ಬ್ರೇಕಿಂಗ್ ನ್ಯೂಸ್
14-09-23 06:22 pm Mangalore Correspondent ಕರಾವಳಿ
ಮಂಗಳೂರು, ಸೆ.14: ಈ ಬಾರಿ ಮಾನ್ಸೂನ್ ಪೂರ್ವದಲ್ಲಿ ಮಳೆ ವಿಫಲವಾದಾಗ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಈಗ ಬರಗಾಲ ಘೋಷಣೆಯಲ್ಲು ವಿಳಂಬ ಮಾಡಿದ್ದಾರೆ. ಸರ್ಕಾರ ವರದಿ ಪಡೆಯುವಲ್ಲಿ ವಿಳಂಬ ಮಾಡುತ್ತಿದೆ. ಈಗ ಮುಂಗಾರು ಹೋಗಿದೆ, ರೈತರಿಗೆ ಸಹಾಯ ಮಾಡೋದಕ್ಕು ಆಗಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬರ ಪರಿಹಾರಕ್ಕು ಮೊದಲು ಕನಿಷ್ಠ ಬೆಳೆ ನಷ್ಟ ಪರಿಹಾರವಾದ್ರೂ ಇವರು ಕೊಡಬೇಕು. ನಮ್ಮ ಅವಧಿಯಲ್ಲಿ ಪ್ರವಾಹ ಸಂದರ್ಭದಲ್ಲಿ ಒಂದು ತಿಂಗಳಲ್ಲೇ ಪರಿಹಾರ ಕೊಟ್ಟಿದ್ದೇವೆ. ನಾವು ಕೇಂದ್ರದ ಮಾನದಂಡಕ್ಕೂ ಕಾಯಲಿಲ್ಲ, ಆದರೆ ಇವರು ಕೇಂದ್ರದ ಮಾನದಂಡ ಅಂತಿದಾರೆ. ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಮನೋಭಾವ ಈ ಸರಕಾರಕ್ಕೆ ಇಲ್ಲ. ಕುಂಟು ನೆಪ ಹೇಳಿಕೊಂಡು ಸರ್ಕಾರ ಕಾಲ ಕಳೀತಿದೆ ಎಂದರು.
ಕಾವೇರಿ ವಿಚಾರದಲ್ಲಿ ಮೊದಲಿನಿಂದಲೂ ನಾವು ಹೇಳಿಕೊಂಡು ಬಂದಿದ್ದೇವೆ. ತಮಿಳುನಾಡಿನ ಡ್ಯಾಮ್ ಗಳಲ್ಲಿ ನೀರಿನ ಸ್ಟಾಕ್ ಹೆಚ್ಚಾಗಿದೆ. ಆದರೂ ರಾಜ್ಯ ಸರ್ಕಾರ ನೀರು ಬಿಡ್ತಾ ಇತ್ತು. ಈ ವಿಚಾರವನ್ನು ಕಾನೂನಾತ್ಮಕ ರೀತಿ, ಗಂಭೀರವಾಗಿ ತೆಗೆದುಕೊಂಡು ಸರ್ಕಾರ ಹೋರಾಟ ಮಾಡ್ತಾ ಇಲ್ಲ. ಜಲಾಶಯದಲ್ಲಿ ನೀರು ಖಾಲಿಯಾಗಿರುವುದರಿಂದ ಕಾವೇರಿ ಜಲಾನಯನ ಭಾಗದ ರೈತರು ಮತ್ತು ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಕಷ್ಟ ಆಗಲಿದೆ. ಇವತ್ತು ಕಾನೂನಾತ್ಮಕ ಹೋರಾಟ ಮಾಡೋದು ಮತ್ತು ತಮಿಳುನಾಡನ್ನ ಒಪ್ಪಿಸೋದು ಅಷ್ಟೇ ಪರಿಹಾರ.
ಆದರೆ ನಮ್ಮ ಸಿಎಂ ತಮಿಳುನಾಡಿನ ಸ್ಟಾಲಿನ್ ಅವರ ಜೊತೆಗೆ ಮಾತನಾಡೋಕೇ ತಯಾರಿಲ್ಲ. ಇಂಡಿಯಾ ಒಕ್ಕೂಟ ಅಂತ ಹೇಳ್ತಾರೆ, ಇವರು ನಮ್ಮ ನೀರಿನ ಹಕ್ಕಿನ ಬಗ್ಗೆ ತಮ್ಮವರ ಜೊತೆಗೇ ಮಾತನಾಡಲ್ಲ. ಸದ್ಯ ನೀರು ಬಿಡಲ್ಲ ಅನ್ನುವ ತಮ್ಮ ನಿಲುವಿಗೆ ಮುಖ್ಯಮಂತ್ರಿ ಗಟ್ಟಿಯಾಗಿ ನಿಲ್ಲಬೇಕು. ನಾವು ಈ ನಿಲುವಿನ ಬಗ್ಗೆ ಸರ್ಕಾರದ ಜೊತೆ ನಿಲ್ತೇವೆ. ಒಂದು ವೇಳೆ ಕಾವೇರಿ ನೀರು ಬಿಟ್ಟರೆ ನಾವು ಸರ್ಕಾರದ ವಿರುದ್ದ ಹೋರಾಟ ನಡೆಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
The government should have woken up when the pre-monsoon rains failed this time. Now they have delayed the declaration of drought. The government is delaying getting the report. Former Chief Minister Basavaraj Bommai said that the monsoon is over and it is not possible to help the farmers.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm