ಬ್ರೇಕಿಂಗ್ ನ್ಯೂಸ್
14-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.14: ಚೈತ್ರಾ ಕುಂದಾಪುರ ಪ್ರಕರಣ ಮತ್ತು ಆಕೆಯ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ ಬೊಮ್ಮಾಯಿ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಆ ಪ್ರಕರಣದಲ್ಲಿ ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಬಿಜೆಪಿ ಟಿಕೆಟ್ ಕೊಡಿಸ್ತೀವಿ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಈ ವಿಚಾರದಲ್ಲಿ ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟವಿದೆ ಎಂದು ಹೇಳಿದರು.
ಹಿಂದು ಸಂಘಟನೆ ಹೆಸರಲ್ಲಿ ಹೋರಾಟವನ್ನು ಹಲವರು ಮಾಡ್ತಾರೆ, ಹಾಗಂತ ಅವೆಲ್ಲದಕ್ಕೂ ಪಕ್ಷಕ್ಕೆ ಸಂಬಂಧ ಇದೆ ಎನ್ನುವುದು ಸರಿಯಲ್ಲ. ತನಿಖೆ ಆಗಲಿ, ಎಲ್ಲವೂ ಸ್ಷಷ್ಟ ಆಗಲಿದೆ. ದೊಡ್ಡ ದೊಡ್ಡ ಹೆಸರು ಇದೆ ಅಂತ ಈಗ ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳ್ತಾರೆ. ತನಿಖೆ ಆಗಿ ಅದರ ಸತ್ಯ ಹೊರಬರಲಿ ಎಂದರು ಬೊಮ್ಮಾಯಿ.
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಕೇಳಿದ ಪ್ರಶ್ನೆಗೆ, ಮೈತ್ರಿ ಬಗ್ಗೆ ಮಾತುಕತೆ ಆಗಿರುವುದು ಸ್ಪಷ್ಟ. ಆದರೆ ಟಿಕೆಟ್ ಹಂಚಿಕೆ, ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ. ಸದ್ಯ ಪ್ರಾಥಮಿಕ ಹಂತದಲ್ಲಿದೆ, ಬರುವ ದಿನಗಳಲ್ಲಿ ಈ ಬಗ್ಗೆ ವರಿಷ್ಠರು ಚರ್ಚಿಸಿ ನಿರ್ಧರಿಸುತ್ತಾರೆ. ಮೈತ್ರಿ ಸಮಯದಲ್ಲಿ ನಮ್ಮನ್ನ ಮಾತನಾಡಿಸಿ ತೀರ್ಮಾನ ತಗೋತಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ವಿರೋಧ ಪಕ್ಷಗಳು ಒಂದಾಗಿ ಹೆಚ್ಚು ಸೀಟ್ ಪಡೆಯೋದು ಈ ಮೈತ್ರಿಯ ಉದ್ದೇಶ. ಈ ವಿಚಾರದಲ್ಲಿ ಈವರೆಗೆ ನಮ್ಮ ಅಭಿಪ್ರಾಯ ಪಡೆಯುವ ಹಂತಕ್ಕೆ ಬಂದಿಲ್ಲ ಎಂದು ಹೇಳಿದರು.
We have nothing to do with the Chaitra Kundapur case and her business. Former Chief Minister Basavaraj Bommai said that there should be a thorough probe into the case and whoever is involved should be punished severely.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am