ಬ್ರೇಕಿಂಗ್ ನ್ಯೂಸ್
16-09-23 04:05 pm Mangalore Correspondent ಕರಾವಳಿ
ಮಂಗಳೂರು, ಸೆ.16: ವಾರದ ಹಿಂದೆ ನಾಗರ ಹಾವಿಗೆ ಡೀಸೆಲ್ ಎರಚಿ ಹಾವನ್ನು ನರಳುವಂತೆ ಮಾಡಿದ್ದ ವ್ಯಕ್ತಿಯೊಬ್ಬ ಈಗ ಆ ಹಾವಿನಂತೆಯೇ ಉರಿಯಿಂದ ನರಳತೊಡಗಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿಯ ಬಹುಮಹಡಿ ಕಟ್ಟಡದ ಸಮೀಪ ಸೆ.5ರಂದು ನಾಗರ ಹಾವು ಕಂಡುಬಂದಿತ್ತು. ಕಟ್ಟಡದಲ್ಲಿ ವಾಚ್ ಮೇನ್ ಆಗಿದ್ದ ಬೆಳಗಾವಿ ಮೂಲದ ವ್ಯಕ್ತಿ ಹಾವಿಗೆ ಡೀಸೆಲ್ ಎರಚಿದ್ದು, ಕೂಡಲೇ ಹಾವು ಮೈ ಉರಿಯಿಂದ ಒದ್ದಾಡತೊಡಗಿತ್ತು. ಸ್ಥಳೀಯರು ಬಳಿಕ ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ವಿಷಯ ತಿಳಿಸಿದ್ದರು. ಅವರು ಹಾವನ್ನು ಹಿಡಿದು ಚಿಕಿತ್ಸೆ ನೀಡಿದ್ದಲ್ಲದೆ, ಮೈಗೆ ಶಾಂಪೂ ಹಾಕಿ ತೊಳೆದು ಶುಚಿ ಮಾಡಿದ್ದರು. ಆನಂತರ ಹಾವನ್ನು ಕಾಡಿಗೆ ಬಿಟ್ಟು ಬಂದಿದ್ದರು.
ಆದರೆ ಹಾವಿಗೆ ಡಿಸೇಲ್ ಎರಚಿದ್ದ ಕಾರ್ಮಿಕ ವ್ಯಕ್ತಿಗೆ ವಾರ ಕಳೆಯುವಷ್ಟರಲ್ಲಿ ಮೈ ಉರಿ ಬರತೊಡಗಿದೆ. ಮೈಯಲ್ಲಿ ಕೆಂಪು ಬೊಕ್ಕ ಕಂಡುಬಂದಿದ್ದು ಉರಿಯಿಂದ ನರಳಲು ಶುರು ಮಾಡಿದ್ದ. ಬಳಿಕ ಆತನ ಕುಟುಂಬಸ್ಥರು ಊರಿಗೆ ಮರಳಲು ತಿಳಿಸಿದಂತೆ, ಕುಟುಂಬ ಸಮೇತ ವಾಚ್ ಮೆನ್ ಕೆಲಸ ಬಿಟ್ಟು ಊರಿಗೆ ತೆರಳಿದ್ದಾರೆ.
ತುಳುನಾಡಿನಲ್ಲಿ ನಾಗರ ಹಾವನ್ನು ದೇವರೆಂದೇ ಪೂಜಿಸುತ್ತಾರೆ. ಹಾವಿಗೆ ಕಲ್ಲು ಹೊಡೆಯುವುದು, ಬಿಸಿ ನೀರು ಎರಚಿದರೂ ದೋಷ ಬರುತ್ತೆ ಎಂಬ ನಂಬಿಕೆಯಿದೆ. ಬೆಳಗಾವಿಯ ವ್ಯಕ್ತಿ ಡೀಸೆಲ್ ಎರಚಿದ್ದರಿಂದ ಹಾವು ಉರಿಯಿಂದ ಸಾಯುವ ಸ್ಥಿತಿ ಬಂದಿತ್ತು. ಇದೇ ಕಾರಣದಿಂದ ಹಾವಿನ ದೋಷ ಆ ವ್ಯಕ್ತಿಗೆ ತಾಗಿದೆ ಎನ್ನುವ ಮಾತು ಸ್ಥಳೀಯರಿಂದ ಕೇಳಿಬಂದಿದೆ.
Mangalore Man suffers with burning sensation after throwing diesel on snake Cobra in Kinnigoli.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm