ಬ್ರೇಕಿಂಗ್ ನ್ಯೂಸ್
16-09-23 04:05 pm Mangalore Correspondent ಕರಾವಳಿ
ಮಂಗಳೂರು, ಸೆ.16: ವಾರದ ಹಿಂದೆ ನಾಗರ ಹಾವಿಗೆ ಡೀಸೆಲ್ ಎರಚಿ ಹಾವನ್ನು ನರಳುವಂತೆ ಮಾಡಿದ್ದ ವ್ಯಕ್ತಿಯೊಬ್ಬ ಈಗ ಆ ಹಾವಿನಂತೆಯೇ ಉರಿಯಿಂದ ನರಳತೊಡಗಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿಯ ಬಹುಮಹಡಿ ಕಟ್ಟಡದ ಸಮೀಪ ಸೆ.5ರಂದು ನಾಗರ ಹಾವು ಕಂಡುಬಂದಿತ್ತು. ಕಟ್ಟಡದಲ್ಲಿ ವಾಚ್ ಮೇನ್ ಆಗಿದ್ದ ಬೆಳಗಾವಿ ಮೂಲದ ವ್ಯಕ್ತಿ ಹಾವಿಗೆ ಡೀಸೆಲ್ ಎರಚಿದ್ದು, ಕೂಡಲೇ ಹಾವು ಮೈ ಉರಿಯಿಂದ ಒದ್ದಾಡತೊಡಗಿತ್ತು. ಸ್ಥಳೀಯರು ಬಳಿಕ ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ವಿಷಯ ತಿಳಿಸಿದ್ದರು. ಅವರು ಹಾವನ್ನು ಹಿಡಿದು ಚಿಕಿತ್ಸೆ ನೀಡಿದ್ದಲ್ಲದೆ, ಮೈಗೆ ಶಾಂಪೂ ಹಾಕಿ ತೊಳೆದು ಶುಚಿ ಮಾಡಿದ್ದರು. ಆನಂತರ ಹಾವನ್ನು ಕಾಡಿಗೆ ಬಿಟ್ಟು ಬಂದಿದ್ದರು.
ಆದರೆ ಹಾವಿಗೆ ಡಿಸೇಲ್ ಎರಚಿದ್ದ ಕಾರ್ಮಿಕ ವ್ಯಕ್ತಿಗೆ ವಾರ ಕಳೆಯುವಷ್ಟರಲ್ಲಿ ಮೈ ಉರಿ ಬರತೊಡಗಿದೆ. ಮೈಯಲ್ಲಿ ಕೆಂಪು ಬೊಕ್ಕ ಕಂಡುಬಂದಿದ್ದು ಉರಿಯಿಂದ ನರಳಲು ಶುರು ಮಾಡಿದ್ದ. ಬಳಿಕ ಆತನ ಕುಟುಂಬಸ್ಥರು ಊರಿಗೆ ಮರಳಲು ತಿಳಿಸಿದಂತೆ, ಕುಟುಂಬ ಸಮೇತ ವಾಚ್ ಮೆನ್ ಕೆಲಸ ಬಿಟ್ಟು ಊರಿಗೆ ತೆರಳಿದ್ದಾರೆ.
ತುಳುನಾಡಿನಲ್ಲಿ ನಾಗರ ಹಾವನ್ನು ದೇವರೆಂದೇ ಪೂಜಿಸುತ್ತಾರೆ. ಹಾವಿಗೆ ಕಲ್ಲು ಹೊಡೆಯುವುದು, ಬಿಸಿ ನೀರು ಎರಚಿದರೂ ದೋಷ ಬರುತ್ತೆ ಎಂಬ ನಂಬಿಕೆಯಿದೆ. ಬೆಳಗಾವಿಯ ವ್ಯಕ್ತಿ ಡೀಸೆಲ್ ಎರಚಿದ್ದರಿಂದ ಹಾವು ಉರಿಯಿಂದ ಸಾಯುವ ಸ್ಥಿತಿ ಬಂದಿತ್ತು. ಇದೇ ಕಾರಣದಿಂದ ಹಾವಿನ ದೋಷ ಆ ವ್ಯಕ್ತಿಗೆ ತಾಗಿದೆ ಎನ್ನುವ ಮಾತು ಸ್ಥಳೀಯರಿಂದ ಕೇಳಿಬಂದಿದೆ.
Mangalore Man suffers with burning sensation after throwing diesel on snake Cobra in Kinnigoli.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm