ಬ್ರೇಕಿಂಗ್ ನ್ಯೂಸ್
11-09-23 06:10 pm Mangalore Correspondent ಕರಾವಳಿ
ಉಳ್ಳಾಲ, ಸೆ.11: ಉಳ್ಳಾಲ ತಾಲೂಕಿನ ಕೊಂಡಾಣ ಮಿತ್ರನಗರದ ನಿವಾಸಿಯೋರ್ವರು ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಹೊರೆಯಲ್ಲಿದ್ದ ವ್ಯಕ್ತಿಯ ಸಾವಿಗೆ ಬೆಟ್ಟಿಂಗ್ ಜಾಲವೇ ಕಾರಣವೆಂದು ತಿಳಿದುಬಂದಿದೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಂಡಾಣ, ಮಿತ್ರನಗರ ನಿವಾಸಿ ರವೀಂದ್ರ(35) ಆತ್ಮಹತ್ಯೆಗೈದ ವ್ಯಕ್ತಿ. ರವೀಂದ್ರ ಅವರು ನಿನ್ನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮಧ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನ ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಒಬ್ಬಂಟಿಯಾಗಿ ಪತ್ನಿಯ ಮನೆ ಸೇರಿದ್ದರಂತೆ. ಸಾಯಂಕಾಲ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ವಿಚಲಿತರಾದ ಪತ್ನಿ ನೆರೆಹೊರೆಯವರಲ್ಲಿ ಕರೆ ಮಾಡಿ ತಿಳಿಸಿದ್ದಾರೆ.
ನೆರೆಮನೆಯ ನಿವಾಸಿಗಳು ಮನೆ ಕಡೆ ತೆರಳಿದಾಗ ರವೀಂದ್ರ ಅವರು ಮನೆಯ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಕೊಂಡಾಣ, ಮಿತ್ರನಗರದಲ್ಲಿ ಮೃತ ರವೀಂದ್ರ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆದಿದೆ.
ರವೀಂದ್ರ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ಸಕ್ರಿಯರಾಗಿದ್ದು ಸಾಲದ ಹೊರೆ ಹೊತ್ತಿದ್ದರು ಎಂದು ಅವರನ್ನ ಬಲ್ಲ ಆಪ್ತರು ತಿಳಿಸಿದ್ದಾರೆ. ಬೆಟ್ಟಿಂಗ್ ಜಾಲದ ಬುಕ್ಕಿಗಳ ಕಿರುಕುಳದಿಂದಲೇ ಅವರು ಪತ್ನಿ ಮತ್ತು ನಾಲ್ಕು ವರ್ಷದ ಕಂದಮ್ಮನನ್ನ ಅನಾಥರಾಗಿಸಿ ಸಾವಿಗೆ ಶರಣಾಗಿರುವುದಾಗಿ ಸ್ನೇಹಿತರು ಹೇಳುತ್ತಿದ್ದಾರೆ.
Ullal Man commits Suicide at wife's house at Bantwal in Mangalore. The deceased has been identifed as Ravindra (35).
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm