ಬ್ರೇಕಿಂಗ್ ನ್ಯೂಸ್
16-09-23 08:30 pm Mangalore Correspondent ಕರಾವಳಿ
ಮಂಗಳೂರು, ಸೆ.16: ಈ ಬಾರಿ ಗಣೇಶ ಚತುರ್ಥಿಗೆ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.19 ರಂದೇ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಾದ್ಯಂತ ಸೆ.18ರಂದು ಗಣೇಶ ಚತುರ್ಥಿ ರಜೆಯಿದ್ದರೆ, ಕರಾವಳಿಯಲ್ಲಿ ಮಾತ್ರ 19ರಂದು ಚೌತಿ ತಿಥಿಯ ಪ್ರಕಾರ ಗಣೇಶೋತ್ಸವ ಆಚರಣೆಯಾಗುತ್ತದೆ. ಹಾಗಾಗಿ, ಸಾರ್ವತ್ರಿಕ ರಜೆಯನ್ನು ಬದಲು ಮಾಡಬೇಕೆಂದು ಈ ಭಾಗದ ಜನಪ್ರತಿನಿಧಿಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು. ಅದರಂತೆ, ಸ್ಥಳೀಯ ಪರಿಸ್ಥಿತಿ ಅನುಸರಿಸಿ ರಜೆಯ ಬಗ್ಗೆ ನಿರ್ಧರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿನ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಮುಖ್ಯಮಂತ್ರಿ ಸೂಚನೆಯಂತೆ, ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿ ರಜೆಯನ್ನು ಮಾರ್ಪಡಿಸಿ ಸೆ.19 ರಂದು ರಜೆ ಘೋಷಿಸಿ ಆದೇಶ ಮಾಡಿದ್ದಾರೆ. ಶಾಲೆ, ಕಾಲೇಜು, ಇತರೇ ಸರ್ಕಾರಿ ಕಚೇರಿ, ಬ್ಯಾಂಕ್ ಎಲ್ಲ ಕಚೇರಿಗಳಿಗೂ ಇದು ಅನ್ವಯ ಆಗಲಿದೆ. ಎರಡು ದಿನಗಳ ಹಿಂದೆಯಷ್ಟೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ರಜೆಯನ್ನು ಮಾರ್ಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರೊಂದಿಗೆ ರಜೆಯ ಗೊಂದಲ ನಿವಾರಣೆ ಆದಂತಾಗಿದೆ.
Ganesh Chaturthi 2023, Mangalore and Udupi schools and colleges declared holiday from September 19.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm