ಬ್ರೇಕಿಂಗ್ ನ್ಯೂಸ್
16-09-23 09:22 pm Mangalore Correspondent ಕರಾವಳಿ
ಮಂಗಳೂರು, ಸೆ.16: ಕಾಂಗ್ರೆಸ್ ಸರ್ಕಾರ ಆರಂಭದಲ್ಲೇ ತಪ್ಪು ಹೆಜ್ಜೆಗಳನ್ನು ಇಟ್ಟಿದೆ. ಅಧಿಕಾರ ಕೊಟ್ಟ ತಪ್ಪಿಗೆ ಬೆಲೆ ಏರಿಕೆ ಬಿಸಿ ಜನರಿಗೆ ತಟ್ಟಿದೆ. ಕರೆಂಟ್, ಅಬಕಾರಿ, ನೋಂದಣಿ ಶುಲ್ಕ, ಬಸ್ ದರ ಹೆಚ್ಚಳ ಆಗಿದೆ. ಇದರ ಜೊತೆಗೆ ಬರವೂ ನಮ್ಮನ್ನ ಕಾಡ್ತಿದೆ. ಕಾಕತಾಳೀಯವೋ ಕಾಲ್ಗುಣವೋ ಗೊತ್ತಿಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ ಬರ ಬಂದಿದ್ದನ್ನು ನೋಡಿದ್ದೇವೆ. ಇದು ಕಾಕತಾಳೀಯ ಅಂತ ಹೇಳಲ್ಲ, ಇದು ಕಾಂಗ್ರೆಸ್ ಕಾಲ್ಗುಣವೂ ಹೌದು. ಹೀಗೆಂದು ಬಿಜೆಪಿ ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದಿನ ಕಾಂಗ್ರೆಸ್ ಆಡಳಿತದ ಅವಧಿಯಲ್ಲೂ ಬರ ಪರಿಸ್ಥಿತಿ ಬಂದಿದೆ. 1999, 2004, 2013 ಹೀಗೆ ಪ್ರತಿ ಬಾರಿಯೂ ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತಕ್ಕೇರಿದಾಗ, ಬರ ಕಾಣಿಸಿಕೊಂಡಿತ್ತು. ಇದನ್ನು ಮೂಢ ನಂಬಿಕೆ ಅನ್ನಕ್ಕಾಗಲ್ಲ. ಇವರ ಕಾಲ್ಗುಣ ಎನ್ನಬೇಕು ಎಂದರು.
ಇದರ ಜೊತೆಗೆ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನೋದು ಕಾಣ್ತಾ ಇದೆ. ಹರಿಪ್ರಸಾದ್ ಹೂಬ್ಲೋಟ್ ವಾಚ್, ಪಂಚೆಯೊಳಗಿನ ಖಾಕಿ ಚೆಡ್ಡಿ ಅಂತೆಲ್ಲ ಸಿದ್ದರಾಮಯ್ಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸದ್ಯ ಎಐಸಿಸಿ ಅವರಿಗೆ ನೋಟೀಸ್ ಕೊಟ್ಟಿದೆ. ಆದರೆ ಇವರ ಹಿಂದೆ ಡಿಕೆ ಶಿವಕುಮಾರ್ ಯೋಜನೆ ಇದೆ ಅಂತ ಹೇಳಲಾಗ್ತಿದೆ. ಈ ಮಧ್ಯೆ ರಾಜಣ್ಣ ಮೂರು ಜನ ಡಿಸಿಎಂ ಬಗ್ಗೆ ಮಾತನಾಡಿದ್ದಾರೆ. ಇವರ ಮಾತಿನ ಹಿಂದೆ ಸಿಎಂ ಸಿದ್ದರಾಮಯ್ಯ ಯೋಜನೆ ಇದೆ ಎನ್ನುವ ಮಾತು ಕೇಳಿಬರುತ್ತಿದೆ ಎಂದರು.
ಸಿದ್ದರಾಮಯ್ಯ ವಿರುದ್ಧ ಕೇಸು ದಾಖಲಿಸಿ
ಸಿದ್ದರಾಮಯ್ಯ ಮನುಸ್ಮೃತಿಯನ್ನು ಸಂವಿಧಾನಕ್ಕೆ ಹೇರುವ ಯತ್ನ ಆಗ್ತಿದೆ ಎಂದಿದ್ದಾರೆ. ದೇಶದಲ್ಲಿ ಸಾವಿರಾರು ರಾಜರು ಆಳ್ವಿಕೆ ನಡೆಸಿದ್ದಾರೆ. ಆದರೆ ಯಾವ ರಾಜರೂ ಮನುಸ್ಮೃತಿಯನ್ನ ಸಂವಿಧಾನ ಆಗಿ ಬಳಸಿಲ್ಲ. ಸದ್ಯ ಯಾವ ರಾಜ್ಯವೂ ಮನುಸ್ಮೃತಿಯನ್ನ ಆಡಳಿತದ ಭಾಗ ಮಾಡ್ತೀವಿ ಅಂತ ಹೇಳಿಲ್ಲ. ಹೀಗಿರುವಾಗ ಸಿದ್ದರಾಮಯ್ಯ ಯಾವ ಆಧಾರದ ಮೇಲೆ ಈ ಹೇಳಿಕೆ ಕೊಟ್ಟರು. ಸುಳ್ಳು ಸುದ್ದಿ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಬೇಕು ಅಂತ ಹೇಳಿದ್ರೀ, ಮನುಸ್ಮೃತಿ ಹೇರಿಕೆ ವಿಚಾರದಲ್ಲಿ ಮತ್ತೆ ಸಿದ್ದರಾಮಯ್ಯ ಸುಳ್ಖು ಹೇಳಿದ್ದಾರೆ. ಹೀಗಾಗಿ ಇದರ ಬಗ್ಗೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ಸುಮೋಟೋ ಕೇಸ್ ದಾಖಲಿಸಿ ಕ್ರಮ ಜರುಗಿಸಬೇಕು ಎಂದರು.
ಸರ್ಕಾರದ ಒಬ್ಬ ಸಚಿವ ಸುಧಾಕರ್ ದಲಿತರ ಮೇಲೆ ಜಾಗ ಕಬಳಿಸಿ ದೌರ್ಜನ್ಯ ಮಾಡಿದಾರೆ. ಪ್ರಕರಣ ದಾಖಲಾಗಿರೋವಾಗ ಅವರನ್ನು ಸಂಪುಟದಿಂದ ಕೈ ಬಿಟ್ಟು ತನಿಖೆ ಎದುರಿಸಲಿ. ಎಲ್ಲಾ ಖಾತೆಗಳ ಜಿಪಿಎ ತೆಗೊಂಡಂತೆ ಆಡ್ತಿರುವ ಪ್ರಿಯಾಂಕ ಖರ್ಗೆ, ಸುಧಾಕರ್ ವಿಚಾರದಲ್ಲಿ ಯಾಕೆ ಮಾತನಾಡ್ತಿಲ್ಲ ಎಂದು ಪ್ರಶ್ನಿಸಿದ ಸಿಟಿ ರವಿ, ವರ್ಗಾವಣೆ ವಿಚಾರದಲ್ಲಿ ಅಕ್ರಮ ನಡೀತಾ ಇದೆ. 115 ಅಧಿಕಾರಿಗಳನ್ನು ಜಾಗ ತೋರಿಸದೆ ವರ್ಗಾವಣೆ ಮಾಡಿದ್ದಾರೆ. ಕಪ್ಪ ಕಾಣಿಕೆ ಕೊಟ್ಟವರಿಗೆ ವರ್ಗಾವಣೆ ಮಾಡಿ ಜಾಗ ತೋರಿಸ್ತಾ ಇದಾರೆ. ಕಪ್ಪ ಕೊಡದವರಿಗೆ ಯಾವುದೇ ಜಾಗ ತೋರಿಸದೆ ವರ್ಗಾವಣೆ ಮಾಡ್ತಿದಾರೆ ಎಂದು ಟೀಕಿಸಿದರು.
ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದ್ರೆ, ಶಾಸಕ ವೇದವ್ಯಾಸ ಕಾಮತ್, ಮೋನಪ್ಪ ಭಂಡಾರಿ ಮತ್ತಿತರರಿದ್ದರು.
People in Karnataka facing wrath of rising prices under Congress says C T Ravi in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm