ಬ್ರೇಕಿಂಗ್ ನ್ಯೂಸ್
16-09-23 04:05 pm Mangalore Correspondent ಕರಾವಳಿ
ಮಂಗಳೂರು, ಸೆ.16: ವಾರದ ಹಿಂದೆ ನಾಗರ ಹಾವಿಗೆ ಡೀಸೆಲ್ ಎರಚಿ ಹಾವನ್ನು ನರಳುವಂತೆ ಮಾಡಿದ್ದ ವ್ಯಕ್ತಿಯೊಬ್ಬ ಈಗ ಆ ಹಾವಿನಂತೆಯೇ ಉರಿಯಿಂದ ನರಳತೊಡಗಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿಯ ಬಹುಮಹಡಿ ಕಟ್ಟಡದ ಸಮೀಪ ಸೆ.5ರಂದು ನಾಗರ ಹಾವು ಕಂಡುಬಂದಿತ್ತು. ಕಟ್ಟಡದಲ್ಲಿ ವಾಚ್ ಮೇನ್ ಆಗಿದ್ದ ಬೆಳಗಾವಿ ಮೂಲದ ವ್ಯಕ್ತಿ ಹಾವಿಗೆ ಡೀಸೆಲ್ ಎರಚಿದ್ದು, ಕೂಡಲೇ ಹಾವು ಮೈ ಉರಿಯಿಂದ ಒದ್ದಾಡತೊಡಗಿತ್ತು. ಸ್ಥಳೀಯರು ಬಳಿಕ ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ವಿಷಯ ತಿಳಿಸಿದ್ದರು. ಅವರು ಹಾವನ್ನು ಹಿಡಿದು ಚಿಕಿತ್ಸೆ ನೀಡಿದ್ದಲ್ಲದೆ, ಮೈಗೆ ಶಾಂಪೂ ಹಾಕಿ ತೊಳೆದು ಶುಚಿ ಮಾಡಿದ್ದರು. ಆನಂತರ ಹಾವನ್ನು ಕಾಡಿಗೆ ಬಿಟ್ಟು ಬಂದಿದ್ದರು.
ಆದರೆ ಹಾವಿಗೆ ಡಿಸೇಲ್ ಎರಚಿದ್ದ ಕಾರ್ಮಿಕ ವ್ಯಕ್ತಿಗೆ ವಾರ ಕಳೆಯುವಷ್ಟರಲ್ಲಿ ಮೈ ಉರಿ ಬರತೊಡಗಿದೆ. ಮೈಯಲ್ಲಿ ಕೆಂಪು ಬೊಕ್ಕ ಕಂಡುಬಂದಿದ್ದು ಉರಿಯಿಂದ ನರಳಲು ಶುರು ಮಾಡಿದ್ದ. ಬಳಿಕ ಆತನ ಕುಟುಂಬಸ್ಥರು ಊರಿಗೆ ಮರಳಲು ತಿಳಿಸಿದಂತೆ, ಕುಟುಂಬ ಸಮೇತ ವಾಚ್ ಮೆನ್ ಕೆಲಸ ಬಿಟ್ಟು ಊರಿಗೆ ತೆರಳಿದ್ದಾರೆ.
ತುಳುನಾಡಿನಲ್ಲಿ ನಾಗರ ಹಾವನ್ನು ದೇವರೆಂದೇ ಪೂಜಿಸುತ್ತಾರೆ. ಹಾವಿಗೆ ಕಲ್ಲು ಹೊಡೆಯುವುದು, ಬಿಸಿ ನೀರು ಎರಚಿದರೂ ದೋಷ ಬರುತ್ತೆ ಎಂಬ ನಂಬಿಕೆಯಿದೆ. ಬೆಳಗಾವಿಯ ವ್ಯಕ್ತಿ ಡೀಸೆಲ್ ಎರಚಿದ್ದರಿಂದ ಹಾವು ಉರಿಯಿಂದ ಸಾಯುವ ಸ್ಥಿತಿ ಬಂದಿತ್ತು. ಇದೇ ಕಾರಣದಿಂದ ಹಾವಿನ ದೋಷ ಆ ವ್ಯಕ್ತಿಗೆ ತಾಗಿದೆ ಎನ್ನುವ ಮಾತು ಸ್ಥಳೀಯರಿಂದ ಕೇಳಿಬಂದಿದೆ.
Mangalore Man suffers with burning sensation after throwing diesel on snake Cobra in Kinnigoli.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm