ಬ್ರೇಕಿಂಗ್ ನ್ಯೂಸ್
11-09-23 06:10 pm Mangalore Correspondent ಕರಾವಳಿ
ಉಳ್ಳಾಲ, ಸೆ.11: ಉಳ್ಳಾಲ ತಾಲೂಕಿನ ಕೊಂಡಾಣ ಮಿತ್ರನಗರದ ನಿವಾಸಿಯೋರ್ವರು ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಹೊರೆಯಲ್ಲಿದ್ದ ವ್ಯಕ್ತಿಯ ಸಾವಿಗೆ ಬೆಟ್ಟಿಂಗ್ ಜಾಲವೇ ಕಾರಣವೆಂದು ತಿಳಿದುಬಂದಿದೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಂಡಾಣ, ಮಿತ್ರನಗರ ನಿವಾಸಿ ರವೀಂದ್ರ(35) ಆತ್ಮಹತ್ಯೆಗೈದ ವ್ಯಕ್ತಿ. ರವೀಂದ್ರ ಅವರು ನಿನ್ನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮಧ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನ ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಒಬ್ಬಂಟಿಯಾಗಿ ಪತ್ನಿಯ ಮನೆ ಸೇರಿದ್ದರಂತೆ. ಸಾಯಂಕಾಲ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ವಿಚಲಿತರಾದ ಪತ್ನಿ ನೆರೆಹೊರೆಯವರಲ್ಲಿ ಕರೆ ಮಾಡಿ ತಿಳಿಸಿದ್ದಾರೆ.
ನೆರೆಮನೆಯ ನಿವಾಸಿಗಳು ಮನೆ ಕಡೆ ತೆರಳಿದಾಗ ರವೀಂದ್ರ ಅವರು ಮನೆಯ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಕೊಂಡಾಣ, ಮಿತ್ರನಗರದಲ್ಲಿ ಮೃತ ರವೀಂದ್ರ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆದಿದೆ.
ರವೀಂದ್ರ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ಸಕ್ರಿಯರಾಗಿದ್ದು ಸಾಲದ ಹೊರೆ ಹೊತ್ತಿದ್ದರು ಎಂದು ಅವರನ್ನ ಬಲ್ಲ ಆಪ್ತರು ತಿಳಿಸಿದ್ದಾರೆ. ಬೆಟ್ಟಿಂಗ್ ಜಾಲದ ಬುಕ್ಕಿಗಳ ಕಿರುಕುಳದಿಂದಲೇ ಅವರು ಪತ್ನಿ ಮತ್ತು ನಾಲ್ಕು ವರ್ಷದ ಕಂದಮ್ಮನನ್ನ ಅನಾಥರಾಗಿಸಿ ಸಾವಿಗೆ ಶರಣಾಗಿರುವುದಾಗಿ ಸ್ನೇಹಿತರು ಹೇಳುತ್ತಿದ್ದಾರೆ.
Ullal Man commits Suicide at wife's house at Bantwal in Mangalore. The deceased has been identifed as Ravindra (35).
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm