ಬ್ರೇಕಿಂಗ್ ನ್ಯೂಸ್
09-09-23 10:53 pm Mangalore Correspondent ಕರಾವಳಿ
ಮಂಗಳೂರು, ಸೆ.9: ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದ ಯವತಿಯೊಬ್ಬಳನ್ನು ಕದ್ರಿ ಪೊಲೀಸರು ಠಾಣೆಯಲ್ಲಿ ಹಿಡಿದಿಡಲು ಹರಸಾಹಸ ಪಟ್ಟ ವಿಡಿಯೋ ವೈರಲ್ ಆಗಿದ್ದು ಪೊಲೀಸ್ ಕಮಿಷನರ್ ಈ ಬಗ್ಗೆ ಅರೆಬರೆ ಸ್ಪಷ್ಟನೆ ನೀಡಿದ್ದಾರೆ.
ಸೆ.1 ರಂದು ಬೆಳಗ್ಗೆ 6.45ಕ್ಕೆ ಪಂಪ್ವೆಲ್ ನಲ್ಲಿ ಮೆಡಿಕಲ್ ಒಂದಕ್ಕೆ ಯುವತಿ ಬಂದಿದ್ದು ಆಕ್ರಮಣಕಾರಿಯಾಗಿ ವರ್ತಿಸುತ್ತಿದ್ದಳು. ರೌಂಡ್ಸ್ ನಲ್ಲಿದ್ದ ಅಬಕಾರಿ ಇಲಾಖೆಯವರು ಆಕೆಯನ್ನು ಹಿಡಿದು ಆಸ್ಪತ್ರೆಗೆ ಒಯ್ಯಲು ಯತ್ನಿಸಿದಾಗ, ಅಲ್ಲಿಯೂ ಆಕೆ ದಾಳಿಗೆ ಮುಂದಾಗಿದ್ದಾಳೆ. ಇದರಿಂದ ಬೇಸತ್ತು ಯುವತಿಯನ್ನು ಕದ್ರಿ ಠಾಣೆಗೆ ತಂದಿದ್ದರು. ಆದರೆ ಯುವತಿಯನ್ನು ಅಲ್ಲಿಯೂ ಹಿಡಿದಿಡಲು ಮಹಿಳಾ ಸಿಬಂದಿ ಹರಸಾಹಸ ಪಟ್ಟಿದ್ದಾರೆ.

ಬಳಿಕ ಕಾಲಿಗೆ ಕೋಳ ತೊಡಿಸಿ ಕೈಕಾಲು ಕಟ್ಟಿ ಆಸ್ಪತ್ರೆಗೆ ಒಯ್ದಿದ್ದು ತಪಾಸಣೆ ಮಾಡಿದ್ದಾರೆ. ಡ್ರಗ್ಸ್ ವ್ಯಸನದಿಂದ ಆಕೆ ಈ ರೀತಿ ವರ್ತಿಸುತ್ತಿದ್ದಾಳೆಂಬ ಸಂಶಯದಿಂದ ಚೆಕ್ ಮಾಡಿದಾಗ, ನೆಗೆಟಿವ್ ಬಂದಿದೆ. ಪೋಷಕರ ಬಗ್ಗೆ ಕೇಳಿದಾಗಲೂ ಮಾಹಿತಿ ನೀಡುತ್ತಿರಲಿಲ್ಲ. ಒಮ್ಮೆ ಹಿಂದಿ, ಇನ್ನೊಮ್ಮೆ ಇಂಗ್ಲಿಷ್ ಮಾತಾಡುತ್ತಿದ್ದಳು. ಮಾನಸಿಕ ತಜ್ಞರಲ್ಲಿ ತೋರಿಸಬೇಕೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಕಡೆಗೆ ಪೊಲೀಸರು ಒಯ್ಯುತ್ತಿದ್ದಾಗ, ಆಕೆ ತನ್ನ ಮನೆ ಇಲ್ಲೇ ಇದೆಯೆಂದು ಹೇಳಿದ್ದಾಳೆ. ಬಳಿಕ ಪೋಷಕರಿಗೆ ಮಾಹಿತಿ ನೀಡಿ, ಮತ್ತೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪೋಷಕರು ಪೊಲೀಸರಿಗೆ ನೀಡಿರುವ ಮಾಹಿತಿ ಪ್ರಕಾರ, ಆಕೆಗೆ ಮಾನಸಿಕ ಸಮಸ್ಯೆಯಂತೆ. ಹಾಗಾಗಿ ಮನೆಯಲ್ಲೇ ಇಟ್ಟು ಚಿಕಿತ್ಸೆ ನೀಡುತ್ತಿದ್ದರಂತೆ. ಆದರೆ, ಈ ಕುರಿತು ಸರಿಯಾದ ಮಾಹಿತಿ ಪೊಲೀಸರಲ್ಲಿ ಇಲ್ಲ. ಡ್ರಗ್ಸ್ ವ್ಯಸನಕ್ಕೆ ಬಲಿಯಾದವರು ಡ್ರಗ್ ಸಿಗದೇ ಇದ್ದಾಗ ಈ ರೀತಿ ವ್ಯಗ್ರವಾಗಿ ವರ್ತಿಸುತ್ತಾರೆ. ಯುವತಿಗೆ ಹಾಗೆ ಆಗಿರಬಹುದೇ ಎಂದು ಪೊಲೀಸರಲ್ಲಿ ಕೇಳಿದರೆ, ಇಲ್ಲ ಎನ್ನುತ್ತಾರೆ. ಆಕೆಯ ಸಮಸ್ಯೆ ಏನು ? ಯಾಕಾಗಿ ಅವಳು ಒಬ್ಬಂಟಿಯಾಗಿ ಅಂದು ಬೆಳಗ್ಗೆ ಪಂಪ್ವೆಲ್ ಬಂದಿದ್ದಳು. ಚಿಕಿತ್ಸೆಯಲ್ಲಿದ್ದರೆ, ಬೆಳ್ಳಂಬೆಳಗ್ಗೆ ಮೆಡಿಕಲ್ ಬಂದಿದ್ದು ಹೇಗೆ.. ವಿದ್ಯಾರ್ಥಿನಿಯೇ ಎಂದು ಕೇಳಿದರೆ, ಅದಕ್ಕೂ ಪೊಲೀಸರಲ್ಲಿ ಮಾಹಿತಿಯಿಲ್ಲ.
Mangalore Girl taken into custody by Kadri women Police station thinking as Drug addict, video goes viral. Later police have came to know that she was mentally challenged girl and later was sent to home.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm