ಬ್ರೇಕಿಂಗ್ ನ್ಯೂಸ್
16-09-23 08:26 pm Mangalore Correspondent ಕರಾವಳಿ
ಮಂಗಳೂರು, ಸೆ.16: ರಾಜ್ಯ ಗುಪ್ತಚರ ಇಲಾಖೆಯ ಮಂಗಳೂರಿನ ಕೊಟ್ಟಾರದ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಾಜೇಶ್ ಬಿ.ಯು. (53) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಕೊಟ್ಟಾರದಲ್ಲಿರುವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ರಾಜೇಶ್ ಇಂದು ಮಧ್ಯಾಹ್ನ ಎದೆನೋವೆಂದು ಹೇಳಿ ಮಲಗಿದ್ದರು. ಕೂಡಲೇ ಇತರ ಸಿಬಂದಿ ನಿರ್ಲಕ್ಷ್ಯ ಮಾಡಬೇಡಿ ಅಂತ ಹೇಳಿ, ಅವರನ್ನು ಆಟೋದಲ್ಲಿ ಎಜೆಗೆ ಕರೆದೊಯ್ದಿದ್ದಾರೆ. ಈ ವೇಳೆ, ಸಹಜವಾಗಿದ್ದ ಅವರು ಮೊದಲ ಮಹಡಿಯಿಂದ ಕೆಳಗೆ ಇಳಿದು ಬಂದಿದ್ದಾರೆ. ಆಟೋದಲ್ಲಿದ್ದಾಗ ಆಸ್ಪತ್ರೆಗೆ ತೆರಳಿದ್ದ ತಾಯಿ ಜೊತೆಗೂ ಫೋನಲ್ಲಿ ಮಾತನಾಡಿದ್ದಾರೆ. ಎಜೆ ಆಸ್ಪತ್ರೆಯ ಹೊರಭಾಗದಲ್ಲಿ ಇಳಿಯುವ ವರೆಗೂ ಸಹಜ ಉಸಿರಾಟದಲ್ಲೇ ಇದ್ದರು. ಒಳಗೆ ಹೋದ ಕೆಲಹೊತ್ತಿನಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಮೂಲತಃ ವಾಮಂಜೂರು ನಿವಾಸಿಯಾಗಿದ್ದು ನಗರದ ಉರ್ವ ಮಾರಿಗುಡಿ ಬಳಿಯ ವೇಲ್ಸ್ ಪೇಟೆಯಲ್ಲಿ ಮನೆ ಹೊಂದಿದ್ದ ರಾಜೇಶ್ ಅವರ ಪತ್ನಿ ಪ್ರೇಮಾ ಮಂಗಳೂರಿನ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟ್ರಾರ್ ಹುದ್ದೆಯಲ್ಲಿದ್ದಾರೆ. ಏಕೈಕ ಮಗ ಎಂಸಿಎ ಕಲಿಯುತ್ತಿದ್ದಾರೆ.
1993ರಲ್ಲಿ ಪೊಲೀಸ್ ಇಲಾಖೆ ಸೇರಿದ್ದ ರಾಜೇಶ್, ಸುರತ್ಕಲ್, ಪಣಂಬೂರು ಸೇರಿ ಹಲವು ಕಡೆ ಕರ್ತವ್ಯ ನಿರ್ವಹಿಸಿದ್ದಾರೆ. ಗುಪ್ತಚರ ಇಲಾಖೆಯಲ್ಲಿ ಮೂರು ವರ್ಷಗಳಿಂದ ಎಎಸ್ಐ ಆಗಿದ್ದು ಇದೇ ತಿಂಗಳಲ್ಲಿ ಎಸ್ಐ ಆಗಿ ಭಡ್ತಿ ಪಡೆಯಲಿದ್ದರು. ಪ್ರಮೋಷನ್ ಲಿಸ್ಟ್ ನಲ್ಲಿ ಅವರ ಹೆಸರಿತ್ತು ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ.
Police Intellegence departmemt ASI Rajesh dies of heart attack while on duty in Mangalore. He was a native of Vamamjoor in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm