ಬ್ರೇಕಿಂಗ್ ನ್ಯೂಸ್
11-09-23 06:10 pm Mangalore Correspondent ಕರಾವಳಿ
ಉಳ್ಳಾಲ, ಸೆ.11: ಉಳ್ಳಾಲ ತಾಲೂಕಿನ ಕೊಂಡಾಣ ಮಿತ್ರನಗರದ ನಿವಾಸಿಯೋರ್ವರು ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಹೊರೆಯಲ್ಲಿದ್ದ ವ್ಯಕ್ತಿಯ ಸಾವಿಗೆ ಬೆಟ್ಟಿಂಗ್ ಜಾಲವೇ ಕಾರಣವೆಂದು ತಿಳಿದುಬಂದಿದೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಂಡಾಣ, ಮಿತ್ರನಗರ ನಿವಾಸಿ ರವೀಂದ್ರ(35) ಆತ್ಮಹತ್ಯೆಗೈದ ವ್ಯಕ್ತಿ. ರವೀಂದ್ರ ಅವರು ನಿನ್ನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮಧ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನ ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಒಬ್ಬಂಟಿಯಾಗಿ ಪತ್ನಿಯ ಮನೆ ಸೇರಿದ್ದರಂತೆ. ಸಾಯಂಕಾಲ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ವಿಚಲಿತರಾದ ಪತ್ನಿ ನೆರೆಹೊರೆಯವರಲ್ಲಿ ಕರೆ ಮಾಡಿ ತಿಳಿಸಿದ್ದಾರೆ.
ನೆರೆಮನೆಯ ನಿವಾಸಿಗಳು ಮನೆ ಕಡೆ ತೆರಳಿದಾಗ ರವೀಂದ್ರ ಅವರು ಮನೆಯ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಕೊಂಡಾಣ, ಮಿತ್ರನಗರದಲ್ಲಿ ಮೃತ ರವೀಂದ್ರ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆದಿದೆ.
ರವೀಂದ್ರ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ಸಕ್ರಿಯರಾಗಿದ್ದು ಸಾಲದ ಹೊರೆ ಹೊತ್ತಿದ್ದರು ಎಂದು ಅವರನ್ನ ಬಲ್ಲ ಆಪ್ತರು ತಿಳಿಸಿದ್ದಾರೆ. ಬೆಟ್ಟಿಂಗ್ ಜಾಲದ ಬುಕ್ಕಿಗಳ ಕಿರುಕುಳದಿಂದಲೇ ಅವರು ಪತ್ನಿ ಮತ್ತು ನಾಲ್ಕು ವರ್ಷದ ಕಂದಮ್ಮನನ್ನ ಅನಾಥರಾಗಿಸಿ ಸಾವಿಗೆ ಶರಣಾಗಿರುವುದಾಗಿ ಸ್ನೇಹಿತರು ಹೇಳುತ್ತಿದ್ದಾರೆ.
Ullal Man commits Suicide at wife's house at Bantwal in Mangalore. The deceased has been identifed as Ravindra (35).
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 08:13 pm
HK Staffer
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 07:37 pm
HK Staffer
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm