ಬ್ರೇಕಿಂಗ್ ನ್ಯೂಸ್
12-09-23 10:31 pm Mangalore Correspondent ಕರಾವಳಿ
ಮಂಗಳೂರು, ಸೆ.12: ಬಸ್ಸಿಗೆ ಹತ್ತುವ ಸಂದರ್ಭದಲ್ಲಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟ 66 ವರ್ಷದ ವೃದ್ಧ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮೂಡುಬಿದ್ರೆ ಬಳಿಯ ಮಾರೂರು ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ಮೊಮ್ಮಗ ಕಾಲೇಜು ತೆರಳುತ್ತಿದ್ದಾಗ, ಅಜ್ಜಿ ನೀಲಮ್ಮ (66) ಅವರೂ ಆಸ್ಪತ್ರೆಗೆ ತೆರಳುವುದಕ್ಕಾಗಿ ಜೊತೆಗೆ ಬಂದಿದ್ದರು. ಮಾರೂರು ಗ್ರಾಮದ ಕುಂಟೋಡಿ ಎಂಬಲ್ಲಿ ಮೂಡುಬಿದ್ರೆಗೆ ತೆರಳುವ ಖಾಸಗಿ ಬಸ್ಸಿಗೆ ಹತ್ತಿದ್ದಾರೆ. ಆದರೆ, ಮುಂದಿನ ಬಾಗಿಲಿನಿಂದ ನೀಲಮ್ಮ ಬಸ್ ಹತ್ತುತ್ತಿದ್ದಾಗಲೇ ಚಾಲಕನ ಬಸ್ಸನ್ನು ವೇಗವಾಗಿ ಮುಂದಕ್ಕೆ ಚಲಿಸಿದ್ದರಿಂದ ಬಾಗಿಲು ಇಲ್ಲದ ಕಾರಣ ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.
ತಲೆಗೆ ಗಂಭೀರ ಗಾಯಗೊಂಡಿದ್ದ ನೀಲಮ್ಮ ಅವರನ್ನು ಆಸ್ಪತ್ರೆಗೆ ಒಯ್ಯುತ್ತಿದ್ದಾಗಲೇ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಿರ್ವಾಹಕ ಅಶೋಕ್ ಮತ್ತು ಚಾಲಕ ಪ್ರಸನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದು, ಠಾಣೆಯಲ್ಲಿ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳೀಯ ಸಾರ್ವಜನಿಕರು ಬಸ್ ಸಿಬಂದಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಬಸ್ಸನ್ನು ಜಪ್ತಿ ಮಾಡಿದ್ದು ಆರ್ ಟಿಓ ವಶಕ್ಕೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ಬಸ್ಸಿನ ಮುಂದಿನ ಬಾಗಿಲಲ್ಲಿದ್ದ ಬಸ್ಸಿನ ನಿರ್ವಾಹಕರೊಬ್ಬರು ಕೆಳಕ್ಕೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಎಲ್ಲ ಬಸ್ ಮಾಲಕರನ್ನು ಕರೆದು ಬಸ್ಸಿಗೆ ಡೋರ್ ಅಳವಡಿಸುವುದಲ್ಲದೆ, ಸೂಕ್ತ ಕ್ರಮ ವಹಿಸುವಂತೆ ಸೂಚನೆ ನೀಡಿದ್ದರು.
Moodbidri accident, 66 year old women thrown out of bus due to over speed, dies on spot in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm