ಬ್ರೇಕಿಂಗ್ ನ್ಯೂಸ್
09-09-23 10:53 pm Mangalore Correspondent ಕರಾವಳಿ
ಮಂಗಳೂರು, ಸೆ.9: ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದ ಯವತಿಯೊಬ್ಬಳನ್ನು ಕದ್ರಿ ಪೊಲೀಸರು ಠಾಣೆಯಲ್ಲಿ ಹಿಡಿದಿಡಲು ಹರಸಾಹಸ ಪಟ್ಟ ವಿಡಿಯೋ ವೈರಲ್ ಆಗಿದ್ದು ಪೊಲೀಸ್ ಕಮಿಷನರ್ ಈ ಬಗ್ಗೆ ಅರೆಬರೆ ಸ್ಪಷ್ಟನೆ ನೀಡಿದ್ದಾರೆ.
ಸೆ.1 ರಂದು ಬೆಳಗ್ಗೆ 6.45ಕ್ಕೆ ಪಂಪ್ವೆಲ್ ನಲ್ಲಿ ಮೆಡಿಕಲ್ ಒಂದಕ್ಕೆ ಯುವತಿ ಬಂದಿದ್ದು ಆಕ್ರಮಣಕಾರಿಯಾಗಿ ವರ್ತಿಸುತ್ತಿದ್ದಳು. ರೌಂಡ್ಸ್ ನಲ್ಲಿದ್ದ ಅಬಕಾರಿ ಇಲಾಖೆಯವರು ಆಕೆಯನ್ನು ಹಿಡಿದು ಆಸ್ಪತ್ರೆಗೆ ಒಯ್ಯಲು ಯತ್ನಿಸಿದಾಗ, ಅಲ್ಲಿಯೂ ಆಕೆ ದಾಳಿಗೆ ಮುಂದಾಗಿದ್ದಾಳೆ. ಇದರಿಂದ ಬೇಸತ್ತು ಯುವತಿಯನ್ನು ಕದ್ರಿ ಠಾಣೆಗೆ ತಂದಿದ್ದರು. ಆದರೆ ಯುವತಿಯನ್ನು ಅಲ್ಲಿಯೂ ಹಿಡಿದಿಡಲು ಮಹಿಳಾ ಸಿಬಂದಿ ಹರಸಾಹಸ ಪಟ್ಟಿದ್ದಾರೆ.
ಬಳಿಕ ಕಾಲಿಗೆ ಕೋಳ ತೊಡಿಸಿ ಕೈಕಾಲು ಕಟ್ಟಿ ಆಸ್ಪತ್ರೆಗೆ ಒಯ್ದಿದ್ದು ತಪಾಸಣೆ ಮಾಡಿದ್ದಾರೆ. ಡ್ರಗ್ಸ್ ವ್ಯಸನದಿಂದ ಆಕೆ ಈ ರೀತಿ ವರ್ತಿಸುತ್ತಿದ್ದಾಳೆಂಬ ಸಂಶಯದಿಂದ ಚೆಕ್ ಮಾಡಿದಾಗ, ನೆಗೆಟಿವ್ ಬಂದಿದೆ. ಪೋಷಕರ ಬಗ್ಗೆ ಕೇಳಿದಾಗಲೂ ಮಾಹಿತಿ ನೀಡುತ್ತಿರಲಿಲ್ಲ. ಒಮ್ಮೆ ಹಿಂದಿ, ಇನ್ನೊಮ್ಮೆ ಇಂಗ್ಲಿಷ್ ಮಾತಾಡುತ್ತಿದ್ದಳು. ಮಾನಸಿಕ ತಜ್ಞರಲ್ಲಿ ತೋರಿಸಬೇಕೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಕಡೆಗೆ ಪೊಲೀಸರು ಒಯ್ಯುತ್ತಿದ್ದಾಗ, ಆಕೆ ತನ್ನ ಮನೆ ಇಲ್ಲೇ ಇದೆಯೆಂದು ಹೇಳಿದ್ದಾಳೆ. ಬಳಿಕ ಪೋಷಕರಿಗೆ ಮಾಹಿತಿ ನೀಡಿ, ಮತ್ತೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪೋಷಕರು ಪೊಲೀಸರಿಗೆ ನೀಡಿರುವ ಮಾಹಿತಿ ಪ್ರಕಾರ, ಆಕೆಗೆ ಮಾನಸಿಕ ಸಮಸ್ಯೆಯಂತೆ. ಹಾಗಾಗಿ ಮನೆಯಲ್ಲೇ ಇಟ್ಟು ಚಿಕಿತ್ಸೆ ನೀಡುತ್ತಿದ್ದರಂತೆ. ಆದರೆ, ಈ ಕುರಿತು ಸರಿಯಾದ ಮಾಹಿತಿ ಪೊಲೀಸರಲ್ಲಿ ಇಲ್ಲ. ಡ್ರಗ್ಸ್ ವ್ಯಸನಕ್ಕೆ ಬಲಿಯಾದವರು ಡ್ರಗ್ ಸಿಗದೇ ಇದ್ದಾಗ ಈ ರೀತಿ ವ್ಯಗ್ರವಾಗಿ ವರ್ತಿಸುತ್ತಾರೆ. ಯುವತಿಗೆ ಹಾಗೆ ಆಗಿರಬಹುದೇ ಎಂದು ಪೊಲೀಸರಲ್ಲಿ ಕೇಳಿದರೆ, ಇಲ್ಲ ಎನ್ನುತ್ತಾರೆ. ಆಕೆಯ ಸಮಸ್ಯೆ ಏನು ? ಯಾಕಾಗಿ ಅವಳು ಒಬ್ಬಂಟಿಯಾಗಿ ಅಂದು ಬೆಳಗ್ಗೆ ಪಂಪ್ವೆಲ್ ಬಂದಿದ್ದಳು. ಚಿಕಿತ್ಸೆಯಲ್ಲಿದ್ದರೆ, ಬೆಳ್ಳಂಬೆಳಗ್ಗೆ ಮೆಡಿಕಲ್ ಬಂದಿದ್ದು ಹೇಗೆ.. ವಿದ್ಯಾರ್ಥಿನಿಯೇ ಎಂದು ಕೇಳಿದರೆ, ಅದಕ್ಕೂ ಪೊಲೀಸರಲ್ಲಿ ಮಾಹಿತಿಯಿಲ್ಲ.
Mangalore Girl taken into custody by Kadri women Police station thinking as Drug addict, video goes viral. Later police have came to know that she was mentally challenged girl and later was sent to home.
21-08-25 06:24 pm
Bangalore Correspondent
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm