಾಣವನ್ನೇ ಅದಾನಿಗೆ ಕೊಟ್ಟಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಈ ಜಿಲ್ಲೆಗೆ ಕೊಟ್ಟ ಕೊಡುಗೆ ಏನು ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.



ಮಾಜಿ ಶಾಸಕ ಜೆ.ಆರ್ ಲೋಬೊ ಮಾತನಾಡಿ, ಎನ್ ಎಂಪಿಟಿ ಅನುಷ್ಠಾನಕ್ಕೆ ತಂದಿದ್ದು ಯು.ಎಸ್.ಮಲ್ಯರು. ಅದರ ಅಭಿವೃದ್ಧಿಗಾಗಿ ಶ್ರಮಿಸಿದ್ದು ವೀರಪ್ಪ ಮೊಯ್ಲಿ. ಈಗ ವಿಮಾನ ನಿಲ್ದಾಣ ಖಾಸಗಿಯವರಿಗೆ ಕೊಟ್ಟಿದ್ದಾರೆ. ಇನ್ನು ಎನ್ಎಂಪಿಟಿ ಬಂದರನ್ನೂ ಖಾಸಗಿಗೆ ಕೊಡಲ್ಲ ಎನ್ನುವ ಗ್ಯಾರಂಟಿಯಿಲ್ಲ.. ಈ ಜಿಲ್ಲೆಯ ಬ್ಯಾಂಕ್ ಗಳನ್ನೆಲ್ಲ ಇನ್ನಿಲ್ಲವಾಗಿಸಿದ್ದಾರೆ. ಹಾಗಾದರೆ ಬಿಜೆಪಿಯಿಂದ ಈ ಜಿಲ್ಲೆಗೆ ಸಿಕ್ಕಿದ ಕೊಡುಗೆ ಏನು? ಬಿಜೆಪಿಯವರೇ ಇಲ್ಲಿನದ್ದೆಲ್ಲ ಖಾಸಗಿಗೆ ಕೊಟ್ಟು ಮುಗಿಸಿದ್ದು ಬಿಟ್ಟರೆ ಸಾಧಿಸಿದ್ದು ಏನು ಎಂದು ಕೇಳಿದ್ದಾರೆ.
ಅಲ್ಲದೆ, ವಿಮಾನ ನಿಲ್ದಾಣಕ್ಕೆ ತುಳುನಾಡಿನ ಆರಾಧನಾ ಪುರುಷರಾದ ಕೋಟಿ ಚೆನ್ನಯ್ಯ ಇಲ್ಲವೇ ಮಂಗಳೂರು ಅಭಿವೃದ್ಧಿಯ ರೂವಾರಿ ಶ್ರೀನಿವಾಸ್ ಮಲ್ಯ ಅವರ ಹೆಸರಿಡುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಅಭಯಚಂದ್ರ ಜೈನ್, ಐವನ್ ಡಿಸೋಜಾ, ಮಿಥುನ್ ರೈ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತು ಒದಗಿಸಲಾಗಿತ್ತು.
Video:
Congress Leaders and Members protests at khanjar, near Mangalore Airport, against privatisation issue and takes over of Mangalore International Airport by Adani Group for commercial operations.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm